ದೇಶ- ವಿದೇಶ

ಕೇರಳಂ | ನೂತನ ಮುಖ್ಯಮಂತ್ರಿಯಾಗಿ ವಿ.ಡಿ ಸತೀಶನ್ ಆಯ್ಕೆ

ಕೇರಳಂ : ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್ ಆಯ್ಕೆಯಾಗಿದ್ದಾರೆ.

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ದೆಹಲಿಯಲ್ಲಿ ನಿರಂತರ ಸಭೆಗಳನ್ನು ನಡೆಸಿದ ಬಳಿಕ ವಿ.ಡಿ. ಸತೀಶನ್ ಹೆಸರನ್ನು ಅಂತಿಮಗೊಳಿಸಿದ್ದಾರೆ. ಆ ಮೂಲಕ ಹಲವು ದಿನಗಳಿಂದ ನಡೆಯುತ್ತಿದ್ದ ಕುತೂಹಲ ಮತ್ತು ಊಹಾಪೋಹಗಳಿಗೆ ತೆರೆ ಬಿದ್ದಿದೆ.

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮೈತ್ರಿಕೂಟ 102 ಸ್ಥಾನಗಳೊಂದಿಗೆ ಭರ್ಜರಿ ಬಹುಮತ ಪಡೆದಿದ್ದರೂ ಮುಖ್ಯಮಂತ್ರಿ ಆಯ್ಕೆ ಮಾಡಿರಲಿಲ್ಲ. ಸಿಎಂ ಗಾದಿಗಾಗಿ ಪಕ್ಷದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್‌, ಕೇರಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ವಿಡಿ ಸತೀಶನ್‌ ಮಧ್ಯೆ ತೀವ್ರ ಪೈಪೋಟಿ ಏರ್ಪಟ್ಟಿತ್ತು. ಅಂತಿಮ ನಿರ್ಧಾರ ಕೈಗೊಳ್ಳಲು ಭಾರೀ ಕಸರತ್ತು ನಡೆಸಿದ ಹೈಕಮಾಂಡ್‌ ಕೇರಳದ ಕೈ ನಾಯಕರ ಮಾತಿಗೆ ಬೆಲೆ ನೀಡಿ ವಿ.ಡಿ. ಸತೀಶನ್ ಅವರನ್ನೇ ಅಂತಿಮಗೊಳಿಸಿದೆ.

ಯುಡಿಎಫ್ ಮೈತ್ರಿಕೂಟದ ಪ್ರಮುಖ ಪಾಲುದಾರ ಪಕ್ಷವಾದ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ವಿ.ಡಿ. ಸತೀಶನ್ ಅವರ ಆಯ್ಕೆಗೆ ಪ್ರಬಲ ಬೆಂಬಲ ವ್ಯಕ್ತಪಡಿಸಿತ್ತು.

ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿದ್ದ ಕೆಸಿ ವೇಣುಗೋಪಾಲ್‌ ಹೈಕಮಾಂಡ್ ಹಾಗೂ ರಾಹುಲ್ ಗಾಂಧಿ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು. ಶಾಸಕರ ಬೆಂಬಲ ಹಾಗೂ ಹೈಕಮಾಂಡ್ ಒಲವು ಇವರ ಪರ ಹೆಚ್ಚಾಗಿತ್ತು.

ಕೇರಳ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ಎಲ್‌ಡಿಎಫ್ ಸರ್ಕಾರದ ವಿರುದ್ಧ ಮುಂಚೂಣಿಯಲ್ಲಿ ಹೋರಾಡಿದ್ದ ವಿ.ಡಿ. ಸತೀಶನ್ ತನಗೆ ಸಿಎಂ ಪಟ್ಟ ನೀಡದಿದ್ದರೆ ಬೇರೆ ಯಾವುದೇ ಸಚಿವ ಸ್ಥಾನ ಬೇಡ ಎಂಬ ಬಿಗಿ ನಿಲುವನ್ನು ತಳೆದಿದ್ದರು.ಕಾಂಗ್ರೆಸ್‌ನ ಮತ್ತೊಬ್ಬ ಹಿರಿಯ ನಾಯಕ ರಮೇಶ್ ಚೆನ್ನಿತ್ತಲ ಇವರೂ ಸಹ ಮುಖ್ಯಮಂತ್ರಿ ಹುದ್ದೆಯ ಪ್ರಬಲ ಆಕಾಂಕ್ಷಿಯಾಗಿದ್ದರು. ಆದರೆ ಶಾಸಕರ ಬೆಂಬಲ ವಿ.ಡಿ. ಸತೀಶನ್ ಮತ್ತು ಕೆಸಿ ವೇಣುಗೋಪಾಲ್‌ ಅವರಿಗೆ ಇದ್ದ ಕಾರಣ ಸಿಎಂ ರೇಸ್‌ನಲ್ಲಿ ಇವರು ಹಿಂದೆ ಸರಿದಿದ್ದರು.

ಮೂವರಲ್ಲಿ ಯಾರನ್ನೇ ಒಬ್ಬರನ್ನು ಆಯ್ಕೆ ಮಾಡಿದರೂ ಪಕ್ಷದಲ್ಲಿ ಬಣ ರಾಜಕೀಯ ತೀವ್ರಗೊಳ್ಳುವ ಸಾಧ್ಯತೆ ಇರುವುದರಿಂದ, ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯುವ ಸರ್ವಸಮ್ಮತ ಸೂತ್ರಕ್ಕಾಗಿ ಹೈಕಮಾಂಡ್ ಹೆಣಗಾಟ ನಡೆಸಿತ್ತು. ಇದೀಗ ಅಂತಿಮವಾಗಿ ವಿ.ಡಿ.ಸತೀಶನ್‌ ಅವರನ್ನು ಆಯ್ಕೆ ಮಾಡಲಾಗಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

16 mins ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

17 mins ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

19 mins ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

22 mins ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

26 mins ago

ಹಿಂದಿನ ಉಸ್ತುವಾರಿಗಿದ್ದ ಖಾತೆಗಳು ಪುಟ್ಟರಂಗಶೆಟ್ಟರಿಗೆ!

ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ  ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…

30 mins ago