ದೇಶ- ವಿದೇಶ

ತಂದೆ ಕೆಸಿಆರ್‌ಗೆ ಸೆಡ್ಡು: ಹೊಸ ಟಿಆರ್‌ಎಸ್‌ ಪಕ್ಷ ಸ್ಥಾಪಿಸಿದ ಕವಿತಾ

ಹೈದರಾಬಾದ್: ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ಪುತ್ರಿ ಮತ್ತು ಮಾಜಿ ಸಂಸದೆ ಕೆ.ಕವಿತಾ ತಮ್ಮ ಹೊಸ ರಾಜಕೀಯ ಪಕ್ಷವನ್ನು ಘೋಷಿಸಿದ್ದಾರೆ.

ಕವಿತಾ ಅವರು ತಮ್ಮ ಪಕ್ಷಕ್ಕೆ ತೆಲಂಗಾಣ ರಾಷ್ಟ್ರ ಸೇನಾ ಎಂದು ಹೆಸರಿಸಿದ್ದಾರೆ. ಇದು ಈ ಹಿಂದೆ ಅವರ ತಂದೆ ಕೆಸಿಆರ್ ಅವರು ಬಳಸುತ್ತಿದ್ದ ‘ತೆಲಂಗಾಣ ರಾಷ್ಟ್ರ ಸಮಿತಿ’ ಹೆಸರನ್ನು ನೆನಪಿಸುವಂತಿದ್ದು, ತೆಲಂಗಾಣದ ಮೂಲ ಅಸ್ಮಿತೆಯನ್ನು ಮರಳಿ ಪಡೆಯುವ ಸಂಕೇತವಾಗಿ ಬಳಸಲಾಗಿದೆ.

ಕವಿತಾ ಅವರು ಸೆಪ್ಟೆಂಬರ್ 2025ರಲ್ಲಿ ಭಾರತ್ ರಾಷ್ಟ್ರ ಸಮಿತಿಯಿಂದ ಹೊರಬಂದಿದ್ದರು. ಆಂತರಿಕ ಭಿನ್ನಮತ ಮತ್ತು ಅವರ ಸಹೋದರ ಕೆ.ಟಿ. ರಾಮರಾವ್ ಅವರೊಂದಿಗಿನ ವೈಮನಸ್ಸಿನಿಂದಾಗಿ ಅವರನ್ನು ಪಕ್ಷದಿಂದ ಅಮಾನತುಗೊಳಿಸಲಾಗಿತ್ತು. ನಂತರ ಅವರು ಎಂಎಲ್‍ಸಿ ಸ್ಥಾನಕ್ಕೂ ರಾಜೀನಾಮೆ ನೀಡಿದ್ದರು.

ಇಂದು ಹೈದರಾಬಾದ್‍ನ ಮುನೀರ್‍ಬಾದ್‍ನಲ್ಲಿ ನಡೆದ ಸಮಾವೇಶದಲ್ಲಿ ಪಕ್ಷದ ಧ್ವಜ ಮತ್ತು ಸಿದ್ಧಾಂತಗಳನ್ನು ಅನಾವರಣಗೊಳಿಸಲಾಗಿದೆ. ಈ ಹೊಸ ಪಕ್ಷವು ನೇರವಾಗಿ ಬಿಆರ್‍ಎಸ್ ಮತ್ತು ಪ್ರಸ್ತುತ ಅಧಿಕಾರದಲ್ಲಿರುವ ಕಾಂಗ್ರೆಸ್ ಪಕ್ಷಗಳಿಗೆ ಸವಾಲು ಒಡ್ಡಲಿದೆ.

ಸುದ್ದಿಗೋಷ್ಠಿಯಲ್ಲಿ ಹೊಸ ಪಕ್ಷದ ರಚನೆಯ ಕುರಿತು ಮಾತನಾಡಿದ ಕವಿತಾ, ತೆಲಂಗಾಣ ರಾಜ್ಯವಾಗಿ 12 ವರ್ಷಗಳಿಗೂ ಹೆಚ್ಚು ಸಮಯ ಕಳೆದಿದೆ. ಆದರೆ ಸಾರ್ವಜನಿಕರ ನಿರೀಕ್ಷೆಗಳು ಇನ್ನೂ ಈಡೇರಿಲ್ಲ. 12 ವರ್ಷಗಳ ನಂತರವೂ, ತೆಲಂಗಾಣ ಚಳವಳಿಯ ಅಡಿಪಾಯವಾಗಿದ್ದ ನೀಲು, ನಿಧಿ, ನಿಯಮಕ್ಲು (ನೀರು, ಹಣ ಮತ್ತು ಉದ್ಯೋಗ) ಗಳನ್ನು ಕೊಡುವಲ್ಲಿ ಆಡಳಿತ ನಡೆಸಿದ ಪಕ್ಷಗಳು ವಿಫಲವಾಗಿದೆ ಎಂದು ಕವಿತಾ ಅವರು ಆರೋಪ ಮಾಡಿದರು.

ತಮ್ಮ ಪಕ್ಷವು ತೆಲಂಗಾಣದ ಧ್ವನಿ ಇಲ್ಲದವರಿಗೆ ಧ್ವನಿ ನೀಡುವ ವೇದಿಕೆಯಾಗಲಿದೆ. ಮುಖ್ಯವಾಗಿ ವಿದ್ಯಾರ್ಥಿಗಳು, ನಿರುದ್ಯೋಗಿಗಳು, ಮಹಿಳೆಯರು ಮತ್ತು ಹಿಂದುಳಿದ ವರ್ಗಗಳ ಹಿತರಕ್ಷಣೆಗಾಗಿ ಶ್ರಮಿಸಲಿದೆ ಎಂದು ಕವಿತಾ ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

7 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

7 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

7 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

10 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

10 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

10 hours ago