ಬೆಂಗಳೂರು: ಸ್ಟಾಕ್-ಮಾರುಕಟ್ಟೆಯ ಕಿಂಗ್ ಆಫ್ ಬುಲ್ಸ್ ಎಂದೇ ಖ್ಯಾತಿಯನ್ನು ಹೊಂದಿದ್ದ ಮತ್ತು ಭಾರತದ ಹೊಸ ಖಾಸಗಿ ವಿಮಾನಯಾನ ಸಂಸ್ಥೆಯಾದ ಆಕಾಶ ಏರ್ನ ಸಂಸ್ಥಾಪಕ ರಾಕೇಶ್ ಜುಂಜುನ್ವಾಲಾ ದೀರ್ಘಕಾಲದ ಅನಾರೋಗ್ಯದಿಂದಾಗಿ ಇಂದು (ಆಗಸ್ಟ್ 14) ಬೆಳಿಗ್ಗೆ ಮುಂಬೈನಲ್ಲಿ ನಿಧನರಾದರು.
ಇಂಡಿಯಾಸ್ ವಾರೆನ್ ಬಫೆಟ್ ಎಂದು ಕರೆಯಲ್ಪಟ್ಟ ಜುಂಜುನ್ವಾಲಾ ಅವರ ಉತ್ಸಾಹ ಮತ್ತು ಅದಮ್ಯ ಮನೋಭಾವಕ್ಕೆ ಹೆಸರುವಾಸಿಯಾಗಿದ್ದರು. ಸದ್ಯ ಅವರ ಸಕಾರಾತ್ಮಕತೆಯನ್ನು ಬಿಂಬಿಸುವ ಹಳೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಟ್ವಿಟರ್ನಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದ್ದು, ಜುಂಜುನ್ವಾಲಾ ಅವರು ಮಧುಮೇಹದಿಂದ ಬಳಲುತ್ತಿದ್ದಾಗ ಗಾಲಿಕುರ್ಚಿಯಲ್ಲಿ ಕುಳಿತಿರುವುದನ್ನು ಕಾಣಬಹುದು.
ಜೀವನದಲ್ಲಿ ಅವರಿಗೆ ಇದ್ದ ಉತ್ಸಾಹವನ್ನು ನಾವು ಈ ವಿಡಿಯೋದಲ್ಲಿ ಕಾಣಬಹುದು. ಅದೆಷ್ಟೋ ಜನರಿಗೆ ಸ್ಪೂರ್ತಿಯಾಗಿದ್ದರು. ತಮ್ಮ ಮಕ್ಕಳಿಗೆ 25 ವರ್ಷ ಆಗುವ ತನಕ ಜೀವಿತವಾಗಿರಬೇಕು ಎಂದು ಆಸೆ ಇಟ್ಟುಕೊಂಡಿದ್ದರು. ಆದರೆ ಇಂದು ಅವರು ಎಲ್ಲರನ್ನು ಬಿಟ್ಟು ಅಗಲಿರುವುದು ಎಲ್ಲರಿಗು ಬೇಸರ ಮೂಡಿಸಿದೆ.
ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಹೂಗ್ಯಂ ವನ್ಯಜೀವಿ ವಲಯದ ಜಲ್ಲಿಪಾಳ್ಯ ಹತ್ತಿರ ಬೈಕ್ನಲ್ಲಿ…
ಬೆಳಗಾವಿ: ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ. ಇದು ಅವರ ಕೊನೆಯ ಅಧಿವೇಶನ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಲೇವಡಿ ಮಾಡಿದ್ದಾರೆ.…
ಮೈಸೂರಿನ ಕುವೆಂಪು ನಗರದ ಅಪೋಲೋ ಆಸ್ಪತ್ರೆಯ ಹಿಂಭಾಗ ದಲ್ಲಿರುವ ಬಿಜಿಎಸ್ ಪದವಿಪೂರ್ವ ಕಾಲೇಜಿನ ಎದುರಿನ ದೊಡ್ಡಮೋರಿ ಯಿಂದ ತೆಗೆದ ಕಸವನ್ನು…
ಕಳೆದ ಮೂರು ವರ್ಷಗಳ ಅವಧಿಯಲ್ಲಿ, ರಾಜ್ಯದಲ್ಲಿ ೨,೮೪೭ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ವಿಭಾಗ (ಎನ್ಸಿಆರ್ಬಿ)…
ಭಾರತದ ಶಿಕ್ಷಣ ನೀತಿ ಮಕ್ಕಳ ಆರೋಗ್ಯದ ಕುರಿತು ಸ್ಪಷ್ಟ ಮಾರ್ಗಸೂಚಿ ನೀಡಿದ್ದರೂ, ಬಹುತೇಕ ಶಾಲೆಗಳು ಇದನ್ನು ಪಾಲಿಸುತ್ತಿಲ್ಲ ಎಂಬುದು ವಿಷಾದಕರ…
ಕೇಂದ್ರ ಸರ್ಕಾರದಲ್ಲಿ ಕೃಷಿ, ರೈತ ಕಲ್ಯಾಣ ಮತ್ತು ಗ್ರಾಮೀಣ ಅಭಿವೃದ್ಧಿ ಸಚಿವರಾಗಿರುವ ಶಿವರಾಜ್ ಸಿಂಗ್ ಚೌಹಾಣ್ ಅವರು ಡಿಸೆಂಬರ್ ೧೬ರಂದು…