ದೇಶ- ವಿದೇಶ

ಎಸ್‌ಐಆರ್ ಜಾರಿ ವಿರುದ್ಧ ಕೇರಳ ಸಿಎಂ ಪಿಣರಾಯಿ ವಿಜಯನ್‌ ಆಕ್ರೋಶ

ತಿರುವನಂತಪುರಂ: ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಶೀಘ್ರದಲ್ಲೇ ನಡೆಯಲಿದ್ದು, ಇದರ ಬೆನ್ನಲ್ಲೇ ವಿಧಾನಸಭಾ ಚುನಾವಣೆ ಕೂಡ ನಡೆಯಲಿದೆ. ಇಂತಹ ಪರಿಸ್ಥಿತಿಯಲ್ಲಿ ಎಸ್‌ಐಆರ್‌ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸುವುದು ದುರುದ್ದೇಶಪೂರಿತವಾಗಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಹಾರದ ಬಳಿಕ ಕೇರಳ ಸೇರಿದಂತೆ ದೇಶದ ಇರತೆ ರಾಜ್ಯಗಳಲ್ಲಿ ಎಸ್‌ಐಆರ್‌ ಕೈಗೊಳ್ಳುವ ಕೇಂದ್ರ ಚುನಾವಣೆ ಆಯೋಗದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್‌ ಅವರು, ಎಸ್‌ಐಆರ್‌ ಜಾರಿ ಪ್ರಜಾಪ್ರಭುತ್ವಕ್ಕೆ ತೀವ್ರ ಅಪಾಯವನ್ನು ಉಂಟು ಮಾಡುತ್ತದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಕೇರಳ, ತಮಿಳುನಾಡು ಹಾಗೂ ಪಶ್ಚಿಮ ಬಂಗಾಳದಲ್ಲಿ ತರಾತುರಿಯಲ್ಲಿ ಎಸ್‌ಐಆರ್‌ ಪ್ರಕ್ರಿಯೆ ನಡೆಸುವ ಅಗತ್ಯತೆ ಏನಿದೆ? ಎಂದು ಪ್ರಶ್ನಿಸಿದ ಅವರು ಎಸ್‌ಐಆರ್‌ ಪ್ರಕ್ರಿಯೆಯನ್ನು ಜಾರಿಗೆ ತರಲು ಮಾಡುತ್ತಿರುವ ಪ್ರಯತ್ನಗಳನ್ನು ಚುನಾವಣಾ ಆಯೋಗದ ಸಹಜ ಪ್ರಕ್ರಿಯೆ ಎಂದು ಪರಿಗಣಿಸಲು ಆಗುವುದಿಲ್ಲ ಎಂದು ಕಿಡಿಕಾರಿದ್ದಾರೆ.

ಈ ಎಲ್ಲಾ ಬೆಳವಣಿಗೆಗಳಿಂದ ಚುನಾವಣಾ ಆಯೋಗದ ಉದ್ದೇಶದ ಕುರಿತು ತೀವ್ರ ಅನುಮಾನ ಮೂಡಿದೆ. ಚುನಾವಣಾ ವ್ಯವಸ್ಥೆಯಲ್ಲಿ ಸಾರ್ವಜನಿಕರ ನಂಬಿಕೆಗೆ ಧಕ್ಕೆ ಉಂಟಾಗಲಿದೆ ಎಂದು ಹೇಳಿದ್ದಾರೆ.

ದೀರ್ಘಕಾಲದ ಸಿದ್ಧತೆ ಮತ್ತು ಸಮಾಲೋಚನೆಯ ಅಗತ್ಯವಿರುವ ಎಸ್‌ಐಆರ್‌ ಪ್ರಕ್ರಿಯೆಯನ್ನು ತರಾತುರಿಯಲ್ಲಿ ಜಾರಿಗೆ ತರುವ ಮೂಲಕ ಚುನಾವಣಾ ಆಯೋಗವು ಪ್ರಜಾಪ್ರಭುತ್ವದ ಬುಡಮೇಲು, ಬಡವರು ಮತ್ತು ವಲಸೆ ಕಾರ್ಮಿಕರ ಹಕ್ಕುಗಳನ್ನು ಕಸಿದುಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ಟೀಕೆ ಮಾಡಿದ್ದಾರೆ.

