ತಿರುವನಂತಪುರ: ಕೇರಳದಲ್ಲಿ ಎಲ್ಲ ವಿಶ್ವವಿದ್ಯಾಲಗಳಲ್ಲಿ ಆರಂಭಿಸಲಾಗುತ್ತಿರುವ ನಾಲ್ಕು ವರ್ಷದ ಪದವಿ ಕೋರ್ಸ್ಗಳಿಗೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸೋಮವಾರ(ಜು.1) ಅಧಿಕೃತವಾಗಿದೆ ಚಾಲನೆ ನೀಡಿದರು.
ತಿರುವನಂತಪುರದ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನಾಲ್ಕು ವರ್ಷಗಳ ಪದವಿ ಕೋರ್ಸ್ಗಳಿಗೆ ಚಾಲನೆ ನೀಡಿದರು. ನಂತರ ಮಾತನಾಡಿದ ಮುಖ್ಯಮಂತ್ರಿ ಪಿಣರಾಯ್, ವಿಶ್ವವಿದ್ಯಾಲಯಗಳಲ್ಲಿ ಆರಂಭಸಲಾಗುತ್ತಿರುವ ನಾಲ್ಕು ವರ್ಷದ ಪದವಿ ಕೇರಳದ ಶಿಕ್ಷಣ ವ್ಯವಸ್ಥೆಯಲ್ಲಿ ಭಾರೀ ಬದಲಾವಣೆ ತರಲಿದೆ. ಇನ್ನು ಮುಂದೆ ವಿದ್ಯಾರ್ಥಿಗಳು ನಾಲ್ಕು ವರ್ಷದ ಪದವಿ ಪಡೆಯಲಿದ್ದಾರೆ ಎಂದರು.
ಕಾಲೇಜು ಕ್ಯಾಂಪಸ್ಗಳ ಕಲಿಕೆಗೆ ಮಾತ್ರ ಸೀಮಿತವಾಗಿದ್ದ ಶಿಕ್ಷಣ ಇಂದು ಬದಲಾಗಿದೆ. ಆನ್ಲೈನ್ ವೇದಿಕೆಯಲ್ಲಿ ಕಲಿಕೆ, ಪ್ರಾಯೋಗಿಕ ಕಲಿಕೆ ಮತ್ತು ಸ್ಥಳಗಳ ಭೇಟಿಗೆ ಸಮನಾದ ಪ್ರಾಮುಖ್ಯತೆ ನೀಡಲಾಗಿದೆ. ಉನ್ನತ ಶಿಕ್ಷಣದಲ್ಲಿ, ಉದ್ಯೋಗಕ್ಕೆ ಅಗತ್ಯವಾದ ತರಬೇತಿ, ಜ್ಞಾನ ವೃದ್ಧಿ ಮತ್ತು ಕೌಶಲಾಭಿವೃದ್ಧಿಗೆ ಹೆಚ್ಚಿನ ಒತ್ತು ದೊರಯಲಿದೆ ಎಂದು ಪಿಣರಾಯ್ ಹೇಳಿದರು.
ಶಿಕ್ಷಣದ ಜತೆಗೆ ಮೂಲಭೂತ ಸೌಕರ್ಯಗ ಅಭಿವೃದ್ಧಿಗೂ ಇದೇ ಸಮನಾದ ಮಹತ್ವವನ್ನು ನಮ್ಮ ಸರ್ಕಾರ ನೀಡುತ್ತಿದೆ ಎಂದು ಇದೇ ವೇಳೆ ಸ್ಪಷ್ಟಪಡಿಸಿದರು.
ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್ಬಾರ್) ನಲ್ಲಿ ಸಂಭವಿಸಿದ ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…
ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…
ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…
೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…
ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…