ದೇಶ- ವಿದೇಶ

ಮೆದುಳನ್ನು ತಿನ್ನುವ ಸೂಕ್ಷ್ಮಾಣು ಜೀವಿಗೆ ಕೇರಳದ ಬಾಲಕ ಬಲಿ

ಕೇರಳ: ಮೆದುಳು ತಿನ್ನುವ ವಿಚಿತ್ರ ಸೂಕ್ಷ್ಮಾಣು ಜೀವಿಗೆ ಕೇರಳದಲ್ಲಿ ಬಾಲಕನೊಬ್ಬ ಬಲಿಯಾಗಿದ್ದಾನೆ.

ಮಲಪ್ಪುರಂನ ಮೂಲದ ಬಾಲಕ ತೀವ್ರ ಅಸ್ವಸ್ಥತೆಯಿಂದ ನರಳುತ್ತಿದ್ದ ಕೇರಳದ ಕೋಳಿಕ್ಕೋಡ್‌ನ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರು,ಚಿಕಿತ್ಸೆ ಫಲಕಾರಿಯಾಗದೇ ಮರಣಹೊಂದಿದ್ದಾನೆ.

ಇದೊಂದು ನೀರಿನಿಂದ ಹರಡುವ ಸೋಂಕಾಗಿದ್ದು, ಈ ಸೋಂಕಿಗೆ ಒಳಗಾದವರು ಕೇವಲ ಐದು ದಿನಗಳ ಒಳಗಾಗಿ ಕೊನೆಯುಸಿರೆಳೆಯುತ್ತಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ಮಲಪ್ಪುರಂ ಕೆರೆಯೊಂದರಲ್ಲಿ ಸ್ಥಳೀಯ ಬಾಲಕ ಈಜಾಡಿದ್ದಾನೆ. ಈ ವೇಳೆ ವೈರಸ್‌ ಬಾಲಕನ ದೇಹ ಪ್ರವೇಶಿಸಿದೆ. ಬಳಿಕ ಆತ ಆಸ್ಪತ್ರೆಗೆ ದಾಖಲಾಗಿದ್ದಾನೆ. ಮೇ ತಿಂಗಳಿನಿಂದಾಚೆಗೆ ಈ ರೀತಿಯ ಸಾವು ನೋವುಗಳು ಪದೇ ಪದೇ ಸಂಭವಿಸುತ್ತಿದ್ದವು. ಕಳೆದ ಒಂದು ತಿಂಗಳಿನಲ್ಲಿಯೇ ಈ ರೀತಿಯಾಗಿ ಸಂಭವಿಸಿದ ಸಾವಿನ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.

ನೀರಿನ ಮೂಲಕ ಮನುಷ್ಯನ ದೇಹ ಒಕ್ಕುವ ಈ ವೈರಾಣು ಮೂಗಿನ ಮೂಲಕ ನೇರವಾಗಿ ಮೆದುಳನ್ನು ಪ್ರವೇಶಿಸುತ್ತದೆ. ಮೆದುಳಿನ ಜೀವಕೋಶದ ಮೇಲೆ ನೇರವಾಗಿ ದಾಳಿ ಮಾಡುವ ಈ ವೈರಾಣು ಕ್ರಮೇಣ ಇದರಿಂದಾಗಿ ಅಮೀಬಾಯಿಕ್‌ ಮೆನಿನ್‌ ಜೋ ಎನ್‌ ಕೆಫಾಲಿಟೀಸ್‌ ಎಂಬ ಕಾಯಿಲೆಗೆ ತುತ್ತಾಗಿ ರೋಗಿ ಸಾವನ್ನಪ್ಪುತ್ತಾನೆ.

 

ಈ ಬಗ್ಗೆ ಜಾಗೃತಿ ವಹಿಸಲು ಕೆರೆ, ನದಿ ಹಾಗೂ ಕೊಳಗಳಲ್ಲಿ ಈಜಾಡುವುದರಿಂದ ದೂರ ಉಳಿದರೆ ಈ ಸಮಸ್ಯೆ ಬಾರದಂತೆ ತಡೆಗಟ್ಟಬಹುದು ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಅಂಗನವಾಡಿಗಳಿಗೆ ೬ ತಿಂಗಳಿಂದ ಬಾರದ ಮೊಟ್ಟೆ ಹಣ!

ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ವಿತರಣೆಗಾಗಿ ನೀಡಲಾಗುವ ಅನುದಾನ ಕಳೆದ ೬ತಿಂಗಳಿಂದ…

2 hours ago

‘ತ್ಯಾಜ್ಯ ಸಂಸ್ಕರಣೆ, ವಿಲೇವಾರಿಗೆ ಕ್ರಮಕೈಗೊಳ್ಳಬೇಕು’

ಗುತ್ತಲು ಕೆರೆ, ಕಾಳೇನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ ಮಂಡ್ಯ: ನಗರದ ಗುತ್ತಲು ಕೆರೆಗೆ ತ್ಯಾಜ್ಯ…

2 hours ago

ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿಗೆ ಪರದಾಟ

ಪ್ರಶಾಂತ್ ಎಸ್. ಆರು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತ ನೀರಿನ ಘಟಕ ನಿರ್ವಹಣೆ ಮಾಡುವಲ್ಲಿ ಕೆಎಸ್‌ಆರ್‌ಟಿಸಿ ವಿಫಲ…

2 hours ago

ವರ್ಷಾಂತ್ಯ: ಗರಿಗೆದರದ ಮೈಸೂರು ಪ್ರವಾಸೋದ್ಯಮ

ಗಿರೀಶ್ ಹುಣಸೂರು ಹೊಸ ವರ್ಷಾಚರಣೆ, ಕ್ರಿಸ್‌ಮಸ್ ರಜೆ ನಿರೀಕ್ಷೆಯಲ್ಲಿ ವ್ಯಾಪಾರಸ್ಥರು, ಉದ್ಯಮಿಗಳು ಮೈಸೂರು: ೨೦೨೫ನೇ ವರ್ಷಕ್ಕೆ ವಿದಾಯ ಹೇಳಿ, ೨೦೨೬ರ…

2 hours ago

ಮಂಡ್ಯ | ಕೊಬ್ಬರಿ ಶೆಡ್‌ಗೆ ಬೆಂಕಿ : ಲಕ್ಷಾಂತರ ರೂ.ಮೌಲ್ಯದ ಕೊಬ್ಬರಿ ನಾಶ

ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…

12 hours ago