ದೇಶ- ವಿದೇಶ

ಈಶ್ವರ ಖಂಡ್ರೆ : ಕೇರಳ ಅರಣ್ಯ ಸಚಿವ ಸಶೀಂದ್ರನ್ ಭೇಟಿ

ಕೇರಳ ಮೃಗಾಲಯಕ್ಕೆ ತಾಂತ್ರಿಕ ನೈಪುಣ್ಯತೆಯ ವಿನಿಮಯಕ್ಕೆ ಸಮ್ಮತಿ

ಬೆಂಗಳೂರು : ಕೇರಳದ ತ್ರಿಶೂರ್ ಜಿಲ್ಲೆಯ ಪುಥೂರ್ ನಲ್ಲಿ ನೂತನವಾಗಿ ಆರಂಭಿಸುತ್ತಿರುವ ಜೈವಿಕ ಉದ್ಯಾನದಲ್ಲಿ ವನ್ಯಜೀವಿ ಮತ್ತು ಪಕ್ಷಿಗಳ ನಿರ್ವಹಣೆಗೆ ಅಗತ್ಯವಾದ ನೈಪುಣ್ಯತೆ ಮತ್ತು ಜ್ಞಾನ ವಿನಿಮಯಕ್ಕೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸಮ್ಮತಿಸಿದ್ದಾರೆ.

ವಿಕಾಸಸೌಧದಲ್ಲಿಂದು ತಮ್ಮನ್ನು ಭೇಟಿಯಾದ ಕೇರಳ ಅರಣ್ಯ ಸಚಿವ ಎ.ಕೆ. ಸಶೀಂದ್ರನ್, ಕೇರಳ ಅರಣ್ಯ ಇಲಾಖೆಯಿಂದ ಆರಂಭಿಸಲಾಗುತ್ತಿರುವ ಪ್ರಥಮ ಜೈವಿಕ ಉದ್ಯಾನದಲ್ಲಿ ವನ್ಯಜೀವಿಗಳ ನಿರ್ವಹಣೆ ಕುರಿತಂತೆ ತಾಂತ್ರಿಕ ನೈಪುಣ್ಯತೆ ಹಂಚಿಕೊಳ್ಳುವಂತೆ ಮಾಡಿದ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದರು.

ವಿಶ್ವ ವಿಖ್ಯಾತ ಮೃಗಾಲಯ ವಿನ್ಯಾಸಕಾರ ಆಸ್ಟ್ರೇಲಿಯಾದ ಜಾನ್ ಸಿಯೋ ಅವರಿಂದ ಜೈವಿಕ ಉದ್ಯಾನದ ವಿನ್ಯಾಸ ಮಾಡಿಸಿದ್ದು, 136.8 ಎಕರೆ ಪ್ರದೇಶದಲ್ಲಿ ಇದು ಸಾಕಾರವಾಗುತ್ತಿದ್ದು, ಬರುವ ಆಗಸ್ಟ್ ಅಂತ್ಯಕ್ಕೆ ಕಾರ್ಯಾರಂಭ ಮಾಡಲಿದೆ ಎಂದು ಸಚಿವ ಸಶೀಂದ್ರನ್ ಮಾಹಿತಿ ನೀಡಿದರು, ಹೊಸ ಮೃಗಾಲಯಕ್ಕೆ ಕರ್ನಾಟಕದ ಮೃಗಾಲಯಗಳಲ್ಲಿ ಹೆಚ್ಚುವರಿಯಾಗಿರುವ ಕೆಲವು ವನ್ಯಜೀವಿಗಳನ್ನು ನೀಡುವಂತೆಯೂ ಮನವಿ ಮಾಡಿದರು.

ಈ ಭೇಟಿಯ ವೇಳೆ ಕೇರಳ ರಾಜ್ಯದಲ್ಲಿ ಡೀಮ್ಡ್ ಅರಣ್ಯ ಕುರಿತಂತೆ ಕೈಗೊಂಡಿರುವ ಕ್ರಮಗಳು, ಕಸ್ತೂರಿ ರಂಗನ್ ವರದಿಯ ಕುರಿತಂತೆ ಕೈಗೊಳ್ಳಲಾಗಿರುವ ನಿರ್ಣಯಗಳ ಕುರಿತಂತೆಯೂ ಸಮಾಲೋಚಿಸಲಾಯಿತು.

ಕೇರಳ ಅರಣ್ಯ ಇಲಾಖೆಯ ಮುಖ್ಯ ವನ್ಯಜೀವಿ ಪರಿಪಾಲಕ ಪ್ರಮೋದ್ ಜಿ ಕೃಷ್ಣನ್ ಮತ್ತು ಕರ್ನಾಟಕದ ಅರಣ್ಯ ಇಲಾಖೆಯ ಉನ್ನತಾಧಿಕಾರಿಗಳಾದ ಮೀನಾಕ್ಷಿ ನೇಗಿ, ಸುಭಾಷ್ ಮಲ್ಕಡೆ, ಸುನೀಲ್ ಪನ್ವಾರ್, ಸೂರ್ಯ ಸೇನ್ ಮತ್ತಿತರರು ಸಭೆಯಲ್ಲಿ ಭಾಗಿಯಾಗಿದ್ದರು.

ಆಂದೋಲನ ಡೆಸ್ಕ್

Recent Posts

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

43 mins ago

ಶೂಟೌಟ್‌ ಪ್ರಕರಣ ; ಮೃತರು ಬೇಟೆಗಾರರು ಎಂಬುದಕ್ಕೆ ಮತ್ತಷ್ಟು ಸಾಕ್ಷ್ಯ ಬಿಡುಗಡೆ ಮಾಡಿದ ಅರಣ್ಯ ಇಲಾಖೆ

ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್​​ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…

1 hour ago

ನಕಲಿ ಔಷಧ ಜಾಲ ಪತ್ತೆ ಪ್ರಕರಣ ; ಎಸ್‌ಐಟಿ ತನಿಖೆಗೆ ಆದೇಶ

ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…

2 hours ago

ಮುಡಾ ಬದಲಿ ನಿವೇಶನಗಳ ಹಂಚಿಕೆ ಆದೇಶ ರದ್ದು ; ಮುಯ್ಯಿಗೆ ಮುಯ್ಯಿ ತೀರಿಸಿಕೊಂಡ ಸಚಿವ ಯತೀಂದ್ರ

ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್‌ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…

2 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ

ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ   72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 21 ಶುಕ್ರವಾರ

6 hours ago