karuru tamil actor vijay
ಚೆನ್ನೈ: ತಮಿಳುನಾಡಿನ ಕರೂರ್ನಲ್ಲಿ ಸಂಭವಿಸಿದ್ದ ಕಾಲ್ತುಳಿತ ದುರಂತದ ಒಂದು ತಿಂಗಳ ನಂತರ ನಟ ಹಾಗೂ ರಾಜಕಾರಣಿ ವಿಜಯ್ ಅವರು ನಾಳೆ ಸಂತ್ರಸ್ತರ ಕುಟುಂಬಗಳನ್ನು ಖಾಸಗಿಯಾಗಿ ಭೇಟಿ ಮಾಡಲಿದ್ದಾರೆ.
ಭೇಟಿಯ ಸಭೆಯು ಮಲ್ಲಪುರಂನ ಹೋಟೆಲ್ನಲ್ಲಿ ನಡೆಯಲಿದ್ದು, ಮಾಧ್ಯಮ ಸಿಬ್ಬಂದಿ ಅಥವಾ ಪಕ್ಷದ ಸದಸ್ಯರಿಗೆ ಈ ಕಾರ್ಯಕ್ರಮಕ್ಕೆ ಹಾಜರಾಗಲು ಅವಕಾಶವಿಲ್ಲ.
ಈ ಹಿಂದೆ ನಟ ವಿಜಯ್ ಅವರು ವಿಡಿಯೋ ಕರೆಗಳ ಮೂಲಕ ಘಟನೆಯಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳನ್ನು ವೈಯಕ್ತಿಕವಾಗಿ ತಲುಪಲು ಪ್ರಾರಂಭಿಸಿದ್ದರು.
ಇದನ್ನು ಓದಿ: ಮಾರುಕಟ್ಟೆಗಳಲ್ಲಿ ಸ್ಥಳೀಯ ವಸ್ತುಗಳ ಖರೀದಿ ಹೆಚ್ಚಳ: ಪ್ರಧಾನಿ ನರೇಂದ್ರ ಮೋದಿ ಸಂತಸ
ಕಳೆದ ಸೆಪ್ಟೆಂಬರ್.27ರಂದು ವಿಜಯ್ ರ್ಯಾಲಿಯ ಸಮಯದಲ್ಲಿ ಸಂಭವಿಸಿದ ದುರಂತವು 41 ಜನರನ್ನು ಬಲಿ ತೆಗೆದುಕೊಂಡಿತ್ತು. ಘಟನೆಯಲ್ಲಿ ನೂರನ್ನೂ ಹೆಚ್ಚು ಜನರು ಗಾಯಗೊಂಡಿದ್ದರು.
ಬಳಿಕ ಸಂತ್ರಸ್ತರ ಕುಟುಂಬದವರೊಂದಿಗೆ ವಿಜಯ್ ಅವರ ಪ್ರತಿಯೊಂದು ಕರೆಗಳು ಸುಮಾರು 20 ನಿಮಿಷಗಳ ಕಾಲ ನಡೆದವು. ಈ ಸಮಯದಲ್ಲಿ ಅವರು ಆಳವಾದ ಸಂತಾಪ ವ್ಯಕ್ತಪಡಿಸಿದ್ದರು.
ಕುಟುಂಬಗಳಿಗೆ ಸಹಾಯದ ಭರವಸೆ ಕೂಡ ನೀಡಿದ್ದರು. ಘಟನೆಯ ಒಂದು ದಿನದ ನಂತರ ನಟ ಹಾಗೂ ರಾಜಕಾರಣಿ ವಿಜಯ್ ಅವರು ಪ್ರತಿ ಮೃತರ ಕುಟುಂಬಕ್ಕೆ ತಲಾ 20 ಲಕ್ಷ ಪರಿಹಾರ ಘೋಷಣೆ ಮಾಡಿದ್ದರು.
ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…
15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…
ಮಲ್ಟಿಪ್ಲೆಕ್ಸ್ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್ನಲ್ಲಿ ಚಿತ್ರದ…
ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್ಐಆರ್ ಬಗ್ಗೆ ಹಲವಾರು ಅನುಮಾನ…
ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…