ದೇಶ- ವಿದೇಶ

ಕರೂರು ಭೀಕರ ಕಾಲ್ತುಳಿತ ದುರಂತ ಪ್ರಕರಣ: ಸಾವಿನ ಸಂಖ್ಯೆ 41ಕ್ಕೆ ಏರಿಕೆ

ಚೆನ್ನೈ: ನಟ ವಿಜಯ್‌ ಅವರ ಚುನಾವಣಾ ಪ್ರಚಾರ ರ್ಯಾಲಿಯಲ್ಲಿ ಕರೂರಿನಲ್ಲಿ ಸಂಭವಿಸಿದ್ದ ಭೀಕರ ಕಾಲ್ತುಳಿತ ದುರಂತದಲ್ಲಿ ಕ್ಷಣ ಕ್ಷಣಕ್ಕೂ ಸಾವಿನ ಸಂಖ್ಯೆ ಏರಿಕೆಯಾಗುತ್ತಿದೆ. ಮೃತಪಟ್ಟವರ ಸಂಖ್ಯೆ 41ಕ್ಕೆ ಏರಿಕೆಯಾಗಿದ್ದು, ನೂರಾರು ಜನರು ಗಾಯಗೊಂಡಿದ್ದಾರೆ.

ಮೃತಪಟ್ಟಿರುವ 41 ಜನರಲ್ಲಿ 35 ಜನರ ಗುರುತು ಪತ್ತೆಯಾಗಿದೆ. ಈರೋಡ್‌, ತಿರುಪುರ, ಧಾರಾಪುರಂ ಜಿಲ್ಲೆಯ ತಲಾ ಇಬ್ಬರು ಮೃತಪಟ್ಟಿದ್ದಾರೆ. ಕರೂರು ಜಿಲ್ಲೆಯವರೇ ಆದ 28 ಜನರು ಸಾವನ್ನಪ್ಪಿದ್ದಾರೆ. ಸೇಲಂನ ಓರ್ವ ಸಾವನ್ನಪ್ಪಿದ್ದಾರೆ.

ಇದನ್ನು ಓದಿ : ಕಾಲ್ತುಳಿತ | ‌ ನಟ ವಿಜಯ್ ತಪ್ಪಿಲ್ಲ, ಡಿಎಂಕೆ ಸರ್ಕಾರ ದೂಷಿಸಿದೆ ಬಿಜೆಪಿ ; ಪರಿಹಾರ ಘೋಷಣೆ

ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರಲ್ಲಿ ಕರೂರು ಜಿಲ್ಲೆಯವರೇ ಹೆಚ್ಚಿದ್ದಾರೆ. ಉಳಿದವರ ಗುರುತು ಪತ್ತೆಕಾರ್ಯ ನಡೆಸಲಾಗುತ್ತಿದೆ. ತಮಿಳಿಗ ವೆಟ್ರಿ ಕಳಗಂ ಮುಖ್ಯಸ್ಥ ವಿಜಯ್‌ ಅವರಿಗೆ ನಿನ್ನೆ ಬಾಂಬ್‌ ಬೆದರಿಕೆ ಕರೆ ಬಂದಿದ್ದು, ತಮಿಳುನಾಡಿನ ಚೆನ್ನೈನಲ್ಲಿರುವ ಅವರ ನಿವಾಸಕ್ಕೆ ಭದ್ರತೆ ಹೆಚ್ಚಳ ಮಾಡಲಾಗಿದೆ.

ಕರೂರಿನಲ್ಲಿ ಅವರ ರ್ಯಾಲಿಯಲ್ಲಿ ಸಂಭವಿಸಿದ ಭೀಕರ ಕಾಳ್ತುಳಿತದಲ್ಲಿ 41 ಜನರು ಸಾವನ್ನಪ್ಪಿದ ಒಂದು ದಿನದ ನಂತರ ಈ ಬೆಳವಣಿಗೆ ನಡೆದಿದ್ದು, ಘಟನೆಯಿಂದ ನಟ ವಿಜಯ್‌ ತೀವ್ರ ಬೇಸರಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಆಂದೋಲನ ಡೆಸ್ಕ್

Recent Posts

ಚಾಮರಾಜನಗರ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ

ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…

4 mins ago

ಬಿಆರ್‌ಟಿ ವ್ಯಾಪ್ತಿಯಲ್ಲಿ ಕಾಡಾನೆ ಕಳೇಬರ ಪತ್ತೆ

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…

25 mins ago

ತೊಟ್ಟಿಲುಶಾಸ್ತ್ರ, ಸಿದ್ದಪ್ಪಾಜಿ ಕಂಡಾಯೋತ್ಸವದಲ್ಲಿ ತಾರಾ, ಶಶಿಕುಮಾರ್ ಭಾಗಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದ ಶ್ರೀ ಮಕ್ಕಳೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ…

29 mins ago

ಬೆಳೆಗೆ ಸಿಗದ ಬೆಲೆ: ಯುವ ರೈತ ಆತ್ಮಹತ್ಯೆ

ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ…

2 hours ago

ಮುಂದಿನ ಒಂದು ವಾರಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…

3 hours ago

ಸಾಲಬಾಧೆ; ರೈತ ಆತ್ಮಹತ್ಯೆ

ರಾವಂದೂರು: ರೈತರೊಬ್ಬರು ತಾವು ಬೆಳೆದ ತಂಬಾಕಿಗೆ ಸೂಕ್ತ ಬೆಲೆ ಸಿಗದೆ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.…

4 hours ago