ದೇಶ- ವಿದೇಶ

ಇದೇ ಮೊದಲ ಬಾರಿಗೆ ಹೊರಜಗತ್ತಿಗೆ ಕಾಣಿಸಿಕೊಂಡ ಕಿಮ್ ಜೊಂಗ್ ಪುತ್ರಿ

ಸಿಯೋಲ್-ಉತ್ತರ ಕೊರಿಯಾದ ಸರ್ವಾಕಾರಿ ಕಿಮ್ ಜೊಂಗ್ ಉನ್ ಅವರು ಜಗತ್ತಿಗೆ ಇದೆ ಮೊದಲ ಬಾರಿಗೆ ತನ್ನ ಪುತ್ರಿಯ ದರ್ಶನ ಮಾಡಿಸಿದ್ದಾರೆ.
ಖಂಡಾಂತರ ಕ್ಷಿಪಣಿ ಉಡಾವಣಾ ಸ್ಥಳಕ್ಕೆ ಕಿಮ್ ಅವರು ತನ್ನ ಪುತ್ರಿಯೊಂದಿಗೆ ಆಗಮಿಸಿ ಪರಿಶೀಲನೆ ನಡೆಸುತ್ತಿರುವ ದೃಶ್ಯಾವಳಿಗಳು ಇದೀಗ ಎಲ್ಲೆಡೆ ವೈರಲ್ ಆಗಿದೆ.
ತನ್ನ ಪುತ್ರಿಯನ್ನು ಇದುವರೆಗೂ ಜಗತ್ತಿಗೆ ಪರಿಚಯಿಸದ ಕಿಮ್ ಅವರು ಈಗ ತಮ್ಮ ಮಗಳ ಜೊತೆ ಕಾಣಿಸಿಕೊಂಡಿರುವುದು ಏಕೆ ಎಂಬ ಪ್ರಶ್ನೆ ಎಲ್ಲರನ್ನೂ ಕಾಡತೊಡಗಿದೆ.


ಕಿಮ್ ಪುತ್ರಿ ಬಿಳಿ ಪಫಿ ಕೋಟ್‍ನಲ್ಲಿ ತಮ್ಮ ತಂದೆಯೊಂದಿಗೆ ಕೈ ಹಿಡಿದುಕೊಂಡು ಬೃಹತ್ ಕ್ಷಿಪಣಿಯನ್ನು ನೋಡುತ್ತಿರುವ ಫೊಟೋಗಳಲ್ಲಿ ಕಾಣಿಸಿಕೊಂಡಿದ್ದಾರೆ.
ಕಿಮ್‍ಗೆ ಮೂವರು ಮಕ್ಕಳು, ಇಬ್ಬರು ಪುತ್ರಿಯರು ಹಾಗೂ ಒಬ್ಬ ಪುತ್ರನಿದ್ದಾನೆ ಎಂದು ಜನ ನಂಬಿದ್ದಾರೆ. ಆದರೆ, ಇದುವರೆಗೂ ಕಿಮ್ ಮಕ್ಕಳು ಎಲ್ಲೂ ಸಾರ್ವಜನಿಕವಾಗಿ ಕಾಣಿಸಿಕೊಂಡಿರಲಿಲ್ಲ.
2013 ರಲ್ಲಿ ನಿವೃತ್ತ ಅಮೇರಿಕನ್ ಬಾಸ್ಕೆಟ್‍ಬಾಲ್ ತಾರೆ ಡೆನ್ನಿಸ್ ರಾಡ್‍ಮನ್ ಅವರು ಮಾಧ್ಯಮವೊಂದಕ್ಕೆ ನೀಡಿದ್ದ ಸಂದರ್ಶನದಲ್ಲಿ ಕಿಮ್‍ಗೆ ಜು ಏ ಎಂಬ ಮಗು ಮಗಳು ಇದ್ದಾರೆ ಅವರ ಕುಟುಂಬದೊಂದಿಗೆ ನಾನು ಸಮಯ ಕಳೆದಿದ್ದೆ ಎಂದಿದ್ದರು.
ಜು ಎಗೆ ಸುಮಾರು 12-13 ವರ್ಷ ವಯಸ್ಸಾಗಿರುತ್ತದೆ ಎಂದು ಅಂದಾಜಿಸಲಾಗಿದೆ, ಅಂದರೆ ಸುಮಾರು ನಾಲ್ಕರಿಂದ ಐದು ವರ್ಷಗಳಲ್ಲಿ ಅವರು ವಿಶ್ವವಿದ್ಯಾನಿಲಯಕ್ಕೆ ಹಾಜರಾಗಲು ಅಥವಾ ಮಿಲಿಟರಿ ಸೇವೆಗೆ ಸೇರಲು ಇಲ್ಲವೆ ಕಿಮ್ ಉತ್ತರಾಕಾರಿಯಾಗಲು ಆಕೆ ತಯಾರಿ ನಡೆಸುತ್ತಿರಬಹುದು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಕಿಮ್ ಮಗಳು ಮಾತ್ರವಲ್ಲದೆ ಆತನ ಪತ್ನಿ ರಿ ಸೋಲ್ ಜು ಕೂಡ ಕಾಣಿಸಿಕೊಂಡಿರುವುದು ಎಲ್ಲರ ಹುಬ್ಬೇರಿಸುವಂತೆ ಮಾಡಿರುವುದು ಮಾತ್ರ ಸುಳ್ಳಲ್ಲ.

