ದೇಶ- ವಿದೇಶ

ಕೆಂಪೇಗೌಡ ಜಯಂತಿ ಆಹ್ವಾನ ಪತ್ರಿಕೆಯಲ್ಲಿ ಎಚ್‌ಡಿಕೆ ಹೆಸರಿಗೆ ಕೊಕ್;‌ ಸರ್ಕಾರದ ವಿರುದ್ಧ ವಿಜಯೇಂದ್ರ ಕಿಡಿ

ದೆಹಲಿ: ಕುತಂತ್ರ ಹಾಗೂ ಷಡ್ಯಂತ್ರ ಮಾಡಿದರೆ ನಾಯಕರಾಗಿ ಹೊರ ಹೊಮ್ಮಲ್ಲ. ಸಮುದಾಯದ ಜನರು ಇದನ್ನು ಒಪ್ಪುವುದಿಲ್ಲ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಕಾಂಗ್ರೆಸ್‌ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕೆಂಪೇಗೌಡ ಜಯಂತಿ ಆಹ್ವಾನ ಪತ್ರಿಕೆಯಿಂದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೆಸರು ಕೈಬಿಡುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿ ನಾವು ಯಶಸ್ವಿಯಾಗಿದ್ದೇವೆ. ಕಾಂಗ್ರೆಸ್‌ ಬಗ್ಗೆ ನಮಗೆ ಅನುಕಂಪ ಇಲ್ಲ. ಆದರೆ ರಾಜ್ಯದ ಜನರ ಬಗ್ಗೆ ಅನುಕಂಪ ಇದೆ ಎಂದರು.

ಇನ್ನೂ ಮುಂದುವರಿದು ಮಾತನಾಡಿದ ಅವರು, ಡಿಸಿಎಂ ಡಿಕೆಶಿ ಸೊಕ್ಕು ಮುರಿಯಬೇಕು ಎಂಬ ಪ್ರಯತ್ನ ನಡೆಯುತ್ತಿದೆ. ಅವರನ್ನು ಕಟ್ಟಿಹಾಕುವ ಪ್ರಯತ್ನ ಮಾಡಲಾಗುತ್ತಿದೆ. ಡಿಕೆಶಿ ವಿರುದ್ಧ ಅವರ ಪಕ್ಷದೊಳಗೆ ಷಡ್ಯಂತ್ರ ನಡೆಯುತ್ತಿದೆ. ಹಾಗಾಗಿ ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಮಾಡಲು ಒತ್ತಡ ಹಾಕಲಾಗುತ್ತಿದೆ. ನನಗೆ ಇರುವ ಮಾಹಿತಿ ಪ್ರಕಾರ ಸಿಎಂ ಸಿದ್ದರಾಮಯ್ಯ ಹೈಕಮಾಂಡ್‌ ಮನವೊಲಿಸಿ ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಮಾಡುತ್ತಾರೆ ಎಂದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ | ಮಾದರಿ ಗ್ರಾಮ ಸೌಂದಾಳ

ಮಹಾರಾಷ್ಟ್ರ ರಾಜ್ಯದ ಸೌಂದಾಳ ಗ್ರಾಮವು ದೇಶದಲ್ಲೇ ಮೊದಲ ಜಾತಿ ಮುಕ್ತ ಮನಸ್ಸುಳ್ಳ ಗ್ರಾಮ ಎಂಬ ಕೀರ್ತಿಯನ್ನು ಗಳಿಸಿ ನಮ್ಮ ಸಮಾಜಕ್ಕೆ…

4 mins ago

ಓದುಗರ ಪತ್ರ | ಪಿಯುಸಿ ಪರೀಕ್ಷೆ ಫಲಿತಾಂಶ ಹೆಚ್ಚಳಕ್ಕೆ ಶ್ರಮಿಸಿ

ಈ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗೆ ಸರ್ಕಾರಿ ಕಾಲೇಜುಗಳಿಂದ ಒಟ್ಟು 1.38 ಲಕ್ಷ ವಿದ್ಯಾರ್ಥಿಗಳು ಹಾಜರಾಗುತ್ತಿದ್ದಾರೆ, ಇವರಲ್ಲಿ 63,514 ವಿದ್ಯಾರ್ಥಿಗಳು…

12 mins ago

ಓದುಗರ ಪತ್ರ | ಹೆಚ್ಚುವರಿ ಆಂಬ್ಯುಲೆನ್ಸ್ ಸೌಲಭ್ಯ ಕಲ್ಪಿಸಿ

ಮೈಸೂರು ಜಿಲ್ಲೆಯ ಎಚ್‌.ಡಿ.ಕೋಟೆಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಸಾಕಷ್ಟು ಆಂಬ್ಯುಲೆನ್ಸ್ ಸೌಲಭ್ಯವಿಲ್ಲದೆ ತುರ್ತು ಸಂದರ್ಭದಲ್ಲಿ ರೋಗಿಗಳನ್ನು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲು ತೊಂದರೆಯಾಗಿದೆ.…

17 mins ago

ಬಿಜೆಪಿ- ಕಾಂಗ್ರೆಸ್ ನಡುವೆ ಏಕಿಷ್ಟು ದ್ವೇಷ?

ದೆಹಲಿ ಕಣ್ಣೋಟ ಶಿವಾಜಿ ಗಣೇಶನ್‌ ಸಂಸತ್ತಿನ ಎರಡು ವಾರಗಳ ಮೊದಲ ಹಂತದ ಬಜೆಟ್ ಅಧಿವೇಶನ ನಿಮುಗಿಯಿತು. ಮತ್ತೆ ಎರಡನೇ ಹಂತದ…

1 hour ago

ಇಂದಿನಿಂದ ಮಾ.13ರವರೆಗೆ ಕಪ್ಪಡಿ ಕ್ಷೇತ್ರದ ಜಾತ್ರೆ

• ರಾಜ್ಯದ ವಿವಿಧ ಕಡೆಗಳಿಂದ ಜನರ ಆಗಮನ • ಒಂದು ತಿಂಗಳ ಕಾಲ ನಡೆಯುವ ಜಾತ್ರಾ ಮಹೋತ್ಸವ ಭೇರ್ಯ ಮಹೇಶ್…

1 hour ago

ಹಾವಾಡಿಸುವ ಮುಬಾರಕನ ಬದುಕು ಪಾಡು

• ಅಕ್ಷತಾ ಮೂವತ್ತರ ಆಸುಪಾಸಿನ ಕಪ್ಪು ಜಾಕೆಟ್ ತೊಟ್ಟಿದ್ದ ಸ್ಪುರದ್ರೂಪಿ ಯುವಕ. ತನ್ನ ಹಿಪ್ಪಿ ಕೂದಲನ್ನು ಬೆರಳಿನಿಂದ ಸರಿಸಿ ಮತ್ತೆ…

2 hours ago