ದೇಶ- ವಿದೇಶ

ಮೆದುಳನ್ನು ತಿನ್ನುವ ಸೂಕ್ಷ್ಮಾಣು ಜೀವಿಗೆ ಕೇರಳದ ಬಾಲಕ ಬಲಿ

ಕೇರಳ: ಮೆದುಳು ತಿನ್ನುವ ವಿಚಿತ್ರ ಸೂಕ್ಷ್ಮಾಣು ಜೀವಿಗೆ ಕೇರಳದಲ್ಲಿ ಬಾಲಕನೊಬ್ಬ ಬಲಿಯಾಗಿದ್ದಾನೆ.

ಮಲಪ್ಪುರಂನ ಮೂಲದ ಬಾಲಕ ತೀವ್ರ ಅಸ್ವಸ್ಥತೆಯಿಂದ ನರಳುತ್ತಿದ್ದ ಕೇರಳದ ಕೋಳಿಕ್ಕೋಡ್‌ನ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರು,ಚಿಕಿತ್ಸೆ ಫಲಕಾರಿಯಾಗದೇ ಮರಣಹೊಂದಿದ್ದಾನೆ.

ಇದೊಂದು ನೀರಿನಿಂದ ಹರಡುವ ಸೋಂಕಾಗಿದ್ದು, ಈ ಸೋಂಕಿಗೆ ಒಳಗಾದವರು ಕೇವಲ ಐದು ದಿನಗಳ ಒಳಗಾಗಿ ಕೊನೆಯುಸಿರೆಳೆಯುತ್ತಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ಮಲಪ್ಪುರಂ ಕೆರೆಯೊಂದರಲ್ಲಿ ಸ್ಥಳೀಯ ಬಾಲಕ ಈಜಾಡಿದ್ದಾನೆ. ಈ ವೇಳೆ ವೈರಸ್‌ ಬಾಲಕನ ದೇಹ ಪ್ರವೇಶಿಸಿದೆ. ಬಳಿಕ ಆತ ಆಸ್ಪತ್ರೆಗೆ ದಾಖಲಾಗಿದ್ದಾನೆ. ಮೇ ತಿಂಗಳಿನಿಂದಾಚೆಗೆ ಈ ರೀತಿಯ ಸಾವು ನೋವುಗಳು ಪದೇ ಪದೇ ಸಂಭವಿಸುತ್ತಿದ್ದವು. ಕಳೆದ ಒಂದು ತಿಂಗಳಿನಲ್ಲಿಯೇ ಈ ರೀತಿಯಾಗಿ ಸಂಭವಿಸಿದ ಸಾವಿನ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.

ನೀರಿನ ಮೂಲಕ ಮನುಷ್ಯನ ದೇಹ ಒಕ್ಕುವ ಈ ವೈರಾಣು ಮೂಗಿನ ಮೂಲಕ ನೇರವಾಗಿ ಮೆದುಳನ್ನು ಪ್ರವೇಶಿಸುತ್ತದೆ. ಮೆದುಳಿನ ಜೀವಕೋಶದ ಮೇಲೆ ನೇರವಾಗಿ ದಾಳಿ ಮಾಡುವ ಈ ವೈರಾಣು ಕ್ರಮೇಣ ಇದರಿಂದಾಗಿ ಅಮೀಬಾಯಿಕ್‌ ಮೆನಿನ್‌ ಜೋ ಎನ್‌ ಕೆಫಾಲಿಟೀಸ್‌ ಎಂಬ ಕಾಯಿಲೆಗೆ ತುತ್ತಾಗಿ ರೋಗಿ ಸಾವನ್ನಪ್ಪುತ್ತಾನೆ.

 

ಈ ಬಗ್ಗೆ ಜಾಗೃತಿ ವಹಿಸಲು ಕೆರೆ, ನದಿ ಹಾಗೂ ಕೊಳಗಳಲ್ಲಿ ಈಜಾಡುವುದರಿಂದ ದೂರ ಉಳಿದರೆ ಈ ಸಮಸ್ಯೆ ಬಾರದಂತೆ ತಡೆಗಟ್ಟಬಹುದು ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ನೇಪಾಳ ದುರಂತ | ಮೃತದೇಹದ ಮೇಲಿದ್ದ ಚಿನ್ನ ಕಳವು ; ಇಬ್ಬರು ಆರೋಪಿಗಳ ಬಂಧನ

ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ…

6 mins ago

ಸೋನಿಯಾ ಗಾಂಧಿ ಆತ್ಮಚರಿತ್ರೆ ; ರಾಜಕೀಯ, ಸಾಹಿತ್ಯಿಕ ವಲಯದಲ್ಲಿ ಕೋಲಾಹಲ

ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…

34 mins ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಈ ಬಾರಿ ಮೆರವಣಿಗೆಗೆ ಸೇನೆಗೆ ಆಹ್ವಾನ ಎಂದ ಸಿಎಂ ಡಿಕೆಶಿ

ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್‌…

5 hours ago

ಮೈಕ್ರೋ ಫೈನಾನ್ಸ್‌ ಕಿರುಕುಳ: ವ್ಯಕ್ತಿ ಆತ್ಮಹತ್ಯೆ

ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…

8 hours ago

ರಾಜ್ಯದ 101 ತಾಲ್ಲೂಕುಗಳು ಬರ ತಾಲ್ಲೂಕುಗಳೆಂದು ಘೋಷಣೆ: ಡಿಸಿಎಂ ಜಿ.ಪರಮೇಶ್ವರ್‌

ಮೈಸೂರು: ರೈತರಿಗೆ ಬರ ಪರಿಹಾರ ನೀಡುವ ವಿಚಾರವಾಗಿ ಮಾತನಾಡಿರುವ ಡಿಸಿಎಂ ಪರಮೇಶ್ವರ್‌, ರಾಜ್ಯದ 101 ತಾಲೂಕುಗಳನ್ನು ಬರ ತಾಲೂಕುಗಳೆಂದು ಘೋಷಣೆ…

8 hours ago

ಓದುಗರ ಪತ್ರ: ಉಳುವ ‘ಯೋಗಿ’ ಕೂಗಿಗೆ ಸರ್ಕಾರ ತರ್ತಾಗಿ ಸ್ಪಂದಿಸಲಿ

ರಾಜ್ಯದ ೧೭೫ ತಾಲ್ಲೂಕುಗಳು ಭೀಕರ ಬರಕ್ಕೆ ತತ್ತರಿಸಿ, ಶೇಕಡಾ ೮೦ ಕ್ಕೂ ಹೆಚ್ಚು ಬೆಳೆ ನಷ್ಟದಿಂದ ಅನ್ನದಾತರು ಸಂಪೂರ್ಣ ಕಂಗಾಲಾಗಿದ್ದರೂ…

9 hours ago