andolanait

Recent Posts

ನಾಳೆ ಸಾರಿಗೆ ಮುಷ್ಕರ : ಕೆಎಸ್‌ಆರ್‌ಟಿಸಿ ಬಸ್‌ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ

ಬೆಂಗಳೂರು : 38 ತಿಂಗಳ ವೇತನ ಬಾಕಿ ಹಣ ನೀಡಬೇಕು ಎನ್ನುವುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕೆಎಸ್‌ಆರ್‌ಟಿಸಿಯ…

25 mins ago

ವಿಧಾನಸೌಧದಲ್ಲಿ ಮಾಧ್ಯಮಕ್ಕೆ ಇನ್ನಷ್ಟು ನಿರ್ಬಂಧ

ಬೆಂಗಳೂರು : ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳ ಕಾರ್ಯವ್ಯಾಪ್ತಿಯನ್ನು ನಿರ್ಬಂಧಿಸುವ ಕುರಿತು ವಾರ್ತಾ ಇಲಾಖೆಗೆ ಸರ್ಕಾರ ಪತ್ರ ಬರೆದಿದೆ. ಪತ್ರದಲ್ಲಿ, ಮಾಧ್ಯಮಗಳು…

51 mins ago

ನಾಳೆಯಿಂದಲೇ ನಾಗರಹೊಳೆ, ಬಂಡೀಪುರ ಸಫಾರಿ ಪುನರಾರಂಭ

ಮೈಸೂರು : ನಾಗರಹೊಳೆ ಮತ್ತು ಬಂಡೀಪುರ ರಾಷ್ಟ್ರೀಯ ಉದ್ಯಾನವನಗಳಲ್ಲಿ ಫೆಬ್ರವರಿ 19ರಿಂದ ಸಫಾರಿ ಪುನರಾರಂಭವಾಗಲಿದೆ ಎಂದು ಅರಣ್ಯ ಸಚಿವ ಈಶ್ವರ…

2 hours ago

ಮೈಸೂರು | ಸ್ವಚ್ಛ ಸರ್ವೇಕ್ಷಣೆ ; ಜಾಥಾ ನಡೆಸಿ ಜನರಿಗೆ ಜಾಗೃತಿ

ಮೈಸೂರು : ಸ್ವಚ್ಛ ಸರ್ವೇಕ್ಷಣೆ-2026ರ ಅಂಗವಾಗಿ ನಗರಪಾಲಿಕೆ ವತಿಯಿಂದ ಶೌಚಾಲಯ ಬಳಕೆ ಹಾಗೂ ಸ್ವಚ್ಛತೆ ಕುರಿತು ವಿದ್ಯಾರ್ಥಿಗಳಿಂದ ಜಾಥಾ ಹಾಗೂ…

2 hours ago

ಜ್ಞಾನದ ಜೊತೆ ಕೌಶಲವೂ ಮುಖ್ಯ : ಪರೀಕ್ಷಾಂಗ ಕುಲಸಚಿವ ನಾಗರಾಜು ಅಭಿಮತ

ಮೈಸೂರು : ಇಂದಿನ ಕಾಲದಲ್ಲಿ ಜ್ಞಾನದ ಜೊತೆಗೆ ಕೌಶಲ ತುಂಬಾ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ರಾಷ್ಟ್ರೀಯ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು,…

2 hours ago

ಡಿ.ಕೆ.ಶಿವಕುಮಾರ್‌ ನಿಯತ್ತಿನ ಸೈನಿಕ: ಶಾಸಕ ರವಿಕುಮಾರ್‌ ಗಣಿಗ ಬ್ಯಾಟಿಂಗ್‌

ಮಂಡ್ಯ: ಸಚಿವ ಎಚ್‌.ಸಿ.ಮಹದೇವಪ್ಪ ಅವರ ಬೀದಿನಾಯಿ ಹೇಳಿಕೆ ಕುರಿತು ಸಾಕಷ್ಟು ಚರ್ಚೆಯಾಗುತ್ತಿದ್ದು, ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್‌ ಶಾಸಕ…

4 hours ago