ಬೆಂಗಳೂರು: ಸ್ಟಾಕ್-ಮಾರುಕಟ್ಟೆಯ ಕಿಂಗ್ ಆಫ್ ಬುಲ್ಸ್ ಎಂದೇ ಖ್ಯಾತಿಯನ್ನು ಹೊಂದಿದ್ದ ಮತ್ತು ಭಾರತದ ಹೊಸ ಖಾಸಗಿ ವಿಮಾನಯಾನ ಸಂಸ್ಥೆಯಾದ ಆಕಾಶ ಏರ್ನ ಸಂಸ್ಥಾಪಕ ರಾಕೇಶ್ ಜುಂಜುನ್ವಾಲಾ ದೀರ್ಘಕಾಲದ ಅನಾರೋಗ್ಯದಿಂದಾಗಿ ಇಂದು (ಆಗಸ್ಟ್ 14) ಬೆಳಿಗ್ಗೆ ಮುಂಬೈನಲ್ಲಿ ನಿಧನರಾದರು.
ಇಂಡಿಯಾಸ್ ವಾರೆನ್ ಬಫೆಟ್ ಎಂದು ಕರೆಯಲ್ಪಟ್ಟ ಜುಂಜುನ್ವಾಲಾ ಅವರ ಉತ್ಸಾಹ ಮತ್ತು ಅದಮ್ಯ ಮನೋಭಾವಕ್ಕೆ ಹೆಸರುವಾಸಿಯಾಗಿದ್ದರು. ಸದ್ಯ ಅವರ ಸಕಾರಾತ್ಮಕತೆಯನ್ನು ಬಿಂಬಿಸುವ ಹಳೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಟ್ವಿಟರ್ನಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದ್ದು, ಜುಂಜುನ್ವಾಲಾ ಅವರು ಮಧುಮೇಹದಿಂದ ಬಳಲುತ್ತಿದ್ದಾಗ ಗಾಲಿಕುರ್ಚಿಯಲ್ಲಿ ಕುಳಿತಿರುವುದನ್ನು ಕಾಣಬಹುದು.
ಜೀವನದಲ್ಲಿ ಅವರಿಗೆ ಇದ್ದ ಉತ್ಸಾಹವನ್ನು ನಾವು ಈ ವಿಡಿಯೋದಲ್ಲಿ ಕಾಣಬಹುದು. ಅದೆಷ್ಟೋ ಜನರಿಗೆ ಸ್ಪೂರ್ತಿಯಾಗಿದ್ದರು. ತಮ್ಮ ಮಕ್ಕಳಿಗೆ 25 ವರ್ಷ ಆಗುವ ತನಕ ಜೀವಿತವಾಗಿರಬೇಕು ಎಂದು ಆಸೆ ಇಟ್ಟುಕೊಂಡಿದ್ದರು. ಆದರೆ ಇಂದು ಅವರು ಎಲ್ಲರನ್ನು ಬಿಟ್ಟು ಅಗಲಿರುವುದು ಎಲ್ಲರಿಗು ಬೇಸರ ಮೂಡಿಸಿದೆ.
ಬೆಂಡರವಾಡಿ ಕೆರೆಗೆ ಹಾರಿ ಮಂಡ್ಯ ಜಿಲ್ಲೆಯ ವ್ಯಕ್ತಿ ಆತ್ಮಹತ್ಯೆ ಚಾಮರಾಜನಗರ: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ…
ಹೈದರಾಬಾದ್: ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರ ಹೈದರಾಬಾದ್ನಲ್ಲಿ ಅವರ ಮನೆಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. 2016ರಲ್ಲಿ ನಿಧನರಾದ ಜಯಲಲಿತಾ…
ಬೆಂಗಳೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ…
ಬೆಂಗಳೂರು: ಇಲ್ಲಿನ ಯಲಹಂಕ ಠಾಣೆ ಪೊಲೀಸರು, ಸುಮಾರು 2 ಕೋಟಿ ರೂ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದು, ನೈಜೀರಿಯಾ ಮೂಲದ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಭಾರತೀಯ ಟೆನಿಸ್ ಐಕಾನ್ ಲಿಯಾಂಡರ್ ಪೇಸ್ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…
ಬೆಂಗಳೂರು: ಖಾಸಗಿ ಶಾಲೆಗಳು ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ 2026-27ನೇ ಸಾಲಿನ ಶುಲ್ಕವನ್ನು 5-10%, ಮತ್ತೆ ಕೆಲವು 10-15% ವರೆಗೆ ಏರಿಕೆ ಮಾಡಿವೆ.…