ದೇಶ- ವಿದೇಶ

ಕೇದಾರನಾಥ ದೇವಾಲಯ ಬಂದ್

ರುದ್ರಪ್ರಯಾಗ : ಉತ್ತರಾಖಂಡದ ಗರ್ವಾಲ್ ಹಿಮಾಲಯದಲ್ಲಿರುವ ಕೇದಾರನಾಥ ದೇವಾಲಯದ ಬಾಗಿಲುಗಳನ್ನು ಗುರುವಾರದಿಂದ ಮುಚ್ಚಲಾಗಿದೆ.

ಚಳಿಗಾಲದ ಹಿನ್ನೆಲೆಯಲ್ಲಿ ಮುಂದಿನ ಆರು ತಿಂಗಳ ಕಾಲ, ಕೇದಾರನಾಥನನ್ನು ಅವರ ಚಳಿಗಾಲದ ನಿವಾಸವಾದ ಉಖಿಮಠದಲ್ಲಿ ಪೂಜಿಸಲಾಗುವುದು. ವಿಶೇಷ ಪೂಜೆಯ ನಂತರ, ಬೆಳಿಗ್ಗೆ ೮.೩೦ ಕ್ಕೆ ಬಾಬಾ ಕೇದಾರದ ಬಾಗಿಲುಗಳನ್ನು ಮುಚ್ಚಲಾಯಿತು ಎಂದು ಬದರಿನಾಥ-ಕೇದಾರನಾಥ ದೇವಾಲಯ ಸಮಿತಿ ಮೂಲಗಳು ತಿಳಿಸಿವೆ.

ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ನೂರಾರು ಮಂದಿಯೊಂದಿಗೆ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಆಡಳಿತ ಅಧಿಕಾರಿಗಳು, ದೇವಾಲಯ ಸಮಿತಿ ಅಧಿಕಾರಿಗಳು ಮತ್ತು ಹೆಚ್ಚಿನ ಸಂಖ್ಯೆಯ ಯಾತ್ರಿಕರು, ಪುರೋಹಿತರು ಉಪಸ್ಥಿತರಿದ್ದರು. ಬಾಗಿಲು ಮುಚ್ಚಿದ ನಂತರ, ಕೇದಾರನಾಥದ ಪಲ್ಲಕ್ಕಿಯು ಉಖಿಮಠದ ಓಂಕಾರೇಶ್ವರ ದೇವಾಲಯಕ್ಕೆ ವಿಧ್ಯುಕ್ತವಾಗಿ ಹೊರಟಿತು.

ಇದನ್ನು ಓದಿ: ಉತ್ತರಾಖಂಡದಲ್ಲಿ ಮಳೆಗೆ ಭೂಕುಸಿತ: ಕೇದಾರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ:

ಗುರುವಾಋ ರಾತ್ರಿ ರಾಂಪುರದಲ್ಲಿಯೇ ಉಳಿದು ಶುಕ್ರವಾರ ಗುಪ್ತಕಾಶಿಗೆ ಪಲ್ಲಕ್ಕಿ ಆಗಮಿಸಲಿದ್ದು, ಅಲ್ಲಿಂದ ಅಕ್ಟೋಬರ್ ೨೫ರಂದು ತನ್ನ ಚಳಿಗಾಲದ ಪೀಠವಾದ ಓಂಕಾರೇಶ್ವರ ದೇವಸ್ಥಾನಕ್ಕೆ ತೆರಳಲಿದೆ. ಮುಂದಿನ ವರ್ಷ ಏಪ್ರಿಲ್-ಮೇ ತಿಂಗಳಲ್ಲಿ ಕೇದಾರನಾಥ ದೇವಾಲಯದ ಬಾಗಿಲುಗಳು ಮತ್ತೆ ತೆರೆಯಲಿವೆ.

ಮಹಾಶಿವರಾತ್ರಿ ಹಬ್ಬದ ಸಂದರ್ಭದಲ್ಲಿ ದಿನಾಂಕ ಮತ್ತು ಸಮಯವನ್ನು ನಿರ್ಧರಿಸಲಾಗುವುದು. ರಾಜ್ಯ ಸರ್ಕಾರದ ಯೋಜಿತ ಪ್ರಯತ್ನಗಳಿಂದಾಗಿ ಈ ಬಾರಿ ಚಾರ್‌ಧಾಮ್ ಯಾತ್ರೆ ಯಶಸ್ವಿ ಮತ್ತು ಸುಗಮವಾಗಿ ಸಾಗಿದೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

22 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

22 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

22 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

22 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

22 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

23 hours ago