ತಿರುವನಂತಪುರಂ: ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಶೀಘ್ರದಲ್ಲೇ ನಡೆಯಲಿದ್ದು, ಇದರ ಬೆನ್ನಲ್ಲೇ ವಿಧಾನಸಭಾ ಚುನಾವಣೆ ಕೂಡ ನಡೆಯಲಿದೆ. ಇಂತಹ ಪರಿಸ್ಥಿತಿಯಲ್ಲಿ ಎಸ್ಐಆರ್ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸುವುದು ದುರುದ್ದೇಶಪೂರಿತವಾಗಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿಹಾರದ ಬಳಿಕ ಕೇರಳ ಸೇರಿದಂತೆ ದೇಶದ ಇರತೆ ರಾಜ್ಯಗಳಲ್ಲಿ ಎಸ್ಐಆರ್ ಕೈಗೊಳ್ಳುವ ಕೇಂದ್ರ ಚುನಾವಣೆ ಆಯೋಗದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು, ಎಸ್ಐಆರ್ ಜಾರಿ ಪ್ರಜಾಪ್ರಭುತ್ವಕ್ಕೆ ತೀವ್ರ ಅಪಾಯವನ್ನು ಉಂಟು ಮಾಡುತ್ತದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಕೇರಳ, ತಮಿಳುನಾಡು ಹಾಗೂ ಪಶ್ಚಿಮ ಬಂಗಾಳದಲ್ಲಿ ತರಾತುರಿಯಲ್ಲಿ ಎಸ್ಐಆರ್ ಪ್ರಕ್ರಿಯೆ ನಡೆಸುವ ಅಗತ್ಯತೆ ಏನಿದೆ? ಎಂದು ಪ್ರಶ್ನಿಸಿದ ಅವರು ಎಸ್ಐಆರ್ ಪ್ರಕ್ರಿಯೆಯನ್ನು ಜಾರಿಗೆ ತರಲು ಮಾಡುತ್ತಿರುವ ಪ್ರಯತ್ನಗಳನ್ನು ಚುನಾವಣಾ ಆಯೋಗದ ಸಹಜ ಪ್ರಕ್ರಿಯೆ ಎಂದು ಪರಿಗಣಿಸಲು ಆಗುವುದಿಲ್ಲ ಎಂದು ಕಿಡಿಕಾರಿದ್ದಾರೆ.
ಈ ಎಲ್ಲಾ ಬೆಳವಣಿಗೆಗಳಿಂದ ಚುನಾವಣಾ ಆಯೋಗದ ಉದ್ದೇಶದ ಕುರಿತು ತೀವ್ರ ಅನುಮಾನ ಮೂಡಿದೆ. ಚುನಾವಣಾ ವ್ಯವಸ್ಥೆಯಲ್ಲಿ ಸಾರ್ವಜನಿಕರ ನಂಬಿಕೆಗೆ ಧಕ್ಕೆ ಉಂಟಾಗಲಿದೆ ಎಂದು ಹೇಳಿದ್ದಾರೆ.
ದೀರ್ಘಕಾಲದ ಸಿದ್ಧತೆ ಮತ್ತು ಸಮಾಲೋಚನೆಯ ಅಗತ್ಯವಿರುವ ಎಸ್ಐಆರ್ ಪ್ರಕ್ರಿಯೆಯನ್ನು ತರಾತುರಿಯಲ್ಲಿ ಜಾರಿಗೆ ತರುವ ಮೂಲಕ ಚುನಾವಣಾ ಆಯೋಗವು ಪ್ರಜಾಪ್ರಭುತ್ವದ ಬುಡಮೇಲು, ಬಡವರು ಮತ್ತು ವಲಸೆ ಕಾರ್ಮಿಕರ ಹಕ್ಕುಗಳನ್ನು ಕಸಿದುಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ಟೀಕೆ ಮಾಡಿದ್ದಾರೆ.
ಇನ್ನು ಕಳೆದ ಸೆಪ್ಟೆಂಬರ್ ತಿಂಗಳಿನಲ್ಲೇ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯನ್ನು ಕೈಗೊಳ್ಳುವ ಕೇಂದ್ರ ಚುನಾವಣಾ ಆಯೋಗದ ಕ್ರಮವನ್ನು ವಿರೋಧಿಸುವ ನಿರ್ಣಯವನ್ನು ಕೇರಳ ವಿಧಾನಸಭೆಯಲ್ಲಿ ಸರ್ವಾನುಮತದಿಂದ ಅಂಗೀಕರಿಸಲಾಗಿತ್ತು. ಎಸ್ಐಆರ್ ವಿರುದ್ಧ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಕೂಟವು, ಸಿಎಂ ಪಿಣರಾಯಿ ವಿಜಯನ್ ಅವರು ಸದನದಲ್ಲಿ ಮಂಡಿಸಿದ ನಿರ್ಣಯವನ್ನು ಬೆಂಬಲಿಸಿತ್ತು.
ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…
ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ…
ನಗರ ಪ್ರದೇಶಗಳ ಹೋಟೆಲ್ಗಳಲ್ಲಿ ನೀಡಲಾಗುವ ಆಹಾರ ಪಾರ್ಸೆಲ್ಗಳು ಹಾಗೂ ಆನ್ ಲೈನ್ ಮೂಲಕ ಸರಬರಾಜಾಗುವ ಶೇ.೯೦ ಕ್ಕಿಂತ ಹೆಚ್ಚು ಆಹಾರ…
ಸಾಮಾಜಿಕ ಮಾಧ್ಯಮ ಬಳಕೆದಾರರು ಬೆಂಗಳೂರಿನ ನಂತರ ಅತಿ ಹೆಚ್ಚು ಕ್ರಿಯಾಶೀಲರಾಗಿರುವುದು ಮೈಸೂರು ನಗರದಲ್ಲಿ. ಆದರೆ ಬೇಸರದ ಸಂಗತಿ ಎಂದರೆ ಇಲ್ಲಿನ…
ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್)ಪ್ರಕ್ರಿಯೆ ಜೂ.೩೦ರಿಂದ ಆರಂಭವಾಗಿದೆ. ಆದರೆ ಮತದಾರರು ಈ ಪ್ರಕ್ರಿಯೆಯಲ್ಲಿ ಯಾವ ದಾಖಲೆಗಳನ್ನು…
ಪಂಜು ಗಂಗೊಳ್ಳಿ ಬಡಕಟ್ಟು ಜನರಿಗೆ ಅಕ್ಷರ ಕಲಿಸಿ ಬದುಕು ರೂಪಿಸಿದ ಕರುಣಾಮಯಿ ೧೯೯೦ರಲ್ಲಿ ಅಸ್ಸಾಮಿನ ಹೊಜಾಯ್ ಜಿಲ್ಲೆಯ ಲುಮ್ಡಿಂಗ್ ಗ್ರಾಮದ…