ದೇಶ- ವಿದೇಶ

ಈಶ್ವರ ಖಂಡ್ರೆ : ಕೇರಳ ಅರಣ್ಯ ಸಚಿವ ಸಶೀಂದ್ರನ್ ಭೇಟಿ

ಕೇರಳ ಮೃಗಾಲಯಕ್ಕೆ ತಾಂತ್ರಿಕ ನೈಪುಣ್ಯತೆಯ ವಿನಿಮಯಕ್ಕೆ ಸಮ್ಮತಿ

ಬೆಂಗಳೂರು : ಕೇರಳದ ತ್ರಿಶೂರ್ ಜಿಲ್ಲೆಯ ಪುಥೂರ್ ನಲ್ಲಿ ನೂತನವಾಗಿ ಆರಂಭಿಸುತ್ತಿರುವ ಜೈವಿಕ ಉದ್ಯಾನದಲ್ಲಿ ವನ್ಯಜೀವಿ ಮತ್ತು ಪಕ್ಷಿಗಳ ನಿರ್ವಹಣೆಗೆ ಅಗತ್ಯವಾದ ನೈಪುಣ್ಯತೆ ಮತ್ತು ಜ್ಞಾನ ವಿನಿಮಯಕ್ಕೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸಮ್ಮತಿಸಿದ್ದಾರೆ.

ವಿಕಾಸಸೌಧದಲ್ಲಿಂದು ತಮ್ಮನ್ನು ಭೇಟಿಯಾದ ಕೇರಳ ಅರಣ್ಯ ಸಚಿವ ಎ.ಕೆ. ಸಶೀಂದ್ರನ್, ಕೇರಳ ಅರಣ್ಯ ಇಲಾಖೆಯಿಂದ ಆರಂಭಿಸಲಾಗುತ್ತಿರುವ ಪ್ರಥಮ ಜೈವಿಕ ಉದ್ಯಾನದಲ್ಲಿ ವನ್ಯಜೀವಿಗಳ ನಿರ್ವಹಣೆ ಕುರಿತಂತೆ ತಾಂತ್ರಿಕ ನೈಪುಣ್ಯತೆ ಹಂಚಿಕೊಳ್ಳುವಂತೆ ಮಾಡಿದ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದರು.

ವಿಶ್ವ ವಿಖ್ಯಾತ ಮೃಗಾಲಯ ವಿನ್ಯಾಸಕಾರ ಆಸ್ಟ್ರೇಲಿಯಾದ ಜಾನ್ ಸಿಯೋ ಅವರಿಂದ ಜೈವಿಕ ಉದ್ಯಾನದ ವಿನ್ಯಾಸ ಮಾಡಿಸಿದ್ದು, 136.8 ಎಕರೆ ಪ್ರದೇಶದಲ್ಲಿ ಇದು ಸಾಕಾರವಾಗುತ್ತಿದ್ದು, ಬರುವ ಆಗಸ್ಟ್ ಅಂತ್ಯಕ್ಕೆ ಕಾರ್ಯಾರಂಭ ಮಾಡಲಿದೆ ಎಂದು ಸಚಿವ ಸಶೀಂದ್ರನ್ ಮಾಹಿತಿ ನೀಡಿದರು, ಹೊಸ ಮೃಗಾಲಯಕ್ಕೆ ಕರ್ನಾಟಕದ ಮೃಗಾಲಯಗಳಲ್ಲಿ ಹೆಚ್ಚುವರಿಯಾಗಿರುವ ಕೆಲವು ವನ್ಯಜೀವಿಗಳನ್ನು ನೀಡುವಂತೆಯೂ ಮನವಿ ಮಾಡಿದರು.

ಈ ಭೇಟಿಯ ವೇಳೆ ಕೇರಳ ರಾಜ್ಯದಲ್ಲಿ ಡೀಮ್ಡ್ ಅರಣ್ಯ ಕುರಿತಂತೆ ಕೈಗೊಂಡಿರುವ ಕ್ರಮಗಳು, ಕಸ್ತೂರಿ ರಂಗನ್ ವರದಿಯ ಕುರಿತಂತೆ ಕೈಗೊಳ್ಳಲಾಗಿರುವ ನಿರ್ಣಯಗಳ ಕುರಿತಂತೆಯೂ ಸಮಾಲೋಚಿಸಲಾಯಿತು.

