ಕರೂರಿನಲ್ಲಿ ಕಾಲ್ತುಳಿತ ಪ್ರಕರಣ: ನಟ ವಿಜಯ್‌ ಮೊದಲ ಪ್ರತಿಕ್ರಿಯೆ

ಚೆನ್ನೈ: ತಮಿಳುನಾಡಿನ ಕರೂರಿನಲ್ಲಿ ನಡೆದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ತಮಿಳಿಗ ವೆಟ್ರಿ ಕಳಗಂ ಪಕ್ಷದ ಸಂಸ್ಥಾಪಕ ಹಾಗೂ ನಟ ವಿಜಯ್‌ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

ತಮಿಳುನಾಡಿನ ಕರೂರಿನಲ್ಲಿ ನಟ ವಿಜಯ್‌ ಅವರ ರಾಜಕೀಯ ರ್ಯಾಲಿಯಲ್ಲಿ ಕಾಲ್ತುಳಿತ ಸಂಭವಿಸಿ 41 ಜನರು ಸಾವನ್ನಪ್ಪಿದ್ದರು. ಘಟನೆಯಲ್ಲಿ ನೂರಾರು ಜನರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ: http://ಓದುಗರ ಪತ್ರ: ಸರ್ಕಾರಿ ಕಚೇರಿಗಳಲ್ಲಿ ಸ್ಪಾಂಜ್ ಕಪ್ ಉಪಯೋಗಿಸಿ

ಘಟನೆ ಬಗ್ಗೆ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ನಟ ವಿಜಯ್‌ ಅವರು, ನನ್ನ ಜೀವನದಲ್ಲಿ ಇಂತಹ ನೋವಿನ ಸ್ಥಿತಿ ನೋಡಿರಲಿಲ್ಲ. ಕಾಲ್ತುಳಿತ ದುರಂತದಿಂದ ಮನಸ್ಸಿಗೆ ತುಂಬಾ ನೋವಾಗಿದೆ. ನನ್ನನ್ನು ನೋಡಿ ಅಭಿಮಾನಿಗಳು ರ್ಯಾಲಿಗೆ ಬಂದಿದ್ದರು. ಈ ವೇಳೆ ಘಟನೆ ನಡೆದಿದೆ. ನನ್ನನ್ನು ಟಾರ್ಗೆಟ್‌ ಮಾಡಿ. ಆದರೆ ಜನರನ್ನು ಟಾರ್ಗೆಟ್‌ ಮಾಡಬೇಡಿ ಎಂದು ತಮಿಳುನಾಡು ಸಿಎಂ ಸ್ಟಾಲಿನ್‌ಗೆ ನೇರ ಎಚ್ಚರಿಕೆ ನೀಡಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಘಟನೆ ಯಾಕೆ ಸಂಭವಿಸಿತು ಎಂದು ಗೊತ್ತಾಗುತ್ತದೆ. ಶೀಘ್ರದಲ್ಲಿಯೇ ಎಲ್ಲಾ ಸತ್ಯ ಹೊರಬರಲಿದೆ. ಅತೀ ಶೀಘ್ರದಲ್ಲೇ ಗಾಯಾಳುಗಳನ್ನು ಭೇಟಿಯಾಗಿ ಸಾಂತ್ವನ ಹೇಳುತ್ತೇನೆ ಎಂದರು.

ಇನ್ನು ಮುಖ್ಯಮಂತ್ರಿಗಳೇ ನಾನು ನಿಮ್ಮಲ್ಲಿ ಒಂದು ವಿನಂತಿ ಮಾಡುತ್ತೇನೆ. ನೀವು ನನ್ನ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಬಹುದು. ಆದರೆ ಕಾರ್ಯಕರ್ತರ ಮೇಲೆ ಅಲ್ಲ. ನನ್ನ ಟಿವಿಕೆ ಕಚೇರಿಗೆ ಬಂದು ಕ್ರಮ ಕೈಗೊಳ್ಳಬಹುದು. ದುರಂತದ ಬಗ್ಗೆ ಎಲ್ಲಾ ಸತ್ಯಗಳು ಶೀಘ್ರದಲ್ಲೇ ಹೊರಬರಲಿದೆ ಎಂದು ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ಗಾಂಧಿ ಅಭಿಯಾನ ಅರಿವಿನ ಯಾನ : ತುಂಡು ಬಟ್ಟೆಯ ಫಕೀರ ಮತ್ತು ಇಂಗ್ಲೆಂಡ್ ಚಕ್ರವರ್ತಿ

ಡಾ. ಪ್ರಮೀಳಾದೇವಿ ಬಿ.ಕೆ ೧೯೩೧-೩೨ರಲ್ಲಿ ಗಾಂಧಿಜಿಯವರು ಉಪ್ಪಿನ ಸತ್ಯಾಗ್ರಹದ ನಂತರ ರೌಂಡ್ ಟೇಬಲ್ ಮಾತುಕತೆಗಾಗಿ ಇಂಗ್ಲೆಂಡಿಗೆ ಹೋದರು. ಈ ವೇಳೆಗಾಗಲೆ…

11 hours ago

ಗಾಂಧಿ ಅಭಿಯಾನ ಅರಿವಿನ ಯಾನ : ಚಾಮರಾಜನಗರ ಸೀಮೆಯಲ್ಲಿ ಗಾಂಧಿಯ ಪ್ರಭಾವ

ಚಾಮರಾಜನಗರ ಮೈಸೂರು ಜಿಯ ಒಂದು ಸಣ್ಣ ತಾಲ್ಲೂಕು ಕೇಂದ್ರವಾಗಿತ್ತು. ಸುಮಾರು ೯೦ ವರ್ಷಗಳ ಹಿಂದೆ ಸಣ್ಣ ಪಟ್ಟಣ. ೧೯೨೬ರಿಂದ ಇಲ್ಲಿಗೆ…

13 hours ago

ಇಂದು ಮೈಸೂರಿಗೆ ಮೋದಿ ಆಗಮನ : ವಿವೇಕ ಸ್ಮಾರಕ ಲೋಕಾರ್ಪಣೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದಾರೆ. ಸ್ವಾಮಿ ವಿವೇಕಾನಂದರ ಐತಿಹಾಸಿಕ…

13 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಹೊರದೇಶದ ಭಾಷೆಗಳನ್ನು ಕಲಿತೆ

ನೃತ್ಯ ಮುಂತಾದವುಗಳಲ್ಲಿ ನಾನು ನಡೆಸಿದ ಪ್ರಯೋಗಗಳಿಂದ ನಾನು ಉಚ್ಚೃಂಖಲ ಪ್ರವೃತ್ತಿಯುಳ್ಳವನಾಗಿದ್ದನೆಂದು ಯಾರೂ ತಿಳಿಯಬಾರದು. ಅದರಲ್ಲಿಯೂ ವಿವೇಕದ ಅಂಶ ಇದ್ದಿತೆಂಬುದು ವಾಚಕರಿಗೆ…

13 hours ago

ನಾಳೆ ಸಿಎಂ ಡಿ.ಕೆ.ಶಿವಕುಮಾರ್‌ರಿಂದ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು: ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…

1 day ago

ದಯವಿಟ್ಟು ಕರ್ನಾಟಕ ಬಂದ್‌ ಕೈಬಿಡಿ: ಸಿಎಂ ಡಿಕೆಶಿ ನಮ್ರತೆಯ ಮನವಿ

ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್‌ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸರ್ಕಾರದ ಪರವಾಗಿ ನಮ್ರತೆಯ ಮನವಿ…

1 day ago