ದೇಶ- ವಿದೇಶ

ಮಹಾಕುಂಭಮೇಳದಲ್ಲಿ ಕಮಾಲ್‌ ಮಾಡಿದ ಕೆಎಂಎಫ್‌: ಒಂದು ಕೋಟಿಗೂ ಅಧಿಕ ಟೀ ಮಾರುವ ಗುರಿ

ಪ್ರಯಾಗ್‌ ರಾಜ್:‌ ಇಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ 10 ಟೀ ಪಾಯಿಂಟ್‌ ತೆರೆಯಲು ಕೆಎಂಎಫ್‌ ಒಪ್ಪಂದ ಮಾಡಿಕೊಂಡಿದೆ.

ಇದರ ಜೊತೆಗೆ ನಂದಿನಿ ಹಾಲಿನ ಬಳಕೆ ಹಾಗೂ ನಂದಿನಿ ಉತ್ಪನ್ನಗಳ ಮಾರಾಟ ನಡೆಯಲಿದೆ. ಈ ಟೀ ಪಾಯಿಂಟ್‌ನಿಂದ ಸುಮಾರು ಒಂದು ಕೋಟಿ ಟೀ ಮಾರಾಟ ಮಾಡುವ ಗುರಿಯನ್ನು ಕೆಎಂಎಫ್‌ ಹಾಕಿಕೊಂಡಿದೆ.

ಈ ಮೂಲಕ ಈ ಒಂದು ಮೇಳದಲ್ಲಿ ಅತೀ ಹೆಚ್ಚು ಟೀ ಮಾರಾಟ ಮಾಡಿದ ಸಂಸ್ಥೆಯೆಂದು ಗಿನ್ನಿಸ್‌ ದಾಖಲೆ ನಿರ್ಮಿಸುವ ಪ್ರಯತ್ನ ಮಾಡಲಿದೆ.

ಉತ್ತರ ಪ್ರದೇಶದ ಪ್ರಯಾಗ್‌ ರಾಜ್‌ನಲ್ಲಿ ಜನವರಿ.13ರಿಂದ ಪ್ರಾರಂಭವಾಗಿರುವ ಮಹಾಕುಂಭಮೇಳ 44 ದಿನಗಳ ಕಾಲ ನಡೆಯಲಿದ್ದು, ಈ ಮೇಳದಲ್ಲಿ ನಂದಿನಿ ಹಾಲಿನ ಮೂಲಕ ಖ್ಯಾತಿ ಪಡೆದಿರುವ ಕೆಎಂಎಫ್‌ ತನ್ನ ಕೈಚಳಕ ತೋರಿಸಲಿದೆ.

ಮಹಾಕುಂಭಮೇಳದಲ್ಲಿ ಲಕ್ಷಾಂತರ ಸಂಖ್ಯೆಯಲ್ಲಿ ನಾಗಸಾಧುಗಳು ಶಾಹಿ ಸ್ನಾನದಲ್ಲಿ ಭಾಗಿಯಾಗಿದ್ದು, ಗಂಗಾ, ಯಮುನಾ, ಸರಸ್ವತಿ ನದಿಗಳ ಸಂಗಮದಲ್ಲಿ ಪುಣ್ಯ ಸ್ನಾನ ನಡೆಯುತ್ತಿದೆ.

ಈ ಮಹಾಕುಂಭಮೇಳವು ಫೆಬ್ರವರಿ.26ರ ಶಿವರಾತ್ರಿವರೆಗೂ ನಡೆಯಲಿದ್ದು, ಕೋಟ್ಯಾಂತರ ಮಂದಿ ಪುಣ್ಯಸ್ನಾನ ಮಾಡಲಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ರಾಜ್ಯದ 50 ವರ್ಷಗಳ ಹಳೆಯ ಎಲ್ಲಾ ಡ್ಯಾಂ ಗೇಟ್‌ ಬದಲಾವಣೆಗೆ ನಿರ್ಧಾರ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್‌ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ…

5 hours ago

ಗೃಹ ಬಳಕೆ ಗ್ಯಾಸ್‌ ಸಿಲಿಂಡರ್‌ಗೆ ಸಮಸ್ಯೆ ಇಲ್ಲ: ಸಚಿವ ಮುನಿಯಪ್ಪ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್‌ ಸಿಲಿಂಡರ್‌ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…

5 hours ago

ಗುಂಡ್ಲುಪೇಟೆ: ಬರಗಿ ಗ್ರಾಮದಲ್ಲಿ ದೇವಸ್ಥಾನದ ಬಾಗಿಲು ಮುರಿದು ದೇವರನ್ನೇ ಹೊತ್ತೋಯ್ದ ಕಳ್ಳರು

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…

5 hours ago

ನಮ್‌ ಜೀವನ ನಮ್ದಲ್ಲಾ.? ಕನ್ನಡದಲ್ಲೇ ಪೋಸ್ಟ್‌ ಹಾಕಿದ ರಶ್ಮಿಕಾ ಮಂದಣ್ಣ

ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್‌ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…

5 hours ago

ಅನೈತಿಕ ಸಂಬಂಧ; ಜೋಡಿ ಕೊಲೆ: ಮಹಿಳೆ ಸೋದರನಿಂದಲೇ ಕೃತ್ಯ

ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…

6 hours ago

ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜುಗೆ ಜಾಮೀನು ಮಂಜೂರು

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಜಾಮೀನು…

6 hours ago