ಇನ್ನು ಕಳೆದ ಸೆಪ್ಟೆಂಬರ್‌ ತಿಂಗಳಿನಲ್ಲೇ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯನ್ನು ಕೈಗೊಳ್ಳುವ ಕೇಂದ್ರ ಚುನಾವಣಾ ಆಯೋಗದ ಕ್ರಮವನ್ನು ವಿರೋಧಿಸುವ ನಿರ್ಣಯವನ್ನು ಕೇರಳ ವಿಧಾನಸಭೆಯಲ್ಲಿ ಸರ್ವಾನುಮತದಿಂದ ಅಂಗೀಕರಿಸಲಾಗಿತ್ತು. ಎಸ್‌ಐಆರ್‌ ವಿರುದ್ಧ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದ ಕಾಂಗ್ರೆಸ್‌ ನೇತೃತ್ವದ ಯುಡಿಎಫ್‌ ಕೂಟವು, ಸಿಎಂ ಪಿಣರಾಯಿ ವಿಜಯನ್‌ ಅವರು ಸದನದಲ್ಲಿ ಮಂಡಿಸಿದ ನಿರ್ಣಯವನ್ನು ಬೆಂಬಲಿಸಿತ್ತು.

ಆಂದೋಲನ ಡೆಸ್ಕ್

Recent Posts

ಪೌರಾಯುಕ್ತೆಗೆ ಬೆದರಿಕೆ ಹಾಕಿದ ಪ್ರಕರಣ: ರಾಜೀವ್‌ಗೌಡ ಮನೆಗಳಿಗೆ ನೋಟಿಸ್‌ ಅಂಟಿಸಿದ ಪೊಲೀಸರು

ಬೆಂಗಳೂರು: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ನಿಂದನೆ ಹಾಗೂ ಜೀವ ಬೆದರಿಕೆ ಹಾಕಿರುವ ಕಾಂಗ್ರೆಸ್‌ ಮುಖಂಡ ರಾಜೀವ್‌ ಗೌಡ ಪತ್ತೆಗಾಗಿ ಪೊಲೀಸರು…

13 mins ago

ಓದುಗರ ಪತ್ರ: ಶಾಲಾ ಮಕ್ಕಳ ಬ್ಯಾಗ್ ಹೊರೆ ತಗ್ಗಿಸಿ

ಶಾಲಾ ಮಕ್ಕಳು ಭಾರವಾದ ಪುಸ್ತಕಗಳ ಬ್ಯಾಗ್ ಹೊರಲಾರದೆ ತ್ರಾಸದಿಂದಲೇ ಹೊತ್ತುಕೊಂಡು ನಡೆಯುವ ದೃಶ್ಯ ಈಗ ಎಲ್ಲೆಡೆ ಕಂಡುಬರುತ್ತದೆ. ಬ್ಯಾಗ್‌ನಲ್ಲಿ ಪಠ್ಯ…

4 hours ago

ಓದುಗರ ಪತ್ರ: ಉದ್ಯೋಗ ನೇಮಕಾತಿ ಯಾವಾಗ?

ಸರ್ಕಾರ ಅಧಿಸೂಚನೆ ಹೊರಡಿಸುವುದು ಯಾವಾಗ? ಉದ್ಯೋಗ ನೇಮಕಾತಿ ಯಾವಾಗ? ಇದು ಸಾವಿರಾರು ಉದ್ಯೋಗ ಆಕಾಂಕ್ಷಿಗಳ ಪ್ರಶ್ನೆ. ಇದು ಕಳೆದ ಹಲವು…

4 hours ago

ಓದುಗರ ಪತ್ರ: ಉದ್ಯೋಗ ವಯೋಮಿತಿ ಹೆಚ್ಚಳ ಸ್ವಾಗತಾರ್ಹ

ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸರ್ಕಾರಿ ನೌಕರಿ ಪಡೆಯಲು ಇದ್ದ ವಯೋಮಿತಿಯನ್ನು ಐದು ವರ್ಷ ಹೆಚ್ಚಳ ಮಾಡಿ…

4 hours ago

ಇಂದು ಕೇರಳ ಬೈತೂರು ದೇವಾಲಯದ ಪತ್ತೂಟ

ಕಾಂಗೀರ ಬೋಪಣ್ಣ ಕೊಡಗು-ಕೇರಳದ ಜನರು ಒಟ್ಟಾಗಿ ಆಚರಿಸುವ ವಿಭಿನ್ನ ಆಚರಣೆ; ವಿಶಿಷ್ಟ  ಹಬ್ಬಕ್ಕೆ  ಅಗತ್ಯ ಸಿದ್ಧತೆ  ವಿರಾಜಪೇಟೆ: ಕೇರಳ ಹಾಗೂ…

4 hours ago

ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಫುಟ್‌ಪಾತ್ ಒತ್ತುವರಿ

ಮಹೇಂದ್ರ ಹಸಗೂಲಿ ಪಾದಚಾರಿಗಳು ಓಡಾಡದಂತೆ ವಿರೂಪ; ಒತ್ತುವರಿ ತೆರವಿಗೆ ಸಾರ್ವಜನಿಕರ ಆಗ್ರಹ  ಗುಂಡ್ಲುಪೇಟೆ: ಪಟ್ಟಣದಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ ಫುಟ್‌ಪಾತ್‌ಗಳನ್ನು…

4 hours ago