ಬೆಂಗಳೂರು: ಸ್ಟಾಕ್-ಮಾರುಕಟ್ಟೆಯ ಕಿಂಗ್ ಆಫ್ ಬುಲ್ಸ್ ಎಂದೇ ಖ್ಯಾತಿಯನ್ನು ಹೊಂದಿದ್ದ ಮತ್ತು ಭಾರತದ ಹೊಸ ಖಾಸಗಿ ವಿಮಾನಯಾನ ಸಂಸ್ಥೆಯಾದ ಆಕಾಶ ಏರ್ನ ಸಂಸ್ಥಾಪಕ ರಾಕೇಶ್ ಜುಂಜುನ್ವಾಲಾ ದೀರ್ಘಕಾಲದ ಅನಾರೋಗ್ಯದಿಂದಾಗಿ ಇಂದು (ಆಗಸ್ಟ್ 14) ಬೆಳಿಗ್ಗೆ ಮುಂಬೈನಲ್ಲಿ ನಿಧನರಾದರು.
ಇಂಡಿಯಾಸ್ ವಾರೆನ್ ಬಫೆಟ್ ಎಂದು ಕರೆಯಲ್ಪಟ್ಟ ಜುಂಜುನ್ವಾಲಾ ಅವರ ಉತ್ಸಾಹ ಮತ್ತು ಅದಮ್ಯ ಮನೋಭಾವಕ್ಕೆ ಹೆಸರುವಾಸಿಯಾಗಿದ್ದರು. ಸದ್ಯ ಅವರ ಸಕಾರಾತ್ಮಕತೆಯನ್ನು ಬಿಂಬಿಸುವ ಹಳೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಟ್ವಿಟರ್ನಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದ್ದು, ಜುಂಜುನ್ವಾಲಾ ಅವರು ಮಧುಮೇಹದಿಂದ ಬಳಲುತ್ತಿದ್ದಾಗ ಗಾಲಿಕುರ್ಚಿಯಲ್ಲಿ ಕುಳಿತಿರುವುದನ್ನು ಕಾಣಬಹುದು.
ಜೀವನದಲ್ಲಿ ಅವರಿಗೆ ಇದ್ದ ಉತ್ಸಾಹವನ್ನು ನಾವು ಈ ವಿಡಿಯೋದಲ್ಲಿ ಕಾಣಬಹುದು. ಅದೆಷ್ಟೋ ಜನರಿಗೆ ಸ್ಪೂರ್ತಿಯಾಗಿದ್ದರು. ತಮ್ಮ ಮಕ್ಕಳಿಗೆ 25 ವರ್ಷ ಆಗುವ ತನಕ ಜೀವಿತವಾಗಿರಬೇಕು ಎಂದು ಆಸೆ ಇಟ್ಟುಕೊಂಡಿದ್ದರು. ಆದರೆ ಇಂದು ಅವರು ಎಲ್ಲರನ್ನು ಬಿಟ್ಟು ಅಗಲಿರುವುದು ಎಲ್ಲರಿಗು ಬೇಸರ ಮೂಡಿಸಿದೆ.
ಎಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಿಂದ ಕೆಂಡಗಣ್ಣಸ್ವಾಮಿ ಗದ್ದಿಗೆ ಮಾರ್ಗವಾಗಿ ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ರಸ್ತೆಯ ಎರಡೂ ಬದಿಗಳಲ್ಲಿರುವ ಬಹುತೇಕ…
ಮೈಸೂರು ಮಹಾರಾಜರ ಕಾಲದಲ್ಲಿ ನಿರ್ಮಾಣಗೊಂಡ ಕಟ್ಟಡಗಳು ಇಂದಿಗೂ ಸದೃಢವಾಗಿ ಕಂಗೊಳಿಸುತ್ತಿರುವುದು ಮೈಸೂರಿನ ಭವ್ಯ ಪರಂಪರೆಗೆ ಸಾಕ್ಷಿಯಾಗಿವೆ. ಇಂತಹ ಪಾರಂಪರಿಕ ಕಟ್ಟಡಗಳ…
ಮಡಿಕೇರಿ: ಓದುವ ಛಲ, ಆತ್ಮವಿಶ್ವಾಸ, ಪ್ರೋತ್ಸಾಹ, ಮಾರ್ಗದರ್ಶನವಿದ್ದರೆ ಮಕ್ಕಳು ಸರ್ಕಾರಿ ಕಾಲೇಜಿನಲ್ಲಿ ಓದಿದರೂ ಉತ್ತಮ ಅಂಕ ಗಳಿಸಲು ಸಾಧ್ಯವಿದೆ. ಇದಕ್ಕೆ…
ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಪಿರಿಯಾಪಟ್ಟಣ: ತಂಗಿಗೆ ಆಸ್ತಿಯನ್ನು ನೀಡಲೇಬಾರದು ಎಂದು ತೀರ್ಮಾನಿಸಿ ತನ್ನ ಸೋದರ ಅಳಿಯನನ್ನು ಕೊಲ್ಲಲು…
ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…