ಕೇರಳ: ಮೆದುಳು ತಿನ್ನುವ ವಿಚಿತ್ರ ಸೂಕ್ಷ್ಮಾಣು ಜೀವಿಗೆ ಕೇರಳದಲ್ಲಿ ಬಾಲಕನೊಬ್ಬ ಬಲಿಯಾಗಿದ್ದಾನೆ.
ಮಲಪ್ಪುರಂನ ಮೂಲದ ಬಾಲಕ ತೀವ್ರ ಅಸ್ವಸ್ಥತೆಯಿಂದ ನರಳುತ್ತಿದ್ದ ಕೇರಳದ ಕೋಳಿಕ್ಕೋಡ್ನ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರು,ಚಿಕಿತ್ಸೆ ಫಲಕಾರಿಯಾಗದೇ ಮರಣಹೊಂದಿದ್ದಾನೆ.
ಇದೊಂದು ನೀರಿನಿಂದ ಹರಡುವ ಸೋಂಕಾಗಿದ್ದು, ಈ ಸೋಂಕಿಗೆ ಒಳಗಾದವರು ಕೇವಲ ಐದು ದಿನಗಳ ಒಳಗಾಗಿ ಕೊನೆಯುಸಿರೆಳೆಯುತ್ತಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.
ಮಲಪ್ಪುರಂ ಕೆರೆಯೊಂದರಲ್ಲಿ ಸ್ಥಳೀಯ ಬಾಲಕ ಈಜಾಡಿದ್ದಾನೆ. ಈ ವೇಳೆ ವೈರಸ್ ಬಾಲಕನ ದೇಹ ಪ್ರವೇಶಿಸಿದೆ. ಬಳಿಕ ಆತ ಆಸ್ಪತ್ರೆಗೆ ದಾಖಲಾಗಿದ್ದಾನೆ. ಮೇ ತಿಂಗಳಿನಿಂದಾಚೆಗೆ ಈ ರೀತಿಯ ಸಾವು ನೋವುಗಳು ಪದೇ ಪದೇ ಸಂಭವಿಸುತ್ತಿದ್ದವು. ಕಳೆದ ಒಂದು ತಿಂಗಳಿನಲ್ಲಿಯೇ ಈ ರೀತಿಯಾಗಿ ಸಂಭವಿಸಿದ ಸಾವಿನ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.
ನೀರಿನ ಮೂಲಕ ಮನುಷ್ಯನ ದೇಹ ಒಕ್ಕುವ ಈ ವೈರಾಣು ಮೂಗಿನ ಮೂಲಕ ನೇರವಾಗಿ ಮೆದುಳನ್ನು ಪ್ರವೇಶಿಸುತ್ತದೆ. ಮೆದುಳಿನ ಜೀವಕೋಶದ ಮೇಲೆ ನೇರವಾಗಿ ದಾಳಿ ಮಾಡುವ ಈ ವೈರಾಣು ಕ್ರಮೇಣ ಇದರಿಂದಾಗಿ ಅಮೀಬಾಯಿಕ್ ಮೆನಿನ್ ಜೋ ಎನ್ ಕೆಫಾಲಿಟೀಸ್ ಎಂಬ ಕಾಯಿಲೆಗೆ ತುತ್ತಾಗಿ ರೋಗಿ ಸಾವನ್ನಪ್ಪುತ್ತಾನೆ.
ಈ ಬಗ್ಗೆ ಜಾಗೃತಿ ವಹಿಸಲು ಕೆರೆ, ನದಿ ಹಾಗೂ ಕೊಳಗಳಲ್ಲಿ ಈಜಾಡುವುದರಿಂದ ದೂರ ಉಳಿದರೆ ಈ ಸಮಸ್ಯೆ ಬಾರದಂತೆ ತಡೆಗಟ್ಟಬಹುದು ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಮಡಿಕೇರಿ: ಎಸ್ಡಿಪಿಐ ರಾಜ್ಯಾಧ್ಯಕ್ಷ ಮಜಿದ್ ಪ್ರಯಾಣಿಸುತ್ತಿದ್ದ ಕಾರ್ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಶಾತ್ ಪಾರಾಗಿದ್ದಾರೆ. ಕೊಡಗು ಜಿಲ್ಲೆ ಕುಶಾಲನಗರ ತಾಲ್ಲೂಕಿನ…
ಮೈಸೂರಿನ ಜಲಪುರಿ ಬಡಾವಣೆಯ ಪೊಲೀಸ್ ಆಸ್ಪತ್ರೆ ಮುಂಭಾಗದ ರಸ್ತೆ ತೀರಾ ಹದಗೆಟ್ಟಿದೆ. ಕಾಳಿಕಾಂಬ ರಸ್ತೆ ದುರಸ್ತಿ ಕಾಮಗಾರಿ ನಡೆಯುತ್ತಿರುವುದರಿಂದ ಕೆಲವು…
೨೦೦೮ರಲ್ಲಿ ಭಾರತದಲ್ಲಿ ಶುರುವಾದ ‘ಇಂಡಿಯನ್ ಪ್ರೀಮಿಯರ್ ಲೀಗ್’ (ಐಪಿಎಲ್) ಕ್ರಿಕೆಟ್ ಆಟವು ಇಡೀ ದೇಶದ ಗಮನ ಸೆಳೆದಿದೆ. ಐಪಿಎಲ್ ತಂಡಗಳಲ್ಲಿ …
ಬೆಂಗಳೂರಿನ ಜೀವನಾಡಿಯಾಗಿರುವ ಮೆಟ್ರೋ ರೈಲು ಪ್ರಯಾಣ ದರವನ್ನು ಹತ್ತು ತಿಂಗಳ ಅಲ್ಪಾವಽಯಲ್ಲಿ ಎರಡನೇ ಬಾರಿಗೆ ಏರಿಸಲು ಮುಂದಾಗಿರುವುದು ಅತ್ಯಂತ ಖಂಡನೀಯ. …
ಮೈಸೂರಿನ ರಾಮಕೃಷ್ಣ ನಗರದ ಒಳಚರಂಡಿಗೆ ಹೊಸದಾಗಿ ಪೈಪ್ಗಳನ್ನು ಅಳವಡಿಸಲು ರಸ್ತೆಯನ್ನು ಅಗೆಯಲಾಗಿತ್ತು. ಪೈಪ್ಗಳನ್ನು ಅಳವಡಿಸಿ ತಿಂಗಳುಗಳೇ ಕಳೆದರೂ ರಸ್ತೆಗೆ ಡಾಂಬರ್…
ಕರ್ನಾಟಕ ಮತ್ತು ತಮಿಳುನಾಡಿನ ರಾಜ್ಯಪಾಲರು ವಿಧಾನ ಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಸರ್ಕಾರದ ಗೊತ್ತು ಗುರಿಯ ಭಾಷಣವನ್ನು ಪೂರ್ಣವಾಗಿ ಓದದೆ…