ದೇಶ- ವಿದೇಶ

ಇದೇ ಮೊದಲ ಬಾರಿಗೆ ಹೊರಜಗತ್ತಿಗೆ ಕಾಣಿಸಿಕೊಂಡ ಕಿಮ್ ಜೊಂಗ್ ಪುತ್ರಿ

ಸಿಯೋಲ್-ಉತ್ತರ ಕೊರಿಯಾದ ಸರ್ವಾಕಾರಿ ಕಿಮ್ ಜೊಂಗ್ ಉನ್ ಅವರು ಜಗತ್ತಿಗೆ ಇದೆ ಮೊದಲ ಬಾರಿಗೆ ತನ್ನ ಪುತ್ರಿಯ ದರ್ಶನ ಮಾಡಿಸಿದ್ದಾರೆ.
ಖಂಡಾಂತರ ಕ್ಷಿಪಣಿ ಉಡಾವಣಾ ಸ್ಥಳಕ್ಕೆ ಕಿಮ್ ಅವರು ತನ್ನ ಪುತ್ರಿಯೊಂದಿಗೆ ಆಗಮಿಸಿ ಪರಿಶೀಲನೆ ನಡೆಸುತ್ತಿರುವ ದೃಶ್ಯಾವಳಿಗಳು ಇದೀಗ ಎಲ್ಲೆಡೆ ವೈರಲ್ ಆಗಿದೆ.
ತನ್ನ ಪುತ್ರಿಯನ್ನು ಇದುವರೆಗೂ ಜಗತ್ತಿಗೆ ಪರಿಚಯಿಸದ ಕಿಮ್ ಅವರು ಈಗ ತಮ್ಮ ಮಗಳ ಜೊತೆ ಕಾಣಿಸಿಕೊಂಡಿರುವುದು ಏಕೆ ಎಂಬ ಪ್ರಶ್ನೆ ಎಲ್ಲರನ್ನೂ ಕಾಡತೊಡಗಿದೆ.


ಕಿಮ್ ಪುತ್ರಿ ಬಿಳಿ ಪಫಿ ಕೋಟ್‍ನಲ್ಲಿ ತಮ್ಮ ತಂದೆಯೊಂದಿಗೆ ಕೈ ಹಿಡಿದುಕೊಂಡು ಬೃಹತ್ ಕ್ಷಿಪಣಿಯನ್ನು ನೋಡುತ್ತಿರುವ ಫೊಟೋಗಳಲ್ಲಿ ಕಾಣಿಸಿಕೊಂಡಿದ್ದಾರೆ.
ಕಿಮ್‍ಗೆ ಮೂವರು ಮಕ್ಕಳು, ಇಬ್ಬರು ಪುತ್ರಿಯರು ಹಾಗೂ ಒಬ್ಬ ಪುತ್ರನಿದ್ದಾನೆ ಎಂದು ಜನ ನಂಬಿದ್ದಾರೆ. ಆದರೆ, ಇದುವರೆಗೂ ಕಿಮ್ ಮಕ್ಕಳು ಎಲ್ಲೂ ಸಾರ್ವಜನಿಕವಾಗಿ ಕಾಣಿಸಿಕೊಂಡಿರಲಿಲ್ಲ.
2013 ರಲ್ಲಿ ನಿವೃತ್ತ ಅಮೇರಿಕನ್ ಬಾಸ್ಕೆಟ್‍ಬಾಲ್ ತಾರೆ ಡೆನ್ನಿಸ್ ರಾಡ್‍ಮನ್ ಅವರು ಮಾಧ್ಯಮವೊಂದಕ್ಕೆ ನೀಡಿದ್ದ ಸಂದರ್ಶನದಲ್ಲಿ ಕಿಮ್‍ಗೆ ಜು ಏ ಎಂಬ ಮಗು ಮಗಳು ಇದ್ದಾರೆ ಅವರ ಕುಟುಂಬದೊಂದಿಗೆ ನಾನು ಸಮಯ ಕಳೆದಿದ್ದೆ ಎಂದಿದ್ದರು.
ಜು ಎಗೆ ಸುಮಾರು 12-13 ವರ್ಷ ವಯಸ್ಸಾಗಿರುತ್ತದೆ ಎಂದು ಅಂದಾಜಿಸಲಾಗಿದೆ, ಅಂದರೆ ಸುಮಾರು ನಾಲ್ಕರಿಂದ ಐದು ವರ್ಷಗಳಲ್ಲಿ ಅವರು ವಿಶ್ವವಿದ್ಯಾನಿಲಯಕ್ಕೆ ಹಾಜರಾಗಲು ಅಥವಾ ಮಿಲಿಟರಿ ಸೇವೆಗೆ ಸೇರಲು ಇಲ್ಲವೆ ಕಿಮ್ ಉತ್ತರಾಕಾರಿಯಾಗಲು ಆಕೆ ತಯಾರಿ ನಡೆಸುತ್ತಿರಬಹುದು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಕಿಮ್ ಮಗಳು ಮಾತ್ರವಲ್ಲದೆ ಆತನ ಪತ್ನಿ ರಿ ಸೋಲ್ ಜು ಕೂಡ ಕಾಣಿಸಿಕೊಂಡಿರುವುದು ಎಲ್ಲರ ಹುಬ್ಬೇರಿಸುವಂತೆ ಮಾಡಿರುವುದು ಮಾತ್ರ ಸುಳ್ಳಲ್ಲ.

