tourist attack 2025
ನವದೆಹಲಿ: ಸಿಎಂ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಕಾಶ್ಮೀರಕ್ಕೆ ತೆರಳಿರುವ ಸಚಿವ ಸಂತೋಷ್ ಲಾಡ್ ಮೃತರ ಸಂಬಂಧಿಕರಿಗೆ ನೆರವು ನೀಡಿದ್ದಾರೆ. ಪಹಲ್ಗಾಮ್ನಲ್ಲಿ ಮೃತದೇಹಗಳನ್ನು ಇರಿಸಲಾಗಿದ್ದು, ಮೃತರ ಸಂಬಂಧಿಕರೊಂದಿಗೆ ಪಾರ್ಥಿವ ಶರೀರಗಳನ್ನು ಗುರುತಿಸಲು ನೆರವಾಗಿದ್ದಾರೆ.
ಮೃತದೇಹಗಳು ನಿಮ್ಮ ಸಂಬಂಧಿಕರೇ ಎಂಬುದನ್ನು ಖಚಿತಪಡಿಸಿಕೊಳ್ಳಿ, ನೀವು ಎಷ್ಟು ಜನ ಬಂದಿದ್ದೀರಿ ಎಂಬ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ. ಯಾವ ಮೃತದೇಹಗಳನ್ನು ಈಗಾಗಲೇ ನೋಡಲಾಗಿದೆ ಎಂಬುದನ್ನೂ ಸಹ ಅವರು ತಪಾಸಣೆ ಮಾಡುತ್ತಿದ್ದಾರೆ.
ಮೃತದೇಹಗಳನ್ನು ಇರಿಸಲಾಗಿರುವ ಪೆಟ್ಟಿಗೆಗಳ ಮೇಲೆ ದೂರವಾಣಿ ಕರೆಗಳನ್ನು ನಮೂದಿಸಲಾಗಿದ್ದು, ಸಂಬಂಧಿಕರಿಗೆ ಕರೆ ಮಾಡಿ ಸ್ವತಃ ಸಂತೋಷ್ ಲಾಡ್ ಅವರೇ ತಿಳಿಸುತ್ತಿದ್ದಾರೆ.
ಮೃತದೇಹಗಳನ್ನು ಕರ್ನಾಟಕಕ್ಕೆ ತರಲು ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗುವುದು. ತೊಂದರೆಗೊಳಗಾದವರಿಗೆ ಅಗತ್ಯ ನೆರವನ್ನು ಮಾಡಲಾಗುವುದು. ನಮ್ಮ ಸರ್ಕಾರ ಏಲ್ಲಾ ರೀತಿಯಲ್ಲಿ ಸಹಾಯ ಮಾಡಲಿದೆ ಎಂದು ಸಂತೋಷ್ ಲಾಡ್ ಅವರು ತಿಳಿಸಿದ್ದಾರೆ.
ಕರ್ನಾಟಕ ಸರ್ಕಾರದ ಕ್ರಮ:-
ಕರ್ನಾಟಕ ಸರ್ಕಾರವು ಕಾಶ್ಮೀರದಲ್ಲಿ ಸಿಕ್ಕಿರುವ ಕನ್ನಡಿಗರ ಕುಟುಂಬಗಳೊಂದಿಗೆ ಸಂಪರ್ಕದಲ್ಲಿದ್ದು, ಅವರಿಗೆ ಸೂಕ್ತ ಮಾಹಿತಿ ಮತ್ತು ಭರವಸೆ ನೀಡುತ್ತಿದೆ. ರಾಜ್ಯದಲ್ಲಿ 24/7 ಕಾರ್ಯನಿರ್ವಹಿಸುವ ಸಹಾಯವಾಣಿಯನ್ನು ಸ್ಥಾಪಿಸಲಾಗಿದ್ದು, ಕಾಶ್ಮೀರದ ಘಟನೆಯಿಂದ ಪ್ರಭಾವಿತರಾದ ಕುಟುಂಬಗಳು ಈ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಸರ್ಕಾರ ತಿಳಿಸಿದೆ.
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…
ಲಕ್ನೋ: ಜೂನ್.21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…
ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ…
ಎಚ್.ಎಸ್.ದಿನೇಶ್ಕುಮಾರ್ ಲಿಕ್ಕರ್ ಗ್ಯಾರೇಜ್, ಫಾಕ್ಸ್ ಡೆನ್ಗೆ ಮಾತ್ರ ಅನುಮತಿ; ನೋಟಿಸ್ ಜಾರಿ ಮಾಡಿ ಸುಮ್ಮನಾಗಿದ್ದ ಅಧಿಕಾರಿಗಳು?; ಅಬಕಾರಿ ಡಿಸಿ ಅಮಾನತ್ತಿಗೆ…
ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ…
‘ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ’ ಎಂಬ ಗಾದೆಯ ಮಾತು ನಿಜಕ್ಕೂ ಇಂದಿನ ಕಾಲಘಟ್ಟಕ್ಕೆ ಹೆಚ್ಚಾಗಿ ಅನ್ವಯಿಸುತ್ತದೆ. ಏಕೆಂದರೆ ಸಮಯ ಪಾಲನೆ…