ದೇಶ- ವಿದೇಶ

ಇದೇ ಮೊದಲ ಬಾರಿಗೆ ಹೊರಜಗತ್ತಿಗೆ ಕಾಣಿಸಿಕೊಂಡ ಕಿಮ್ ಜೊಂಗ್ ಪುತ್ರಿ

ಸಿಯೋಲ್-ಉತ್ತರ ಕೊರಿಯಾದ ಸರ್ವಾಕಾರಿ ಕಿಮ್ ಜೊಂಗ್ ಉನ್ ಅವರು ಜಗತ್ತಿಗೆ ಇದೆ ಮೊದಲ ಬಾರಿಗೆ ತನ್ನ ಪುತ್ರಿಯ ದರ್ಶನ ಮಾಡಿಸಿದ್ದಾರೆ.
ಖಂಡಾಂತರ ಕ್ಷಿಪಣಿ ಉಡಾವಣಾ ಸ್ಥಳಕ್ಕೆ ಕಿಮ್ ಅವರು ತನ್ನ ಪುತ್ರಿಯೊಂದಿಗೆ ಆಗಮಿಸಿ ಪರಿಶೀಲನೆ ನಡೆಸುತ್ತಿರುವ ದೃಶ್ಯಾವಳಿಗಳು ಇದೀಗ ಎಲ್ಲೆಡೆ ವೈರಲ್ ಆಗಿದೆ.
ತನ್ನ ಪುತ್ರಿಯನ್ನು ಇದುವರೆಗೂ ಜಗತ್ತಿಗೆ ಪರಿಚಯಿಸದ ಕಿಮ್ ಅವರು ಈಗ ತಮ್ಮ ಮಗಳ ಜೊತೆ ಕಾಣಿಸಿಕೊಂಡಿರುವುದು ಏಕೆ ಎಂಬ ಪ್ರಶ್ನೆ ಎಲ್ಲರನ್ನೂ ಕಾಡತೊಡಗಿದೆ.


ಕಿಮ್ ಪುತ್ರಿ ಬಿಳಿ ಪಫಿ ಕೋಟ್‍ನಲ್ಲಿ ತಮ್ಮ ತಂದೆಯೊಂದಿಗೆ ಕೈ ಹಿಡಿದುಕೊಂಡು ಬೃಹತ್ ಕ್ಷಿಪಣಿಯನ್ನು ನೋಡುತ್ತಿರುವ ಫೊಟೋಗಳಲ್ಲಿ ಕಾಣಿಸಿಕೊಂಡಿದ್ದಾರೆ.
ಕಿಮ್‍ಗೆ ಮೂವರು ಮಕ್ಕಳು, ಇಬ್ಬರು ಪುತ್ರಿಯರು ಹಾಗೂ ಒಬ್ಬ ಪುತ್ರನಿದ್ದಾನೆ ಎಂದು ಜನ ನಂಬಿದ್ದಾರೆ. ಆದರೆ, ಇದುವರೆಗೂ ಕಿಮ್ ಮಕ್ಕಳು ಎಲ್ಲೂ ಸಾರ್ವಜನಿಕವಾಗಿ ಕಾಣಿಸಿಕೊಂಡಿರಲಿಲ್ಲ.
2013 ರಲ್ಲಿ ನಿವೃತ್ತ ಅಮೇರಿಕನ್ ಬಾಸ್ಕೆಟ್‍ಬಾಲ್ ತಾರೆ ಡೆನ್ನಿಸ್ ರಾಡ್‍ಮನ್ ಅವರು ಮಾಧ್ಯಮವೊಂದಕ್ಕೆ ನೀಡಿದ್ದ ಸಂದರ್ಶನದಲ್ಲಿ ಕಿಮ್‍ಗೆ ಜು ಏ ಎಂಬ ಮಗು ಮಗಳು ಇದ್ದಾರೆ ಅವರ ಕುಟುಂಬದೊಂದಿಗೆ ನಾನು ಸಮಯ ಕಳೆದಿದ್ದೆ ಎಂದಿದ್ದರು.
ಜು ಎಗೆ ಸುಮಾರು 12-13 ವರ್ಷ ವಯಸ್ಸಾಗಿರುತ್ತದೆ ಎಂದು ಅಂದಾಜಿಸಲಾಗಿದೆ, ಅಂದರೆ ಸುಮಾರು ನಾಲ್ಕರಿಂದ ಐದು ವರ್ಷಗಳಲ್ಲಿ ಅವರು ವಿಶ್ವವಿದ್ಯಾನಿಲಯಕ್ಕೆ ಹಾಜರಾಗಲು ಅಥವಾ ಮಿಲಿಟರಿ ಸೇವೆಗೆ ಸೇರಲು ಇಲ್ಲವೆ ಕಿಮ್ ಉತ್ತರಾಕಾರಿಯಾಗಲು ಆಕೆ ತಯಾರಿ ನಡೆಸುತ್ತಿರಬಹುದು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಕಿಮ್ ಮಗಳು ಮಾತ್ರವಲ್ಲದೆ ಆತನ ಪತ್ನಿ ರಿ ಸೋಲ್ ಜು ಕೂಡ ಕಾಣಿಸಿಕೊಂಡಿರುವುದು ಎಲ್ಲರ ಹುಬ್ಬೇರಿಸುವಂತೆ ಮಾಡಿರುವುದು ಮಾತ್ರ ಸುಳ್ಳಲ್ಲ.

