ದೇಶ- ವಿದೇಶ

ಇದೇ ಮೊದಲ ಬಾರಿಗೆ ಹೊರಜಗತ್ತಿಗೆ ಕಾಣಿಸಿಕೊಂಡ ಕಿಮ್ ಜೊಂಗ್ ಪುತ್ರಿ

ಸಿಯೋಲ್-ಉತ್ತರ ಕೊರಿಯಾದ ಸರ್ವಾಕಾರಿ ಕಿಮ್ ಜೊಂಗ್ ಉನ್ ಅವರು ಜಗತ್ತಿಗೆ ಇದೆ ಮೊದಲ ಬಾರಿಗೆ ತನ್ನ ಪುತ್ರಿಯ ದರ್ಶನ ಮಾಡಿಸಿದ್ದಾರೆ.
ಖಂಡಾಂತರ ಕ್ಷಿಪಣಿ ಉಡಾವಣಾ ಸ್ಥಳಕ್ಕೆ ಕಿಮ್ ಅವರು ತನ್ನ ಪುತ್ರಿಯೊಂದಿಗೆ ಆಗಮಿಸಿ ಪರಿಶೀಲನೆ ನಡೆಸುತ್ತಿರುವ ದೃಶ್ಯಾವಳಿಗಳು ಇದೀಗ ಎಲ್ಲೆಡೆ ವೈರಲ್ ಆಗಿದೆ.
ತನ್ನ ಪುತ್ರಿಯನ್ನು ಇದುವರೆಗೂ ಜಗತ್ತಿಗೆ ಪರಿಚಯಿಸದ ಕಿಮ್ ಅವರು ಈಗ ತಮ್ಮ ಮಗಳ ಜೊತೆ ಕಾಣಿಸಿಕೊಂಡಿರುವುದು ಏಕೆ ಎಂಬ ಪ್ರಶ್ನೆ ಎಲ್ಲರನ್ನೂ ಕಾಡತೊಡಗಿದೆ.


ಕಿಮ್ ಪುತ್ರಿ ಬಿಳಿ ಪಫಿ ಕೋಟ್‍ನಲ್ಲಿ ತಮ್ಮ ತಂದೆಯೊಂದಿಗೆ ಕೈ ಹಿಡಿದುಕೊಂಡು ಬೃಹತ್ ಕ್ಷಿಪಣಿಯನ್ನು ನೋಡುತ್ತಿರುವ ಫೊಟೋಗಳಲ್ಲಿ ಕಾಣಿಸಿಕೊಂಡಿದ್ದಾರೆ.
ಕಿಮ್‍ಗೆ ಮೂವರು ಮಕ್ಕಳು, ಇಬ್ಬರು ಪುತ್ರಿಯರು ಹಾಗೂ ಒಬ್ಬ ಪುತ್ರನಿದ್ದಾನೆ ಎಂದು ಜನ ನಂಬಿದ್ದಾರೆ. ಆದರೆ, ಇದುವರೆಗೂ ಕಿಮ್ ಮಕ್ಕಳು ಎಲ್ಲೂ ಸಾರ್ವಜನಿಕವಾಗಿ ಕಾಣಿಸಿಕೊಂಡಿರಲಿಲ್ಲ.
2013 ರಲ್ಲಿ ನಿವೃತ್ತ ಅಮೇರಿಕನ್ ಬಾಸ್ಕೆಟ್‍ಬಾಲ್ ತಾರೆ ಡೆನ್ನಿಸ್ ರಾಡ್‍ಮನ್ ಅವರು ಮಾಧ್ಯಮವೊಂದಕ್ಕೆ ನೀಡಿದ್ದ ಸಂದರ್ಶನದಲ್ಲಿ ಕಿಮ್‍ಗೆ ಜು ಏ ಎಂಬ ಮಗು ಮಗಳು ಇದ್ದಾರೆ ಅವರ ಕುಟುಂಬದೊಂದಿಗೆ ನಾನು ಸಮಯ ಕಳೆದಿದ್ದೆ ಎಂದಿದ್ದರು.
ಜು ಎಗೆ ಸುಮಾರು 12-13 ವರ್ಷ ವಯಸ್ಸಾಗಿರುತ್ತದೆ ಎಂದು ಅಂದಾಜಿಸಲಾಗಿದೆ, ಅಂದರೆ ಸುಮಾರು ನಾಲ್ಕರಿಂದ ಐದು ವರ್ಷಗಳಲ್ಲಿ ಅವರು ವಿಶ್ವವಿದ್ಯಾನಿಲಯಕ್ಕೆ ಹಾಜರಾಗಲು ಅಥವಾ ಮಿಲಿಟರಿ ಸೇವೆಗೆ ಸೇರಲು ಇಲ್ಲವೆ ಕಿಮ್ ಉತ್ತರಾಕಾರಿಯಾಗಲು ಆಕೆ ತಯಾರಿ ನಡೆಸುತ್ತಿರಬಹುದು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಕಿಮ್ ಮಗಳು ಮಾತ್ರವಲ್ಲದೆ ಆತನ ಪತ್ನಿ ರಿ ಸೋಲ್ ಜು ಕೂಡ ಕಾಣಿಸಿಕೊಂಡಿರುವುದು ಎಲ್ಲರ ಹುಬ್ಬೇರಿಸುವಂತೆ ಮಾಡಿರುವುದು ಮಾತ್ರ ಸುಳ್ಳಲ್ಲ.

andolanait

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಸತ್ಯದ ಆರಾಧಕ ಮೌನವನ್ನು ಅವಲಂಬಿಸುವುದು ಅವಶ್ಯಕ

ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…

7 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 22 ಶನಿವಾರ  

8 hours ago

ಧಾವಂತ ಬದುಕಿಗೆ ಹೊಸ ಚೈತನ್ಯ ನೀಡುವ ಅರವಟ್ಟಿಗೆ

ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…

9 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧೀಜಿ ಆತ್ಮಕತೆಯ ಶತಮಾನೋತ್ಸವಕ್ಕೆ ಆಂದೋಲನ ಕೈಜೋಡಿಸಿರುವುದು ಐತಿಹಾಸಿಕ

ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…

10 hours ago

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

1 day ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

1 day ago