ದೇಶ- ವಿದೇಶ

ಕೂತಲ್ಲೇ ಉತ್ಸಾಹದಿಂದ ನೃತ್ಯ ಮಾಡಿರುವ ಕಿಂಗ್ ಆಫ್ ಬುಲ್ಸ್ : ವೈರಲ್‌ ವಿಡಿಯೋ

ಬೆಂಗಳೂರು: ಸ್ಟಾಕ್-ಮಾರುಕಟ್ಟೆಯ ಕಿಂಗ್ ಆಫ್ ಬುಲ್ಸ್ ಎಂದೇ ಖ್ಯಾತಿಯನ್ನು ಹೊಂದಿದ್ದ ಮತ್ತು ಭಾರತದ ಹೊಸ ಖಾಸಗಿ ವಿಮಾನಯಾನ ಸಂಸ್ಥೆಯಾದ ಆಕಾಶ ಏರ್‌ನ ಸಂಸ್ಥಾಪಕ ರಾಕೇಶ್ ಜುಂಜುನ್​ವಾಲಾ ದೀರ್ಘಕಾಲದ ಅನಾರೋಗ್ಯದಿಂದಾಗಿ ಇಂದು (ಆಗಸ್ಟ್​ 14) ಬೆಳಿಗ್ಗೆ ಮುಂಬೈನಲ್ಲಿ ನಿಧನರಾದರು.

ಇಂಡಿಯಾಸ್ ವಾರೆನ್ ಬಫೆಟ್ ಎಂದು ಕರೆಯಲ್ಪಟ್ಟ ಜುಂಜುನ್‌ವಾಲಾ ಅವರ ಉತ್ಸಾಹ ಮತ್ತು ಅದಮ್ಯ ಮನೋಭಾವಕ್ಕೆ ಹೆಸರುವಾಸಿಯಾಗಿದ್ದರು. ಸದ್ಯ ಅವರ ಸಕಾರಾತ್ಮಕತೆಯನ್ನು ಬಿಂಬಿಸುವ ಹಳೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಟ್ವಿಟರ್‌ನಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದ್ದು, ಜುಂಜುನ್‌ವಾಲಾ ಅವರು ಮಧುಮೇಹದಿಂದ ಬಳಲುತ್ತಿದ್ದಾಗ ಗಾಲಿಕುರ್ಚಿಯಲ್ಲಿ ಕುಳಿತಿರುವುದನ್ನು ಕಾಣಬಹುದು.

ಜೀವನದಲ್ಲಿ ಅವರಿಗೆ ಇದ್ದ ಉತ್ಸಾಹವನ್ನು ನಾವು ಈ ವಿಡಿಯೋದಲ್ಲಿ ಕಾಣಬಹುದು.  ಅದೆಷ್ಟೋ ಜನರಿಗೆ ಸ್ಪೂರ್ತಿಯಾಗಿದ್ದರು. ತಮ್ಮ ಮಕ್ಕಳಿಗೆ 25 ವರ್ಷ ಆಗುವ ತನಕ ಜೀವಿತವಾಗಿರಬೇಕು ಎಂದು ಆಸೆ ಇಟ್ಟುಕೊಂಡಿದ್ದರು. ಆದರೆ ಇಂದು ಅವರು ಎಲ್ಲರನ್ನು ಬಿಟ್ಟು ಅಗಲಿರುವುದು ಎಲ್ಲರಿಗು ಬೇಸರ ಮೂಡಿಸಿದೆ.  

andolana

Recent Posts

ಇಂಡೋನೇಷ್ಯಾದಲ್ಲಿ 7.7 ತೀವ್ರತೆಯ ಪ್ರಬಲ ಭೂಕಂಪ: ಮೃತರ ಸಂಖ್ಯೆ 40ಕ್ಕೆ ಏರಿಕೆ

ಜಕಾರ್ತ: ಇಂಡೋನೇಷ್ಯಾದ ಫ್ಲೋರ್ಸ್‌ ದ್ವೀಪದಲ್ಲಿ ಶನಿವಾರ ಮುಂಜಾನೆ 7.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಮೃತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ.…

3 hours ago

ಅಯೋಧ್ಯೆ ರಾಮಮಂದಿರ ಅರ್ಚಕರಿಗೆ ಹೊಸ ಡ್ರೆಸ್ ಕೋಡ್‌

ಅಯೋಧ್ಯೆ: ಅಯೋಧ್ಯೆ ರಾಮಮಂದಿರದ ಅರ್ಚಕರಿಗೆ ಹಳದಿ ರೇಷ್ಮೆ ಧೋತಿಯನ್ನು ಹೊಸ ಡ್ರೆಸ್‌ ಕೋಡ್‌ ಆಗಿ ಜಾರಿಗೆ ತರಲಾಗಿದೆ. ರಾಮನಂದಿ ಸಂಪ್ರದಾಯಕ್ಕೆ…

3 hours ago

ಶೂಟೌಟ್ ಪ್ರಕರಣ | ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆ : ಸಿಎಂ ಡಿ.ಕೆ.ಶಿವಕುಮಾರ್

ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…

13 hours ago

ಮುಂದಿನ ಆಗಸ್ಟ್‌ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…

17 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

18 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

19 hours ago