ಚೆನ್ನೈ : ಕರೂರ್ ಕಾಲ್ತುಳಿತದ ಪ್ರಕರಣದ ತನಿಖೆಯನ್ನು ಸಿಬಿಐ ಆರಂಭಿಸಿದೆ.
ನಟ,ರಾಜಕಾರಣಿ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (ಟಿವಿಕೆ) ರಾಜಕೀಯ ರ್ಯಾಲಿಯಲ್ಲಿ 41 ಜನರು ಸಾವನ್ನಪ್ಪಿದ ಕರೂರ್ ಕಾಲ್ತುಳಿತದ ತನಿಖೆಯನ್ನು ಸಿಬಿಐ ವಹಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತಮಿಳುನಾಡಿನ ಕರೂರಿನ ವೇಲುಸಾಮಿಪುರಂನಲ್ಲಿರುವ ಸ್ಥಳಕ್ಕೆ ಸಿಬಿಐನ ವಿಶೇಷ ತಂಡ ಈಗಾಗಲೇ ಭೇಟಿ ನೀಡಿದೆ ಎಂದು ಅವರು ಹೇಳಿದರು.
ಇದನ್ನು ಓದಿ : ಕರೂರ್ ಕಾಲ್ತುಳಿತ ದುರಂತ ಪ್ರಕರಣ: ನಾಳೆ ನಟ ವಿಜಯ್ರಿಂದ ಸಂತ್ರಸ್ತ ಕುಟುಂಬಗಳ ಭೇಟಿ
ನಿಯಮದಂತೆ, ಸಿಬಿಐ ರಾಜ್ಯ ಪೊಲೀಸರ ಎಫ್ಐಆರ್ ಅನ್ನು ಮರು ನೋಂದಾಯಿಸಿದೆ ಮತ್ತು ಬೆಳವಣಿಗೆಯ ಬಗ್ಗೆ ಸ್ಥಳೀಯ ನ್ಯಾಯಾಲಯಕ್ಕೆ ತಿಳಿಸಿದೆ ಎಂದು ಅವರು ಹೇಳಿದರು. ತಮಿಳಗ ವೆಟ್ರಿ ಕಳಗಂ (ಟಿವಿಕೆ) ಸ್ವತಂತ್ರ ತನಿಖೆಗಾಗಿ ಸಲ್ಲಿಸಿದ ಅರ್ಜಿಯ ಮೇರೆಗೆ ಸುಪ್ರೀಂ ಕೋರ್ಟ್ ಈ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಿದೆ.
ತನಿಖೆಯನ್ನು ವಹಿಸಿಕೊಳ್ಳಲು ಹಿರಿಯ ಅಧಿಕಾರಿಯನ್ನು ನೇಮಿಸಲು ಮತ್ತು ಅಧಿಕಾರಿಯ ಸಹಾಯಕ್ಕಾಗಿ ಇತರ ಕೆಲವು ಅಧಿಕಾರಿಗಳನ್ನು ನೇಮಿಸಲು ಸುಪ್ರೀಂ ಕೋರ್ಟ್ ಸಿಬಿಐ ನಿರ್ದೇಶಕರಿಗೆ ನಿರ್ದೇಶನ ನೀಡಿತ್ತು. ಸಿಬಿಐ ತನಿಖೆಯ ಮೇಲ್ವಿಚಾರಣೆಗಾಗಿ ನ್ಯಾಯಾಲಯವು ಮಾಜಿ ಸುಪ್ರೀಂ ಕೋರ್ಟ್ ನ್ಯಾಯಾಧೀಶ ಅಜಯ್ ರಸ್ತೋಗಿ ನೇತೃತ್ವದಲ್ಲಿ ಮೂವರು ಸದಸ್ಯರ ಮೇಲ್ವಿಚಾರಣಾ ಸಮಿತಿಯನ್ನು ಸಹ ರಚಿಸಿತು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…