ದೇಶ- ವಿದೇಶ

ಪಹಲ್ಗಾಮ್‌ ದಾಳಿ : ಕಾಶ್ಮೀರದಲ್ಲಿ ಕನ್ನಡಿಗರಿಗೆ ನೆರವು ನೀಡುತ್ತಿರುವ ಸಚಿವ ಸಂತೋಷ್‌ ಲಾಡ್‌

ನವದೆಹಲಿ: ಸಿಎಂ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಕಾಶ್ಮೀರಕ್ಕೆ ತೆರಳಿರುವ ಸಚಿವ ಸಂತೋಷ್‌ ಲಾಡ್‌ ಮೃತರ ಸಂಬಂಧಿಕರಿಗೆ ನೆರವು ನೀಡಿದ್ದಾರೆ. ಪಹಲ್ಗಾಮ್‌ನಲ್ಲಿ ಮೃತದೇಹಗಳನ್ನು ಇರಿಸಲಾಗಿದ್ದು, ಮೃತರ ಸಂಬಂಧಿಕರೊಂದಿಗೆ ಪಾರ್ಥಿವ ಶರೀರಗಳನ್ನು ಗುರುತಿಸಲು ನೆರವಾಗಿದ್ದಾರೆ.

ಮೃತದೇಹಗಳು ನಿಮ್ಮ ಸಂಬಂಧಿಕರೇ ಎಂಬುದನ್ನು ಖಚಿತಪಡಿಸಿಕೊಳ್ಳಿ, ನೀವು ಎಷ್ಟು ಜನ ಬಂದಿದ್ದೀರಿ ಎಂಬ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ. ಯಾವ ಮೃತದೇಹಗಳನ್ನು ಈಗಾಗಲೇ ನೋಡಲಾಗಿದೆ ಎಂಬುದನ್ನೂ ಸಹ ಅವರು ತಪಾಸಣೆ ಮಾಡುತ್ತಿದ್ದಾರೆ.

ಮೃತದೇಹಗಳನ್ನು ಇರಿಸಲಾಗಿರುವ ಪೆಟ್ಟಿಗೆಗಳ ಮೇಲೆ ದೂರವಾಣಿ ಕರೆಗಳನ್ನು ನಮೂದಿಸಲಾಗಿದ್ದು, ಸಂಬಂಧಿಕರಿಗೆ ಕರೆ ಮಾಡಿ ಸ್ವತಃ ಸಂತೋಷ್‌ ಲಾಡ್‌ ಅವರೇ ತಿಳಿಸುತ್ತಿದ್ದಾರೆ.

ಮೃತದೇಹಗಳನ್ನು ಕರ್ನಾಟಕಕ್ಕೆ ತರಲು ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗುವುದು. ತೊಂದರೆಗೊಳಗಾದವರಿಗೆ ಅಗತ್ಯ ನೆರವನ್ನು ಮಾಡಲಾಗುವುದು. ನಮ್ಮ ಸರ್ಕಾರ ಏಲ್ಲಾ ರೀತಿಯಲ್ಲಿ ಸಹಾಯ ಮಾಡಲಿದೆ ಎಂದು ಸಂತೋಷ್‌ ಲಾಡ್‌ ಅವರು ತಿಳಿಸಿದ್ದಾರೆ.

ಕರ್ನಾಟಕ ಸರ್ಕಾರದ ಕ್ರಮ:-
ಕರ್ನಾಟಕ ಸರ್ಕಾರವು ಕಾಶ್ಮೀರದಲ್ಲಿ ಸಿಕ್ಕಿರುವ ಕನ್ನಡಿಗರ ಕುಟುಂಬಗಳೊಂದಿಗೆ ಸಂಪರ್ಕದಲ್ಲಿದ್ದು, ಅವರಿಗೆ ಸೂಕ್ತ ಮಾಹಿತಿ ಮತ್ತು ಭರವಸೆ ನೀಡುತ್ತಿದೆ. ರಾಜ್ಯದಲ್ಲಿ 24/7 ಕಾರ್ಯನಿರ್ವಹಿಸುವ ಸಹಾಯವಾಣಿಯನ್ನು ಸ್ಥಾಪಿಸಲಾಗಿದ್ದು, ಕಾಶ್ಮೀರದ ಘಟನೆಯಿಂದ ಪ್ರಭಾವಿತರಾದ ಕುಟುಂಬಗಳು ಈ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಸರ್ಕಾರ ತಿಳಿಸಿದೆ.

ಆಂದೋಲನ ಡೆಸ್ಕ್

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

45 mins ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

51 mins ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

54 mins ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

56 mins ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

58 mins ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

1 hour ago