ದೇಶ- ವಿದೇಶ

ಈಶ್ವರ ಖಂಡ್ರೆ : ಕೇರಳ ಅರಣ್ಯ ಸಚಿವ ಸಶೀಂದ್ರನ್ ಭೇಟಿ

ಕೇರಳ ಮೃಗಾಲಯಕ್ಕೆ ತಾಂತ್ರಿಕ ನೈಪುಣ್ಯತೆಯ ವಿನಿಮಯಕ್ಕೆ ಸಮ್ಮತಿ

ಬೆಂಗಳೂರು : ಕೇರಳದ ತ್ರಿಶೂರ್ ಜಿಲ್ಲೆಯ ಪುಥೂರ್ ನಲ್ಲಿ ನೂತನವಾಗಿ ಆರಂಭಿಸುತ್ತಿರುವ ಜೈವಿಕ ಉದ್ಯಾನದಲ್ಲಿ ವನ್ಯಜೀವಿ ಮತ್ತು ಪಕ್ಷಿಗಳ ನಿರ್ವಹಣೆಗೆ ಅಗತ್ಯವಾದ ನೈಪುಣ್ಯತೆ ಮತ್ತು ಜ್ಞಾನ ವಿನಿಮಯಕ್ಕೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸಮ್ಮತಿಸಿದ್ದಾರೆ.

ವಿಕಾಸಸೌಧದಲ್ಲಿಂದು ತಮ್ಮನ್ನು ಭೇಟಿಯಾದ ಕೇರಳ ಅರಣ್ಯ ಸಚಿವ ಎ.ಕೆ. ಸಶೀಂದ್ರನ್, ಕೇರಳ ಅರಣ್ಯ ಇಲಾಖೆಯಿಂದ ಆರಂಭಿಸಲಾಗುತ್ತಿರುವ ಪ್ರಥಮ ಜೈವಿಕ ಉದ್ಯಾನದಲ್ಲಿ ವನ್ಯಜೀವಿಗಳ ನಿರ್ವಹಣೆ ಕುರಿತಂತೆ ತಾಂತ್ರಿಕ ನೈಪುಣ್ಯತೆ ಹಂಚಿಕೊಳ್ಳುವಂತೆ ಮಾಡಿದ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದರು.

ವಿಶ್ವ ವಿಖ್ಯಾತ ಮೃಗಾಲಯ ವಿನ್ಯಾಸಕಾರ ಆಸ್ಟ್ರೇಲಿಯಾದ ಜಾನ್ ಸಿಯೋ ಅವರಿಂದ ಜೈವಿಕ ಉದ್ಯಾನದ ವಿನ್ಯಾಸ ಮಾಡಿಸಿದ್ದು, 136.8 ಎಕರೆ ಪ್ರದೇಶದಲ್ಲಿ ಇದು ಸಾಕಾರವಾಗುತ್ತಿದ್ದು, ಬರುವ ಆಗಸ್ಟ್ ಅಂತ್ಯಕ್ಕೆ ಕಾರ್ಯಾರಂಭ ಮಾಡಲಿದೆ ಎಂದು ಸಚಿವ ಸಶೀಂದ್ರನ್ ಮಾಹಿತಿ ನೀಡಿದರು, ಹೊಸ ಮೃಗಾಲಯಕ್ಕೆ ಕರ್ನಾಟಕದ ಮೃಗಾಲಯಗಳಲ್ಲಿ ಹೆಚ್ಚುವರಿಯಾಗಿರುವ ಕೆಲವು ವನ್ಯಜೀವಿಗಳನ್ನು ನೀಡುವಂತೆಯೂ ಮನವಿ ಮಾಡಿದರು.

ಈ ಭೇಟಿಯ ವೇಳೆ ಕೇರಳ ರಾಜ್ಯದಲ್ಲಿ ಡೀಮ್ಡ್ ಅರಣ್ಯ ಕುರಿತಂತೆ ಕೈಗೊಂಡಿರುವ ಕ್ರಮಗಳು, ಕಸ್ತೂರಿ ರಂಗನ್ ವರದಿಯ ಕುರಿತಂತೆ ಕೈಗೊಳ್ಳಲಾಗಿರುವ ನಿರ್ಣಯಗಳ ಕುರಿತಂತೆಯೂ ಸಮಾಲೋಚಿಸಲಾಯಿತು.

