ದೆಹಲಿ: ಕುತಂತ್ರ ಹಾಗೂ ಷಡ್ಯಂತ್ರ ಮಾಡಿದರೆ ನಾಯಕರಾಗಿ ಹೊರ ಹೊಮ್ಮಲ್ಲ. ಸಮುದಾಯದ ಜನರು ಇದನ್ನು ಒಪ್ಪುವುದಿಲ್ಲ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಕಾಂಗ್ರೆಸ್ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಕೆಂಪೇಗೌಡ ಜಯಂತಿ ಆಹ್ವಾನ ಪತ್ರಿಕೆಯಿಂದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೆಸರು ಕೈಬಿಡುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿ ನಾವು ಯಶಸ್ವಿಯಾಗಿದ್ದೇವೆ. ಕಾಂಗ್ರೆಸ್ ಬಗ್ಗೆ ನಮಗೆ ಅನುಕಂಪ ಇಲ್ಲ. ಆದರೆ ರಾಜ್ಯದ ಜನರ ಬಗ್ಗೆ ಅನುಕಂಪ ಇದೆ ಎಂದರು.
ಇನ್ನೂ ಮುಂದುವರಿದು ಮಾತನಾಡಿದ ಅವರು, ಡಿಸಿಎಂ ಡಿಕೆಶಿ ಸೊಕ್ಕು ಮುರಿಯಬೇಕು ಎಂಬ ಪ್ರಯತ್ನ ನಡೆಯುತ್ತಿದೆ. ಅವರನ್ನು ಕಟ್ಟಿಹಾಕುವ ಪ್ರಯತ್ನ ಮಾಡಲಾಗುತ್ತಿದೆ. ಡಿಕೆಶಿ ವಿರುದ್ಧ ಅವರ ಪಕ್ಷದೊಳಗೆ ಷಡ್ಯಂತ್ರ ನಡೆಯುತ್ತಿದೆ. ಹಾಗಾಗಿ ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಮಾಡಲು ಒತ್ತಡ ಹಾಕಲಾಗುತ್ತಿದೆ. ನನಗೆ ಇರುವ ಮಾಹಿತಿ ಪ್ರಕಾರ ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಮನವೊಲಿಸಿ ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಮಾಡುತ್ತಾರೆ ಎಂದರು.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…