ತಿರುವನಂತಪುರ: ಕೇರಳದಲ್ಲಿ ಎಲ್ಲ ವಿಶ್ವವಿದ್ಯಾಲಗಳಲ್ಲಿ ಆರಂಭಿಸಲಾಗುತ್ತಿರುವ ನಾಲ್ಕು ವರ್ಷದ ಪದವಿ ಕೋರ್ಸ್ಗಳಿಗೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸೋಮವಾರ(ಜು.1) ಅಧಿಕೃತವಾಗಿದೆ ಚಾಲನೆ ನೀಡಿದರು.
ತಿರುವನಂತಪುರದ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನಾಲ್ಕು ವರ್ಷಗಳ ಪದವಿ ಕೋರ್ಸ್ಗಳಿಗೆ ಚಾಲನೆ ನೀಡಿದರು. ನಂತರ ಮಾತನಾಡಿದ ಮುಖ್ಯಮಂತ್ರಿ ಪಿಣರಾಯ್, ವಿಶ್ವವಿದ್ಯಾಲಯಗಳಲ್ಲಿ ಆರಂಭಸಲಾಗುತ್ತಿರುವ ನಾಲ್ಕು ವರ್ಷದ ಪದವಿ ಕೇರಳದ ಶಿಕ್ಷಣ ವ್ಯವಸ್ಥೆಯಲ್ಲಿ ಭಾರೀ ಬದಲಾವಣೆ ತರಲಿದೆ. ಇನ್ನು ಮುಂದೆ ವಿದ್ಯಾರ್ಥಿಗಳು ನಾಲ್ಕು ವರ್ಷದ ಪದವಿ ಪಡೆಯಲಿದ್ದಾರೆ ಎಂದರು.
ಕಾಲೇಜು ಕ್ಯಾಂಪಸ್ಗಳ ಕಲಿಕೆಗೆ ಮಾತ್ರ ಸೀಮಿತವಾಗಿದ್ದ ಶಿಕ್ಷಣ ಇಂದು ಬದಲಾಗಿದೆ. ಆನ್ಲೈನ್ ವೇದಿಕೆಯಲ್ಲಿ ಕಲಿಕೆ, ಪ್ರಾಯೋಗಿಕ ಕಲಿಕೆ ಮತ್ತು ಸ್ಥಳಗಳ ಭೇಟಿಗೆ ಸಮನಾದ ಪ್ರಾಮುಖ್ಯತೆ ನೀಡಲಾಗಿದೆ. ಉನ್ನತ ಶಿಕ್ಷಣದಲ್ಲಿ, ಉದ್ಯೋಗಕ್ಕೆ ಅಗತ್ಯವಾದ ತರಬೇತಿ, ಜ್ಞಾನ ವೃದ್ಧಿ ಮತ್ತು ಕೌಶಲಾಭಿವೃದ್ಧಿಗೆ ಹೆಚ್ಚಿನ ಒತ್ತು ದೊರಯಲಿದೆ ಎಂದು ಪಿಣರಾಯ್ ಹೇಳಿದರು.
ಶಿಕ್ಷಣದ ಜತೆಗೆ ಮೂಲಭೂತ ಸೌಕರ್ಯಗ ಅಭಿವೃದ್ಧಿಗೂ ಇದೇ ಸಮನಾದ ಮಹತ್ವವನ್ನು ನಮ್ಮ ಸರ್ಕಾರ ನೀಡುತ್ತಿದೆ ಎಂದು ಇದೇ ವೇಳೆ ಸ್ಪಷ್ಟಪಡಿಸಿದರು.
ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…
ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…
ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…
ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…
ಮುಂಬೈ : ಆದಿತ್ಯ ಧರ್ ನಿರ್ದೇಶನದ, ರಣವೀರ್ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.19) ಬಿಡುಗಡೆಯಾಗಲಿದೆ. ಕಳೆದ ವರ್ಷ…