ದೇಶ- ವಿದೇಶ

ಕರೂರು ಭೀಕರ ಕಾಲ್ತುಳಿತ ದುರಂತ ಪ್ರಕರಣ: ಸಾವಿನ ಸಂಖ್ಯೆ 41ಕ್ಕೆ ಏರಿಕೆ

ಚೆನ್ನೈ: ನಟ ವಿಜಯ್‌ ಅವರ ಚುನಾವಣಾ ಪ್ರಚಾರ ರ್ಯಾಲಿಯಲ್ಲಿ ಕರೂರಿನಲ್ಲಿ ಸಂಭವಿಸಿದ್ದ ಭೀಕರ ಕಾಲ್ತುಳಿತ ದುರಂತದಲ್ಲಿ ಕ್ಷಣ ಕ್ಷಣಕ್ಕೂ ಸಾವಿನ ಸಂಖ್ಯೆ ಏರಿಕೆಯಾಗುತ್ತಿದೆ. ಮೃತಪಟ್ಟವರ ಸಂಖ್ಯೆ 41ಕ್ಕೆ ಏರಿಕೆಯಾಗಿದ್ದು, ನೂರಾರು ಜನರು ಗಾಯಗೊಂಡಿದ್ದಾರೆ.

ಮೃತಪಟ್ಟಿರುವ 41 ಜನರಲ್ಲಿ 35 ಜನರ ಗುರುತು ಪತ್ತೆಯಾಗಿದೆ. ಈರೋಡ್‌, ತಿರುಪುರ, ಧಾರಾಪುರಂ ಜಿಲ್ಲೆಯ ತಲಾ ಇಬ್ಬರು ಮೃತಪಟ್ಟಿದ್ದಾರೆ. ಕರೂರು ಜಿಲ್ಲೆಯವರೇ ಆದ 28 ಜನರು ಸಾವನ್ನಪ್ಪಿದ್ದಾರೆ. ಸೇಲಂನ ಓರ್ವ ಸಾವನ್ನಪ್ಪಿದ್ದಾರೆ.

ಇದನ್ನು ಓದಿ : ಕಾಲ್ತುಳಿತ | ‌ ನಟ ವಿಜಯ್ ತಪ್ಪಿಲ್ಲ, ಡಿಎಂಕೆ ಸರ್ಕಾರ ದೂಷಿಸಿದೆ ಬಿಜೆಪಿ ; ಪರಿಹಾರ ಘೋಷಣೆ

ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರಲ್ಲಿ ಕರೂರು ಜಿಲ್ಲೆಯವರೇ ಹೆಚ್ಚಿದ್ದಾರೆ. ಉಳಿದವರ ಗುರುತು ಪತ್ತೆಕಾರ್ಯ ನಡೆಸಲಾಗುತ್ತಿದೆ. ತಮಿಳಿಗ ವೆಟ್ರಿ ಕಳಗಂ ಮುಖ್ಯಸ್ಥ ವಿಜಯ್‌ ಅವರಿಗೆ ನಿನ್ನೆ ಬಾಂಬ್‌ ಬೆದರಿಕೆ ಕರೆ ಬಂದಿದ್ದು, ತಮಿಳುನಾಡಿನ ಚೆನ್ನೈನಲ್ಲಿರುವ ಅವರ ನಿವಾಸಕ್ಕೆ ಭದ್ರತೆ ಹೆಚ್ಚಳ ಮಾಡಲಾಗಿದೆ.

ಕರೂರಿನಲ್ಲಿ ಅವರ ರ್ಯಾಲಿಯಲ್ಲಿ ಸಂಭವಿಸಿದ ಭೀಕರ ಕಾಳ್ತುಳಿತದಲ್ಲಿ 41 ಜನರು ಸಾವನ್ನಪ್ಪಿದ ಒಂದು ದಿನದ ನಂತರ ಈ ಬೆಳವಣಿಗೆ ನಡೆದಿದ್ದು, ಘಟನೆಯಿಂದ ನಟ ವಿಜಯ್‌ ತೀವ್ರ ಬೇಸರಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಆಂದೋಲನ ಡೆಸ್ಕ್

