ತಿರುವನಂತಪುರ: ಕೇರಳದಲ್ಲಿ ಎಲ್ಲ ವಿಶ್ವವಿದ್ಯಾಲಗಳಲ್ಲಿ ಆರಂಭಿಸಲಾಗುತ್ತಿರುವ ನಾಲ್ಕು ವರ್ಷದ ಪದವಿ ಕೋರ್ಸ್ಗಳಿಗೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸೋಮವಾರ(ಜು.1) ಅಧಿಕೃತವಾಗಿದೆ ಚಾಲನೆ ನೀಡಿದರು.
ತಿರುವನಂತಪುರದ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನಾಲ್ಕು ವರ್ಷಗಳ ಪದವಿ ಕೋರ್ಸ್ಗಳಿಗೆ ಚಾಲನೆ ನೀಡಿದರು. ನಂತರ ಮಾತನಾಡಿದ ಮುಖ್ಯಮಂತ್ರಿ ಪಿಣರಾಯ್, ವಿಶ್ವವಿದ್ಯಾಲಯಗಳಲ್ಲಿ ಆರಂಭಸಲಾಗುತ್ತಿರುವ ನಾಲ್ಕು ವರ್ಷದ ಪದವಿ ಕೇರಳದ ಶಿಕ್ಷಣ ವ್ಯವಸ್ಥೆಯಲ್ಲಿ ಭಾರೀ ಬದಲಾವಣೆ ತರಲಿದೆ. ಇನ್ನು ಮುಂದೆ ವಿದ್ಯಾರ್ಥಿಗಳು ನಾಲ್ಕು ವರ್ಷದ ಪದವಿ ಪಡೆಯಲಿದ್ದಾರೆ ಎಂದರು.
ಕಾಲೇಜು ಕ್ಯಾಂಪಸ್ಗಳ ಕಲಿಕೆಗೆ ಮಾತ್ರ ಸೀಮಿತವಾಗಿದ್ದ ಶಿಕ್ಷಣ ಇಂದು ಬದಲಾಗಿದೆ. ಆನ್ಲೈನ್ ವೇದಿಕೆಯಲ್ಲಿ ಕಲಿಕೆ, ಪ್ರಾಯೋಗಿಕ ಕಲಿಕೆ ಮತ್ತು ಸ್ಥಳಗಳ ಭೇಟಿಗೆ ಸಮನಾದ ಪ್ರಾಮುಖ್ಯತೆ ನೀಡಲಾಗಿದೆ. ಉನ್ನತ ಶಿಕ್ಷಣದಲ್ಲಿ, ಉದ್ಯೋಗಕ್ಕೆ ಅಗತ್ಯವಾದ ತರಬೇತಿ, ಜ್ಞಾನ ವೃದ್ಧಿ ಮತ್ತು ಕೌಶಲಾಭಿವೃದ್ಧಿಗೆ ಹೆಚ್ಚಿನ ಒತ್ತು ದೊರಯಲಿದೆ ಎಂದು ಪಿಣರಾಯ್ ಹೇಳಿದರು.
ಶಿಕ್ಷಣದ ಜತೆಗೆ ಮೂಲಭೂತ ಸೌಕರ್ಯಗ ಅಭಿವೃದ್ಧಿಗೂ ಇದೇ ಸಮನಾದ ಮಹತ್ವವನ್ನು ನಮ್ಮ ಸರ್ಕಾರ ನೀಡುತ್ತಿದೆ ಎಂದು ಇದೇ ವೇಳೆ ಸ್ಪಷ್ಟಪಡಿಸಿದರು.
ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ವಿತರಣೆಗಾಗಿ ನೀಡಲಾಗುವ ಅನುದಾನ ಕಳೆದ ೬ತಿಂಗಳಿಂದ…
ಗುತ್ತಲು ಕೆರೆ, ಕಾಳೇನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ ಮಂಡ್ಯ: ನಗರದ ಗುತ್ತಲು ಕೆರೆಗೆ ತ್ಯಾಜ್ಯ…
ಪ್ರಶಾಂತ್ ಎಸ್. ಆರು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತ ನೀರಿನ ಘಟಕ ನಿರ್ವಹಣೆ ಮಾಡುವಲ್ಲಿ ಕೆಎಸ್ಆರ್ಟಿಸಿ ವಿಫಲ…
ಗಿರೀಶ್ ಹುಣಸೂರು ಹೊಸ ವರ್ಷಾಚರಣೆ, ಕ್ರಿಸ್ಮಸ್ ರಜೆ ನಿರೀಕ್ಷೆಯಲ್ಲಿ ವ್ಯಾಪಾರಸ್ಥರು, ಉದ್ಯಮಿಗಳು ಮೈಸೂರು: ೨೦೨೫ನೇ ವರ್ಷಕ್ಕೆ ವಿದಾಯ ಹೇಳಿ, ೨೦೨೬ರ…
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…