ಕೇರಳ ಅರಣ್ಯ ಇಲಾಖೆಯ ಮುಖ್ಯ ವನ್ಯಜೀವಿ ಪರಿಪಾಲಕ ಪ್ರಮೋದ್ ಜಿ ಕೃಷ್ಣನ್ ಮತ್ತು ಕರ್ನಾಟಕದ ಅರಣ್ಯ ಇಲಾಖೆಯ ಉನ್ನತಾಧಿಕಾರಿಗಳಾದ ಮೀನಾಕ್ಷಿ ನೇಗಿ, ಸುಭಾಷ್ ಮಲ್ಕಡೆ, ಸುನೀಲ್ ಪನ್ವಾರ್, ಸೂರ್ಯ ಸೇನ್ ಮತ್ತಿತರರು ಸಭೆಯಲ್ಲಿ ಭಾಗಿಯಾಗಿದ್ದರು.

ಆಂದೋಲನ ಡೆಸ್ಕ್

Recent Posts

ಮಡಿಕೇರಿ: ವಿದ್ಯುತ್ ತಂತಿ ಮೇಲೆ ಮರ ಬೀಳಿಸಿ ಕಾಡಾನೆಗಳ ಪುಂಡಾಟ

ಮಡಿಕೇರಿ: ಕೊಡಗಿನಲ್ಲಿ ವನ್ಯಜೀವಿ–ಮಾನವ ಸಂಘರ್ಷ ಮತ್ತೆ ಮುಂದುವರಿದಿದೆ. ಈ ಬಾರಿ ಕಾಡಾನೆಗಳ ಬುದ್ಧಿವಂತಿಕೆ ಹಾಗೂ ಉಪಾಯದಿಂದ ನಡೆದ ಘಟನೆ ಗ್ರಾಮಸ್ಥರಲ್ಲಿ…

11 hours ago

ಶ್ರೀಲಂಕಾ ಜೈಲಿನಲ್ಲಿ ಗ್ಯಾಂಗ್‌ ವಾರ್:‌ 25 ಕೈದಿಗಳು ಸಾವು

ಕೊಲಂಬೊ: ಶ್ರೀಲಂಕಾದ ಜೈಲಿನಲ್ಲಿ ಕೈದಿಗಳ ಎರಡು ಗುಂಪಿನ ಮಧ್ಯೆ ಗಲಾಟೆ ನಡೆದ ಪರಿಣಾಮ 25 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು…

11 hours ago

ಜನತೆಗೆ ಮತ್ತೊಂದು ಬ್ಯಾಡ್‌ನ್ಯೂಸ್:‌ ದುಬಾರಿಯಾಗಲಿದೆ ಸೇಬು

ನವದೆಹಲಿ: ಬೆಲೆ ಏರಿಕೆಯಿಂದ ಹೈರಾಣಾಗಿರುವ ಜನರಿಗೆ ಈಗ ಮತ್ತೊಂದು ಬ್ಯಾಡ್‌ ನ್ಯೂಸ್‌ ಸಿಕ್ಕಿದೆ. ಹವಾಮಾನ ವೈಪರೀತ್ಯದಿಂದಾಗಿ ಸೇಬು ಹಣ್ಣಿನ ಇಳುವರಿ…

11 hours ago

ಮೊಬೈಲ್‌ ಟಾರ್ಚ್‌ ಹಿಡಿದು ಬಸ್‌ ಚಾಲನೆ: ಮೂವರು ಅಮಾನತು

ಕಲಬುರ್ಗಿ: ಟಾರ್ಚ್‌ ಹಿಡಿದು ಬಸ್‌ ಚಾಲನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸ್‌ ಡ್ರೈವರ್‌ ಸೇರಿದಂತೆ ಮೂವರನ್ನು ಅಮಾನತು ಮಾಡಲಾಗಿದೆ. ತಾಂತ್ರಿಕ…

11 hours ago

ರಾಜ್ಯದಲ್ಲಿ ಚುರುಕು ಪಡೆದುಕೊಂಡ ಮಳೆ: ಜಲಾಶಯಗಳ ಒಳಹರಿವಿನಲ್ಲಿ ಏರಿಕೆ

ಬೆಂಗಳೂರು: ಕರ್ನಾಟಕದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮುಂಗಾರು ಮಳೆ ದಾಖಲಾಗದಿದ್ದರೂ, ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಉತ್ತರ…

12 hours ago

ಧಾರಾಕಾರ ಮಳೆಗೆ ತತ್ತರಿಸಿದ ಮುಂಬೈ

ಮುಂಬೈ: ಕಳೆದ ಐದು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ದೇಶದ ವಾಣಿಜ್ಯ ರಾಜಧಾನಿ ಮುಂಬೈ ತತ್ತರಿಸಿದೆ. ಮಳೆಯ ಆರ್ಭಟಕ್ಕೆ ನಗರದ…

12 hours ago