Recent Posts

ಹೊರ್ಮುಜ್‌ ಜಲಸಂಧಿಯಿಂದ ನುಗ್ಗಿಬಂದ ಅಮೆರಿಕದ ಯುದ್ಧನೌಕೆಗಳು : ಇರಾನ್‌ನಿಂದ ದಾಳಿ

ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ಮೂರು ಯುದ್ಧನೌಕೆಗಳ ಮೇಲೆ ಇರಾನ್ ಕ್ಷಿಪಣಿ, ಡ್ರೋನ್ ಮತ್ತು ಸಣ್ಣ ದೋಣಿಗಳ ಮೂಲಕ…

41 mins ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ದೇಶದ ಪ್ರವಾಸೋದ್ಯಮವೂ, ಚಲನಚಿತ್ರ ಪ್ರವಾಸೋದ್ಯಮವೂ

ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದರು. ಅವರ ಈ ಪ್ರವಾಸದ ಹಿಂದೆ ತಮ್ಮ ರಾಜ್ಯದ ಪ್ರವಾಸೋದ್ಯಮವನ್ನು…

2 hours ago

ವೈಭವದ ವಸಂತ ಮಹಲ್‌ಗೆ ಬೇಕಿದೆ ಕಾಯಕಲ್ಪ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಗರಿಮೆಯ ಕಿರೀಟದಂತಿರುವ, ಅಚ್ಚ ಹಸಿರಿನ ನಡುವಿನ ೧೮೩ ವರ್ಷಗಳ ಇತಿಹಾಸವಿರುವ ಅರಮ ನೆಯೊಂದು…

4 hours ago

ವಿರಾಜಪೇಟೆ | ಅವಘಡಕ್ಕಾಗಿ ಕಾಯುತ್ತಿದೆ ಮಾರುಕಟ್ಟೆ ಹಳೇ ಕಟ್ಟಡ..!

ಕುಸಿಯುವ ಹಂತದಲ್ಲಿದ್ದರೂ ಕ್ರಮ ಕೈಗೊಳ್ಳದ ಸ್ಥಳೀಯ ಆಡಳಿತ; ಸೂಕ್ತ ಕ್ರಮಕ್ಕೆ ಒತ್ತಾಯ ಕಾಂಗೀರ ಬೋಪಣ್ಣ ವಿರಾಜಪೇಟೆ : ಪಟ್ಟಣದ ಖಾಸಗಿ…

4 hours ago

ಗುಂಡ್ಲುಪೇಟೆ | ಶಿಥಿಲಗೊಂಡಿರುವ ಅಂಗನವಾಡಿ, ಶಾಲೆ ಕಟ್ಟಡಗಳು

ಗುಂಡ್ಲುಪೇಟೆ ತಾಲ್ಲೂಕಿನ ಕೆಲ ಗ್ರಾಮಗಳ ಅಂಗನವಾಡು, ಶಾಲೆಗಳಲ್ಲಿ ಮೇಲ್ಚಾವಣೆ ಸೋರಿಕೆ ಗುಂಡ್ಲುಪೇಟೆ : ತಾಲ್ಲೂಕಿನ ಸೋಮಹಳ್ಳಿ ಗ್ರಾಮದ ಎರಡನೇ ಅಂಗನವಾಡಿಯ…

4 hours ago

ನಂಜನಗೂಡು ನಗರಸಭೆ ವಾರ್ಡ್ ವಿಂಗಡಣೆ ; ಒಂದರಲ್ಲಿ ಸಾವಿರ ; ಮತ್ತೊಂದರಲ್ಲಿ 6 ಸಾವಿರ ಜನ

ಅವೈಜ್ಞಾನಿಕ ಜನಸಂಖ್ಯೆ ವಿಂಗಡಣೆ ಬಗ್ಗೆ ಸಾರ್ವಜನಿಕರ ಆಕ್ಷೇಪ ಎಸ್. ಎಸ್. ಭಟ್ ನಂಜನಗೂಡು : ನಗರದಲ್ಲಿ ೧,೦೨೩ ಜನರಿಗೆ ಒಂದು…

4 hours ago