ಕೇರಳ: ಕೇರಳದ ಮಲಪ್ಪುರಂನಲ್ಲಿನ ದೇಗುಲವೊಂದರ ಧಾರ್ಮಿಕ ಉತ್ಸವದ ವೇಳೆ ಆನೆಯೊಂದು ದಾಳಿ ಮಾಡಿದ ಪರಿಣಾಮ 17ಮಂದಿ ಗಾಯಗೊಂಡಿದ್ದಾರೆ.
ಮಲಪ್ಪುರಂನ ತಿರೂರಿನ ಬಿ.ಪಿ.ಅಂಗಡಿಯ ಜಾರಮ್ ಮೈದಾನದಲ್ಲಿ ನಡೆದ, ಪುತಿಯಂಗಡಿ ‘ನೆರ್ಚಾ’ ಎಂಬ ಧಾರ್ಮಿಕ ಕಾರ್ಯಕ್ರಮದ ವೇಳೆ ಆನೆಯೊಂದು ಏಕಾಏಕಿ ದಾಳಿ ಆಕ್ರೋಶಗೊಂಡು ಮುಂದಿದ್ದ ವ್ಯಕ್ತಿಯ ಮೇಲೆ ಹಲ್ಲೆ ಮಾಡಿದೆ.
ಧಾರ್ಮಿಕ ಕಾರ್ಯಕ್ರಮದಲ್ಲಿ ಐದು ಆನೆಗಳು ಭಾಗಿಯಾಗಿದ್ದವು. ಈ ಪೈಕಿ ಪಾಕತ್ ಶ್ರೀಕುಟ್ಟನ್ ಎಂಬ ಹೆಸರಿನ ಆನೆ ವ್ಯಕ್ತಿಯೊಬ್ಬನ ಮೇಲೆ ದಾಳಿ ಮಾಡಿ, ಸೊಂಡಿಲಿನಿಂದ ಎಳೆದು ಬಿಸಾಡಿದೆ. ಗಂಭೀರವಾಗಿ ಗಾಯಗೊಂಡ ವ್ಯಕ್ತಿಯನ್ನು ಕೊಟ್ಟಕಲ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ.
ಘಟನೆಯಿಂದ ಗಾಬರಿಗೊಂಡ ಜನರು ಓಡಲು ಪ್ರಾರಂಭಿಸಿದ್ದಾರೆ. ಇದರಿಂದ ಕಾಲ್ತುಳಿತವಾಗಿ 17 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳು ತಿರೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಾವುತರು ಹರಸಾಹಸಪಟ್ಟು ಆನೆಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…