ದೇಶ- ವಿದೇಶ

ಮೆದುಳನ್ನು ತಿನ್ನುವ ಸೂಕ್ಷ್ಮಾಣು ಜೀವಿಗೆ ಕೇರಳದ ಬಾಲಕ ಬಲಿ

ಕೇರಳ: ಮೆದುಳು ತಿನ್ನುವ ವಿಚಿತ್ರ ಸೂಕ್ಷ್ಮಾಣು ಜೀವಿಗೆ ಕೇರಳದಲ್ಲಿ ಬಾಲಕನೊಬ್ಬ ಬಲಿಯಾಗಿದ್ದಾನೆ.

ಮಲಪ್ಪುರಂನ ಮೂಲದ ಬಾಲಕ ತೀವ್ರ ಅಸ್ವಸ್ಥತೆಯಿಂದ ನರಳುತ್ತಿದ್ದ ಕೇರಳದ ಕೋಳಿಕ್ಕೋಡ್‌ನ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರು,ಚಿಕಿತ್ಸೆ ಫಲಕಾರಿಯಾಗದೇ ಮರಣಹೊಂದಿದ್ದಾನೆ.

ಇದೊಂದು ನೀರಿನಿಂದ ಹರಡುವ ಸೋಂಕಾಗಿದ್ದು, ಈ ಸೋಂಕಿಗೆ ಒಳಗಾದವರು ಕೇವಲ ಐದು ದಿನಗಳ ಒಳಗಾಗಿ ಕೊನೆಯುಸಿರೆಳೆಯುತ್ತಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ಮಲಪ್ಪುರಂ ಕೆರೆಯೊಂದರಲ್ಲಿ ಸ್ಥಳೀಯ ಬಾಲಕ ಈಜಾಡಿದ್ದಾನೆ. ಈ ವೇಳೆ ವೈರಸ್‌ ಬಾಲಕನ ದೇಹ ಪ್ರವೇಶಿಸಿದೆ. ಬಳಿಕ ಆತ ಆಸ್ಪತ್ರೆಗೆ ದಾಖಲಾಗಿದ್ದಾನೆ. ಮೇ ತಿಂಗಳಿನಿಂದಾಚೆಗೆ ಈ ರೀತಿಯ ಸಾವು ನೋವುಗಳು ಪದೇ ಪದೇ ಸಂಭವಿಸುತ್ತಿದ್ದವು. ಕಳೆದ ಒಂದು ತಿಂಗಳಿನಲ್ಲಿಯೇ ಈ ರೀತಿಯಾಗಿ ಸಂಭವಿಸಿದ ಸಾವಿನ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.

ನೀರಿನ ಮೂಲಕ ಮನುಷ್ಯನ ದೇಹ ಒಕ್ಕುವ ಈ ವೈರಾಣು ಮೂಗಿನ ಮೂಲಕ ನೇರವಾಗಿ ಮೆದುಳನ್ನು ಪ್ರವೇಶಿಸುತ್ತದೆ. ಮೆದುಳಿನ ಜೀವಕೋಶದ ಮೇಲೆ ನೇರವಾಗಿ ದಾಳಿ ಮಾಡುವ ಈ ವೈರಾಣು ಕ್ರಮೇಣ ಇದರಿಂದಾಗಿ ಅಮೀಬಾಯಿಕ್‌ ಮೆನಿನ್‌ ಜೋ ಎನ್‌ ಕೆಫಾಲಿಟೀಸ್‌ ಎಂಬ ಕಾಯಿಲೆಗೆ ತುತ್ತಾಗಿ ರೋಗಿ ಸಾವನ್ನಪ್ಪುತ್ತಾನೆ.

