ಕರೂರಿನಲ್ಲಿ ಕಾಲ್ತುಳಿತ ಪ್ರಕರಣ: ನಟ ವಿಜಯ್‌ ಮೊದಲ ಪ್ರತಿಕ್ರಿಯೆ

ಚೆನ್ನೈ: ತಮಿಳುನಾಡಿನ ಕರೂರಿನಲ್ಲಿ ನಡೆದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ತಮಿಳಿಗ ವೆಟ್ರಿ ಕಳಗಂ ಪಕ್ಷದ ಸಂಸ್ಥಾಪಕ ಹಾಗೂ ನಟ ವಿಜಯ್‌ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

ತಮಿಳುನಾಡಿನ ಕರೂರಿನಲ್ಲಿ ನಟ ವಿಜಯ್‌ ಅವರ ರಾಜಕೀಯ ರ್ಯಾಲಿಯಲ್ಲಿ ಕಾಲ್ತುಳಿತ ಸಂಭವಿಸಿ 41 ಜನರು ಸಾವನ್ನಪ್ಪಿದ್ದರು. ಘಟನೆಯಲ್ಲಿ ನೂರಾರು ಜನರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ: http://ಓದುಗರ ಪತ್ರ: ಸರ್ಕಾರಿ ಕಚೇರಿಗಳಲ್ಲಿ ಸ್ಪಾಂಜ್ ಕಪ್ ಉಪಯೋಗಿಸಿ

ಘಟನೆ ಬಗ್ಗೆ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ನಟ ವಿಜಯ್‌ ಅವರು, ನನ್ನ ಜೀವನದಲ್ಲಿ ಇಂತಹ ನೋವಿನ ಸ್ಥಿತಿ ನೋಡಿರಲಿಲ್ಲ. ಕಾಲ್ತುಳಿತ ದುರಂತದಿಂದ ಮನಸ್ಸಿಗೆ ತುಂಬಾ ನೋವಾಗಿದೆ. ನನ್ನನ್ನು ನೋಡಿ ಅಭಿಮಾನಿಗಳು ರ್ಯಾಲಿಗೆ ಬಂದಿದ್ದರು. ಈ ವೇಳೆ ಘಟನೆ ನಡೆದಿದೆ. ನನ್ನನ್ನು ಟಾರ್ಗೆಟ್‌ ಮಾಡಿ. ಆದರೆ ಜನರನ್ನು ಟಾರ್ಗೆಟ್‌ ಮಾಡಬೇಡಿ ಎಂದು ತಮಿಳುನಾಡು ಸಿಎಂ ಸ್ಟಾಲಿನ್‌ಗೆ ನೇರ ಎಚ್ಚರಿಕೆ ನೀಡಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಘಟನೆ ಯಾಕೆ ಸಂಭವಿಸಿತು ಎಂದು ಗೊತ್ತಾಗುತ್ತದೆ. ಶೀಘ್ರದಲ್ಲಿಯೇ ಎಲ್ಲಾ ಸತ್ಯ ಹೊರಬರಲಿದೆ. ಅತೀ ಶೀಘ್ರದಲ್ಲೇ ಗಾಯಾಳುಗಳನ್ನು ಭೇಟಿಯಾಗಿ ಸಾಂತ್ವನ ಹೇಳುತ್ತೇನೆ ಎಂದರು.

ಇನ್ನು ಮುಖ್ಯಮಂತ್ರಿಗಳೇ ನಾನು ನಿಮ್ಮಲ್ಲಿ ಒಂದು ವಿನಂತಿ ಮಾಡುತ್ತೇನೆ. ನೀವು ನನ್ನ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಬಹುದು. ಆದರೆ ಕಾರ್ಯಕರ್ತರ ಮೇಲೆ ಅಲ್ಲ. ನನ್ನ ಟಿವಿಕೆ ಕಚೇರಿಗೆ ಬಂದು ಕ್ರಮ ಕೈಗೊಳ್ಳಬಹುದು. ದುರಂತದ ಬಗ್ಗೆ ಎಲ್ಲಾ ಸತ್ಯಗಳು ಶೀಘ್ರದಲ್ಲೇ ಹೊರಬರಲಿದೆ ಎಂದು ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

3 hours ago

ನಾಳೆಯೊಳಗೆ ಪ್ರಯಾಣಿಕರಿಗೆ ಮರುಪಾವತಿ ಮಾಡಿ: ಇಂಡಿಗೋ ಏರ್‌ಲೈನ್ಸ್‌ಗೆ ಗಡುವು ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…

3 hours ago

ಡಿ.ಕೆ.ಶಿವಕುಮಾರ್‌ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…

4 hours ago

ನನ್ನನ್ನು ಹೆದರಿಸ್ತೀನಿ ಅಂದ್ರೆ ಅದು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಹಾಸನ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್‌ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…

4 hours ago

ಹೇಮಾವತಿ ಜಲಾಶಯದ ಬಳಿ ಉದ್ಯಾನವನ ನಿರ್ಮಿಸಲು ಸಿಎಂ ಸಿದ್ದರಾಮಯ್ಯ ಭರವಸೆ

ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…

5 hours ago

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

5 hours ago