ಕೇರಳ: ಕೇರಳದ ಮಲಪ್ಪುರಂನಲ್ಲಿನ ದೇಗುಲವೊಂದರ ಧಾರ್ಮಿಕ ಉತ್ಸವದ ವೇಳೆ ಆನೆಯೊಂದು ದಾಳಿ ಮಾಡಿದ ಪರಿಣಾಮ 17ಮಂದಿ ಗಾಯಗೊಂಡಿದ್ದಾರೆ.
ಮಲಪ್ಪುರಂನ ತಿರೂರಿನ ಬಿ.ಪಿ.ಅಂಗಡಿಯ ಜಾರಮ್ ಮೈದಾನದಲ್ಲಿ ನಡೆದ, ಪುತಿಯಂಗಡಿ ‘ನೆರ್ಚಾ’ ಎಂಬ ಧಾರ್ಮಿಕ ಕಾರ್ಯಕ್ರಮದ ವೇಳೆ ಆನೆಯೊಂದು ಏಕಾಏಕಿ ದಾಳಿ ಆಕ್ರೋಶಗೊಂಡು ಮುಂದಿದ್ದ ವ್ಯಕ್ತಿಯ ಮೇಲೆ ಹಲ್ಲೆ ಮಾಡಿದೆ.
ಧಾರ್ಮಿಕ ಕಾರ್ಯಕ್ರಮದಲ್ಲಿ ಐದು ಆನೆಗಳು ಭಾಗಿಯಾಗಿದ್ದವು. ಈ ಪೈಕಿ ಪಾಕತ್ ಶ್ರೀಕುಟ್ಟನ್ ಎಂಬ ಹೆಸರಿನ ಆನೆ ವ್ಯಕ್ತಿಯೊಬ್ಬನ ಮೇಲೆ ದಾಳಿ ಮಾಡಿ, ಸೊಂಡಿಲಿನಿಂದ ಎಳೆದು ಬಿಸಾಡಿದೆ. ಗಂಭೀರವಾಗಿ ಗಾಯಗೊಂಡ ವ್ಯಕ್ತಿಯನ್ನು ಕೊಟ್ಟಕಲ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ.
ಘಟನೆಯಿಂದ ಗಾಬರಿಗೊಂಡ ಜನರು ಓಡಲು ಪ್ರಾರಂಭಿಸಿದ್ದಾರೆ. ಇದರಿಂದ ಕಾಲ್ತುಳಿತವಾಗಿ 17 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳು ತಿರೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಾವುತರು ಹರಸಾಹಸಪಟ್ಟು ಆನೆಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.
ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…
ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…
ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್ಗೆ…
ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…
ಆರ್ಎಸ್ಎಸ್ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…
ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…