 

ಈ ಬಗ್ಗೆ ಜಾಗೃತಿ ವಹಿಸಲು ಕೆರೆ, ನದಿ ಹಾಗೂ ಕೊಳಗಳಲ್ಲಿ ಈಜಾಡುವುದರಿಂದ ದೂರ ಉಳಿದರೆ ಈ ಸಮಸ್ಯೆ ಬಾರದಂತೆ ತಡೆಗಟ್ಟಬಹುದು ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮದ್ದೂರು ಬಳಿಯ ವಳೆಗೆರೆಹಳ್ಳಿಯಲ್ಲಿ ಮಳೆರಾಯನಿಗಾಗಿ ಪೂಜೆ

ಮದ್ದೂರು: ಹುಯ್ಯೋ ಹುಯ್ಯೋ ಮಳೆರಾಯ ತೆಂಗಿನ ತೋಟಕೆ ನೀರಿಲ್ಲ, ಬಾರೋ ಬಾರೋ ಮಳೆರಾಯ ಬಾಳೆಯ ತೋಟಕೆ ನೀರಿಲ್ಲ, ಬಾರಪ್ಪ ಮಳೆರಾಯ…

4 hours ago

ಸಮರ್ಥವಾಗಿ ಕಾರ್ಯನಿರ್ವಹಿಸದ ಸಚಿವರನ್ನು ಬದಲಾಯಿಸಿ: ಶಾಸಕ ರವಿಕುಮಾರ್‌ ಗಣಿಗ

ಮಂಡ್ಯ: ಹಲವು ಶಾಸಕರು ಸಚಿವರಾಗುವ ಆಸೆ ಹೊಂದಿದ್ದು, ಮೂರು-ನಾಲ್ಕು ಬಾರಿ ಗೆದ್ದಿರುವ ಹಿರಿಯ ಶಾಸಕರು ಸಹ ಮಂತ್ರಿಗಿರಿಗಾಗಿ ದೆಹಲಿಗೆ ತೆರಳುತ್ತಿದ್ದಾರೆ.…

4 hours ago

ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ: ಚಿತ್ರನಟ ಹರೀಶ್ ಸ್ಥಳದಲ್ಲೇ ಸಾವು

ಮಡಿಕೇರಿ: ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಚಲನಚಿತ್ರ ಹಾಗೂ ಕಿರುತೆರೆ ಸಹ ಕಲಾವಿದ ಹರೀಶ್‌ ಧಾರುಣವಾಗಿ ಸಾವನ್ನಪ್ಪಿದ್ದಾರೆ. ಜಿಲ್ಲೆಯ…

4 hours ago

ಹಾಸನ: ಮಗಳ ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು

ಹಾಸನ: ಅಪಘಾತದಿಂದ ಮೆದುಳು ನಿಷ್ಕ್ರಿಯವಾಗಿದ್ದ ಮಗಳ ಅಂಗಾಂಗ ದಾನ ಮಾಡಿ ಪೋಷಕರು ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಘಟನೆ ಹಾಸನ ಜಿಲ್ಲೆಯಲ್ಲಿ…

4 hours ago

ಶಿವಮೊಗ್ಗ: ಪಶುವೈದ್ಯೆ ಕೊಂದಿದ್ದ ನೀರಾನೆಗೆ ಬಹು ಅಂಗಾಂಗ ವೈಫಲ್ಯ

ಶಿವಮೊಗ್ಗ: ತ್ಯಾವರಕೊಪ್ಪದ ಮೃಗಾಲಯದಲ್ಲಿ ಪಶುವೈದ್ಯೆ ಸಮೀಕ್ಷಾ ಅವರ ಮೇಲೆ ದಾಳಿ ಮಾಡಿ ಕೊಂದಿದ್ದ ನೀರಾನೆ ಹಂಸಿನಿಯ ಮರಿ ಗರ್ಭದಲ್ಲೇ ಸಾವನ್ನಪ್ಪಿದೆ.…

4 hours ago

ಪಾಕ್‌ ಜನತೆಗೆ ಮತ್ತೊಂದು ಶಾಕ್:‌ ವಿದ್ಯುತ್‌ ದರ ದುಪ್ಪಟ್ಟು ಹೆಚ್ಚಳ

ಇಸ್ಲಾಮಾಬಾದ್:‌ ಇಂಧನ ಬೆಲೆ ಏರಿಕೆ ನಂತರ ಪಾಕಿಸ್ತಾನ ಈಗ ವಿದ್ಯುತ್‌ ದರವನ್ನು ದುಪ್ಪಟ್ಟು ಹೆಚ್ಚಿಸಿದೆ. ಮಾಸಿಕ ಇಂಧನ ವೆಚ್ಚ ಹೊಂದಾಣಿಕೆಯ…

4 hours ago