ರುದ್ರಪ್ರಯಾಗ : ಉತ್ತರಾಖಂಡದ ಗರ್ವಾಲ್ ಹಿಮಾಲಯದಲ್ಲಿರುವ ಕೇದಾರನಾಥ ದೇವಾಲಯದ ಬಾಗಿಲುಗಳನ್ನು ಗುರುವಾರದಿಂದ ಮುಚ್ಚಲಾಗಿದೆ.
ಚಳಿಗಾಲದ ಹಿನ್ನೆಲೆಯಲ್ಲಿ ಮುಂದಿನ ಆರು ತಿಂಗಳ ಕಾಲ, ಕೇದಾರನಾಥನನ್ನು ಅವರ ಚಳಿಗಾಲದ ನಿವಾಸವಾದ ಉಖಿಮಠದಲ್ಲಿ ಪೂಜಿಸಲಾಗುವುದು. ವಿಶೇಷ ಪೂಜೆಯ ನಂತರ, ಬೆಳಿಗ್ಗೆ ೮.೩೦ ಕ್ಕೆ ಬಾಬಾ ಕೇದಾರದ ಬಾಗಿಲುಗಳನ್ನು ಮುಚ್ಚಲಾಯಿತು ಎಂದು ಬದರಿನಾಥ-ಕೇದಾರನಾಥ ದೇವಾಲಯ ಸಮಿತಿ ಮೂಲಗಳು ತಿಳಿಸಿವೆ.
ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ನೂರಾರು ಮಂದಿಯೊಂದಿಗೆ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಆಡಳಿತ ಅಧಿಕಾರಿಗಳು, ದೇವಾಲಯ ಸಮಿತಿ ಅಧಿಕಾರಿಗಳು ಮತ್ತು ಹೆಚ್ಚಿನ ಸಂಖ್ಯೆಯ ಯಾತ್ರಿಕರು, ಪುರೋಹಿತರು ಉಪಸ್ಥಿತರಿದ್ದರು. ಬಾಗಿಲು ಮುಚ್ಚಿದ ನಂತರ, ಕೇದಾರನಾಥದ ಪಲ್ಲಕ್ಕಿಯು ಉಖಿಮಠದ ಓಂಕಾರೇಶ್ವರ ದೇವಾಲಯಕ್ಕೆ ವಿಧ್ಯುಕ್ತವಾಗಿ ಹೊರಟಿತು.
ಇದನ್ನು ಓದಿ: ಉತ್ತರಾಖಂಡದಲ್ಲಿ ಮಳೆಗೆ ಭೂಕುಸಿತ: ಕೇದಾರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ:
ಗುರುವಾಋ ರಾತ್ರಿ ರಾಂಪುರದಲ್ಲಿಯೇ ಉಳಿದು ಶುಕ್ರವಾರ ಗುಪ್ತಕಾಶಿಗೆ ಪಲ್ಲಕ್ಕಿ ಆಗಮಿಸಲಿದ್ದು, ಅಲ್ಲಿಂದ ಅಕ್ಟೋಬರ್ ೨೫ರಂದು ತನ್ನ ಚಳಿಗಾಲದ ಪೀಠವಾದ ಓಂಕಾರೇಶ್ವರ ದೇವಸ್ಥಾನಕ್ಕೆ ತೆರಳಲಿದೆ. ಮುಂದಿನ ವರ್ಷ ಏಪ್ರಿಲ್-ಮೇ ತಿಂಗಳಲ್ಲಿ ಕೇದಾರನಾಥ ದೇವಾಲಯದ ಬಾಗಿಲುಗಳು ಮತ್ತೆ ತೆರೆಯಲಿವೆ.
ಮಹಾಶಿವರಾತ್ರಿ ಹಬ್ಬದ ಸಂದರ್ಭದಲ್ಲಿ ದಿನಾಂಕ ಮತ್ತು ಸಮಯವನ್ನು ನಿರ್ಧರಿಸಲಾಗುವುದು. ರಾಜ್ಯ ಸರ್ಕಾರದ ಯೋಜಿತ ಪ್ರಯತ್ನಗಳಿಂದಾಗಿ ಈ ಬಾರಿ ಚಾರ್ಧಾಮ್ ಯಾತ್ರೆ ಯಶಸ್ವಿ ಮತ್ತು ಸುಗಮವಾಗಿ ಸಾಗಿದೆ ಎಂದು ಹೇಳಿದರು.
ಮನುಷ್ಯರಿಗೆ ಅಭಿವೃದ್ಧಿ, ಆನೆಗಳಿಗೆ ಅತಿಕ್ರಮಣ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಮೇ ೧೮ರಂದು ಕರ್ನಾಟಕದ ದುಬಾರೆ ಶಿಬಿರದಲ್ಲಿ ನಡೆದ ಆನೆಗಳ ಕಾಳಗ;…
ಕೆ.ವಿ.ಸ್ಲ್ಯಾನ್ಲಿ ಇದು ಎಂಬತ್ತರ ದಶಕದ ಕಥೆಯಲ್ಲದ ಜೀವನಗಾಥೆ. ದ್ವೀಪ ರಾಷ್ಟ್ರಸಿಂಹಳ ಮೂಲದ ಕುಟುಂಬವೊಂದು ಸಾಂಸ್ಕೃತಿಕ ಕರ್ನಾಟಕದಲ್ಲಿ ವಿಲೀನವಾಗಿ ಜೀವನ ನಡೆಸುತ್ತಿತ್ತು.…
ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…
ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…
ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು : ರಾಜ್ಯದ ಐದು ಹುಲಿ…