andolanait

Recent Posts

ಅಕ್ರಮ ವಿದ್ಯುತ್‌ ಸಂಪರ್ಕ: 31 ಪ್ರಕರಣ ದಾಖಲು, 2.17 ಲಕ್ಷ ರೂ. ದಂಡ

ಮೈಸೂರು : ಅಕ್ರಮವಾಗಿ ವಿದ್ಯುತ್‌ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ)…

2 mins ago

ಚಿನ್ನಸ್ವಾಮಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯ : ಸಮಿತಿ ರಚನೆ

ಬೆಂಗಳೂರು : ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ ನಡೆಸುವ ಕುರಿತಂತೆ ಪರಿಶೀಲಿಸಲು ಸಮಿತಿ ರಚಿಸಲಾಗಿದೆ ಎಂದು ಗೃಹ ಸಚಿವರಾದ…

19 mins ago

5 ಹುಲಿಗಳ ದರ್ಶನ : ಸೆರೆಗೆ ಆನೆಗಳ ನೆರವು ; ಗ್ರಾಮದಲ್ಲಿ ನಿಷೇಧಾಜ್ಞೆ

ಚಾಮರಾಜನಗರ : ಜಿಲ್ಲೆಯ ನಂಜೇದೇವನಪುರ ಗ್ರಾಮದ ಕಲ್ಲು ಕ್ವಾರಿಯೊಂದರಲ್ಲಿ 5 ಹುಲಿಗಳ ಇರುವಿಕೆ ಡ್ರೋಣ್‌ನಲ್ಲಿ ಸೆರೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿ…

54 mins ago

ಸಾರ್ವಜನಿಕರ ಅಹವಾಲು ಸ್ವೀಕಾರ : ಹಲವು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕಲ್ಪಿಸಿದ ಸಚಿವ ಮಹದೇವಪ್ಪ

ಮೈಸೂರು : ಬೆಳಗಾವಿಯಲ್ಲಿ ನಡೆದ ಚಳಿಗಾಲದ ವಿಧಾನಮಂಡಲ ಅಧಿವೇಶನದಲ್ಲಿ ಪಾಲ್ಗೊಂಡಿದ್ದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಸೋಮವಾರ ನಗರದಲ್ಲಿ…

59 mins ago

ಜಿಲ್ಲಾಸ್ಪತ್ರೆಗಳ ಮೇಲ್ದರ್ಜೆಗೆ ಚಿಂತನೆ : ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು : ಜನರಿಗೆ ಉತ್ತಮ ಆರೋಗ್ಯ ಸೇವೆ ನೀಡುವ ನಿಟ್ಟಿನಲ್ಲಿ ರಾಜ್ಯದ ಎಲ್ಲ ಜಿಲ್ಲಾಸ್ಪತ್ರೆಗಳನ್ನು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಾಗಿ ಮೇಲ್ದರ್ಜೆಗೇರಿಸಲು…

1 hour ago

India-New Zealand | ಮುಕ್ತ ವ್ಯಾಪಾರ ಒಪ್ಪಂದ : ಭಾರಿ ಪ್ರಮಾಣದ ಸುಂಕ ಕಡಿತ

ವೆಲ್ಲಿಂಗ್ಟನ್ : ಭಾರತದೊಂದಿಗೆ ಮುಕ್ತ ವ್ಯಾಪಾರ ಒಪ್ಪಂದದ ಮಾತುಕತೆ ಅಂತಿಮವಾಗಿದೆ ಎಂದು ನ್ಯೂಜಿಲೆಂಡ್ ಪ್ರಧಾನಿ ಕ್ರಿಸ್ಟೋಫರ್ ಲುಕ್ಸನ್ ಸೋಮವಾರ ಹೇಳಿದ್ದಾರೆ.…

1 hour ago