ದೆಹಲಿ: ಕುತಂತ್ರ ಹಾಗೂ ಷಡ್ಯಂತ್ರ ಮಾಡಿದರೆ ನಾಯಕರಾಗಿ ಹೊರ ಹೊಮ್ಮಲ್ಲ. ಸಮುದಾಯದ ಜನರು ಇದನ್ನು ಒಪ್ಪುವುದಿಲ್ಲ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಕಾಂಗ್ರೆಸ್ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಕೆಂಪೇಗೌಡ ಜಯಂತಿ ಆಹ್ವಾನ ಪತ್ರಿಕೆಯಿಂದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೆಸರು ಕೈಬಿಡುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿ ನಾವು ಯಶಸ್ವಿಯಾಗಿದ್ದೇವೆ. ಕಾಂಗ್ರೆಸ್ ಬಗ್ಗೆ ನಮಗೆ ಅನುಕಂಪ ಇಲ್ಲ. ಆದರೆ ರಾಜ್ಯದ ಜನರ ಬಗ್ಗೆ ಅನುಕಂಪ ಇದೆ ಎಂದರು.
ಇನ್ನೂ ಮುಂದುವರಿದು ಮಾತನಾಡಿದ ಅವರು, ಡಿಸಿಎಂ ಡಿಕೆಶಿ ಸೊಕ್ಕು ಮುರಿಯಬೇಕು ಎಂಬ ಪ್ರಯತ್ನ ನಡೆಯುತ್ತಿದೆ. ಅವರನ್ನು ಕಟ್ಟಿಹಾಕುವ ಪ್ರಯತ್ನ ಮಾಡಲಾಗುತ್ತಿದೆ. ಡಿಕೆಶಿ ವಿರುದ್ಧ ಅವರ ಪಕ್ಷದೊಳಗೆ ಷಡ್ಯಂತ್ರ ನಡೆಯುತ್ತಿದೆ. ಹಾಗಾಗಿ ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಮಾಡಲು ಒತ್ತಡ ಹಾಕಲಾಗುತ್ತಿದೆ. ನನಗೆ ಇರುವ ಮಾಹಿತಿ ಪ್ರಕಾರ ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಮನವೊಲಿಸಿ ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಮಾಡುತ್ತಾರೆ ಎಂದರು.
ನವದೆಹಲಿ : ಅಸ್ಸಾಂ, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳಿಗೆ ಇಂದು ಬೆಳಿಗ್ಗೆ ಮತದಾನ ಆರಂಭವಾಗಿದೆ. ಜೊತೆಗೆ ನಾಗಾಲ್ಯಾಂಡ್ನ ಕೊರಿಡಾಂಗ್…
ಬಾಗಲಕೋಟೆ : ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಬೆಳಿಗ್ಗೆ ಮತದಾನ ಆರಂಭವಾಗಿದೆ. ಗುರುವಾರ, ಏಪ್ರಿಲ್ 9ರಂದು…
ಮೈಸೂರು: ಮೈಸೂರು ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್ಸಿ ನ್ಯಾಯಾಲಯದಲ್ಲಿ ವಿಚಾರಣೆ (ಜಯರಾಮು ಆರ್ ವಿರುದ್ಧ ಕರ್ನಾಟಕ ರಾಜ್ಯ) ಪ್ರಕರಣದಲ್ಲಿ…
ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ ಮೈಸೂರು ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಪ್ರವಾಸಿಗರ ಮನಗೆದ್ದಿದ್ದ ಹೆಮ್ಮೆಯ ಹುಲಿ…
ಬೆಂಗಳೂರು: 42ನೇ ಎಸಿಜೆಎಂ ನ್ಯಾಯಾಲಯ ಅರೆಸ್ಟ್ ವಾರೆಂಟ್ ಜಾರಿಯ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.…