andolanait

Recent Posts

ನೊಂದ ಪುರುಷರ ಹಕ್ಕುಗಳ ರಕ್ಷಣೆಗೆ ಆಯೋಗ ರಚಿಸಿ ; ಎ.ಎಚ್.ವಿಶ್ವನಾಥ್‌

ಮೈಸೂರು : ಸಮಾಜದಲ್ಲಿ ನಾನಾ ಕಾರಣಗಳಿಂದ ನೊಂದ ಪುರುಷರ ಹಕ್ಕುಗಳ ರಕ್ಷಣೆ ಹಾಗೂ ಅವರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲು…

8 hours ago

ಮೈಸೂರು | ಎನ್‌.ಆರ್‌.ಕ್ಷೇತ್ರದಲ್ಲಿ ನಿಯಮಬಾಹಿರ ಎಸ್‌ಐಆರ್‌ : ಸಂಸದ ಯದುವೀರ್ ಆರೋಪ

ಮೈಸೂರು : ನಗರದ ನರಸಿಂಹರಾಜ ವಿಧಾನಸಭಾ ಕ್ಷೇತ್ರದಲ್ಲಿ ಎಸ್‌ಐಆರ್ ಪ್ರಕ್ರಿಯೆ ನಿಯಮದಂತೆ ನಡೆಯುತ್ತಿಲ್ಲ. ಗುಂಪು ಗುಂಪಾಗಿ ಮತದಾರರ ಪಟ್ಟಿ ಪರಿಷ್ಕರಣೆ…

8 hours ago

‘ಕೊಲೆ ಬಗ್ಗೆ ನಮಗೆ ಗೊತ್ತೇ ಇರಲಿಲ್ಲ’

ಎಚ್.ಎಸ್.ದಿನೇಶ್ ಕುಮಾರ್ ನಿತ್ಯಾನಂದ ಕೊಲೆ ಪ್ರಕರಣದ ನಾಲ್ವರು ಆರೋಪಿಗಳ ಪಶ್ಚಾತ್ತಾಪದ ಕಣ್ಣೀರು ಮೈಸೂರು: ನಗರದ ಕುವೆಂಪುನಗರದಲ್ಲಿ ಪತ್ನಿಯಿಂದಲೇ ಹತ್ಯೆಯಾದ ನಿತ್ಯಾನಂದ…

14 hours ago

ಕೊಡಗು ಜಿಲ್ಲೆಯಾದ್ಯಂತ ಚುರುಕುಗೊಂಡ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಮುಂಗಾರು ಮಳೆ ಚುರುಕು ಪಡೆದುಕೊಂಡಿದ್ದು, ಹಾರಂಗಿ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು ಏರಿಕೆ ಕಂಡುಬಂದಿದೆ. ಹಾರಂಗಿ ಜಲಾಶಯಕ್ಕೆ…

15 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಮಹಾತ್ಮನ ಚಿಂತನೆಯ ಹಾದಿಯಲ್ಲಿ ನಡೆಯಬೇಕಿದೆ ನಾನು ಕಂಡ ಗಾಂಧಿಜಿಯವರಲ್ಲಿ, ಅವರ ಜೀವನದಲ್ಲಿ ನನ್ನನ್ನು ಅತ್ಯಂತ ಹೆಚ್ಚಾಗಿ ಆಕರ್ಷಿಸಿದ ವಿಷಯ ಎಂದರೆ…

17 hours ago

ಮನುಷ್ಯ ಕುಲದ ಪ್ರಜ್ಞಾವಂತಿಕೆ ವಿಕಾಸಕ್ಕೆ ಗಾಂಧೀಜಿ ಕೈಮರ

ಗಾಂಧಿಜಿಯವರ ಜೀವನ ಚರಿತ್ರೆ ದೇಶ, ಖಂಡಗಳ ಗಡಿ ದಾಟಿ ಮನುಷ್ಯರೆಲ್ಲರ ಒಳಿತನ್ನು ಬಯಸುವ ಬಯಕೆಯನ್ನು ಭಾವಿಸಿ, ಜೀವಿಸಿ ತೋರಿಸಿದವರ ಪುಣ್ಯ…

17 hours ago