ಕೇರಳ ಅರಣ್ಯ ಇಲಾಖೆಯ ಮುಖ್ಯ ವನ್ಯಜೀವಿ ಪರಿಪಾಲಕ ಪ್ರಮೋದ್ ಜಿ ಕೃಷ್ಣನ್ ಮತ್ತು ಕರ್ನಾಟಕದ ಅರಣ್ಯ ಇಲಾಖೆಯ ಉನ್ನತಾಧಿಕಾರಿಗಳಾದ ಮೀನಾಕ್ಷಿ ನೇಗಿ, ಸುಭಾಷ್ ಮಲ್ಕಡೆ, ಸುನೀಲ್ ಪನ್ವಾರ್, ಸೂರ್ಯ ಸೇನ್ ಮತ್ತಿತರರು ಸಭೆಯಲ್ಲಿ ಭಾಗಿಯಾಗಿದ್ದರು.

ಆಂದೋಲನ ಡೆಸ್ಕ್

Recent Posts

ತುಮಕೂರಿನಲ್ಲಿ ಸರ್ಕಾರದ ಸಾಧನಾ ಸಮಾವೇಶ

ತುಮಕೂರು: 2023ರಲ್ಲಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ನೇತೃತ್ವದ ಸರ್ಕಾರ ಮೂರು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿ, 4ನೇ ವರ್ಷಕ್ಕೆ ಪಾದಾರ್ಪಣೆ…

3 hours ago

ಅಗತ್ಯವಿದ್ದರೆ ಹುಚ್ಚು ಬೀದಿ ನಾಯಿಗಳನ್ನು ಕೊಲ್ಲಿ: ಸುಪ್ರೀಂಕೋರ್ಟ್‌ ಅನುಮತಿ

ನವದೆಹಲಿ: ಬೀದಿ ನಾಯಿಗಳ ನಿಯಂತ್ರಣಕ್ಕೆ ಅವುಗಳನ್ನು ಆಶ್ರಯ ತಾಣಗಳಿಗೆ ಸ್ಥಳಾಂತರಿಸಲು ಆದೇಶಿಸಿದ್ದ ಸುಪ್ರೀಂಕೋರ್ಟ್‌ ತನ್ನ ಆದೇಶವನ್ನು ಹಿಂಪಡೆಯುವುದಿಲ್ಲ ಎಂದು ಹೇಳಿದೆ.…

4 hours ago

ಉಸಿರು ಚೆಲ್ಲಿದ ದುಬಾರೆಯ ಮಾರ್ತಾಂಡ ಆನೆ

ಕೊಡಗು: ಜಿಲ್ಲೆಯ ಕುಶಾಲನಗರದ ದುಬಾರೆ ಆನೆ ಶಿಬಿರದಲ್ಲಿ ಸ್ನಾನ ಮಾಡುವ ವೇಳೆ ಕಂಜನ್‌ ಆನೆ ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ ಮಾರ್ತಾಂಡ…

5 hours ago

ಸಾರಿಗೆ ಮುಷ್ಕರಕ್ಕೆ ಹೈಕೋರ್ಟ್‌ ಬ್ರೇಕ್

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದ ಸಾರಿಗೆ ಸಂಘಟನೆಗಳು ಮೇ.20ರಂದು ಕರೆ ನೀಡಿದ್ದ ಮುಷ್ಕರಕ್ಕೆ ಕರ್ನಾಟಕ ಹೈಕೋರ್ಟ್ ಅಂಕುಶ ಹಾಕಿದೆ.…

6 hours ago

ನಾಳೆ ರಾಜ್ಯಾದ್ಯಂತ ಮೆಡಿಕಲ್‌ ಶಾಪ್‌ಗಳು ಬಂದ್‌

ಬೆಂಗಳೂರು: ಆನ್‌ಲೈನ್‌ ಮೂಲಕ ಔಷಧಿಗಳ ಖರೀದಿ ಮಾರಾಟ ನಿಲ್ಲಿಸುವಂತೆ ಆಗ್ರಹಿಸಿ ನಾಳೆ ರಾಜ್ಯದಾದ್ಯಂತ ಮೆಡಿಕಲ್‌ ಶಾಪ್‌ಗಳು ಬಂದ್‌ ಆಗಲಿವೆ. ಅಖಿಲ…

7 hours ago

ಓದುಗರ ಪತ್ರ: ನೀಟು…. ಘಾಟು !

ನೀಟು.... ಘಾಟು ! ಆಗ, ಎಷ್ಟೊಂದು ಶಿಸ್ತು, ಕ್ರಮವಾಗಿ ನಡೆಯುತ್ತಿತ್ತು? ಪರೀಕ್ಷೆ “ ನೀಟ್ “! ಈಗ, ಇದಕ್ಕೂ ಅಂಟಿಬಿಟ್ಟಿತಲ್ಲ…

8 hours ago