ಪ್ರಯಾಗ್ ರಾಜ್: ಇಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ 10 ಟೀ ಪಾಯಿಂಟ್ ತೆರೆಯಲು ಕೆಎಂಎಫ್ ಒಪ್ಪಂದ ಮಾಡಿಕೊಂಡಿದೆ.
ಇದರ ಜೊತೆಗೆ ನಂದಿನಿ ಹಾಲಿನ ಬಳಕೆ ಹಾಗೂ ನಂದಿನಿ ಉತ್ಪನ್ನಗಳ ಮಾರಾಟ ನಡೆಯಲಿದೆ. ಈ ಟೀ ಪಾಯಿಂಟ್ನಿಂದ ಸುಮಾರು ಒಂದು ಕೋಟಿ ಟೀ ಮಾರಾಟ ಮಾಡುವ ಗುರಿಯನ್ನು ಕೆಎಂಎಫ್ ಹಾಕಿಕೊಂಡಿದೆ.
ಈ ಮೂಲಕ ಈ ಒಂದು ಮೇಳದಲ್ಲಿ ಅತೀ ಹೆಚ್ಚು ಟೀ ಮಾರಾಟ ಮಾಡಿದ ಸಂಸ್ಥೆಯೆಂದು ಗಿನ್ನಿಸ್ ದಾಖಲೆ ನಿರ್ಮಿಸುವ ಪ್ರಯತ್ನ ಮಾಡಲಿದೆ.
ಉತ್ತರ ಪ್ರದೇಶದ ಪ್ರಯಾಗ್ ರಾಜ್ನಲ್ಲಿ ಜನವರಿ.13ರಿಂದ ಪ್ರಾರಂಭವಾಗಿರುವ ಮಹಾಕುಂಭಮೇಳ 44 ದಿನಗಳ ಕಾಲ ನಡೆಯಲಿದ್ದು, ಈ ಮೇಳದಲ್ಲಿ ನಂದಿನಿ ಹಾಲಿನ ಮೂಲಕ ಖ್ಯಾತಿ ಪಡೆದಿರುವ ಕೆಎಂಎಫ್ ತನ್ನ ಕೈಚಳಕ ತೋರಿಸಲಿದೆ.
ಮಹಾಕುಂಭಮೇಳದಲ್ಲಿ ಲಕ್ಷಾಂತರ ಸಂಖ್ಯೆಯಲ್ಲಿ ನಾಗಸಾಧುಗಳು ಶಾಹಿ ಸ್ನಾನದಲ್ಲಿ ಭಾಗಿಯಾಗಿದ್ದು, ಗಂಗಾ, ಯಮುನಾ, ಸರಸ್ವತಿ ನದಿಗಳ ಸಂಗಮದಲ್ಲಿ ಪುಣ್ಯ ಸ್ನಾನ ನಡೆಯುತ್ತಿದೆ.
ಈ ಮಹಾಕುಂಭಮೇಳವು ಫೆಬ್ರವರಿ.26ರ ಶಿವರಾತ್ರಿವರೆಗೂ ನಡೆಯಲಿದ್ದು, ಕೋಟ್ಯಾಂತರ ಮಂದಿ ಪುಣ್ಯಸ್ನಾನ ಮಾಡಲಿದ್ದಾರೆ.
ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…
ಮೈಸೂರು: ಮೂವರು ಬೇಟೆಗಾರರ ಎನ್ಕೌಂಟರ್ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್ ಬೋಸ್ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…
ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…
ಮಹಾದೇಶ್ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…
ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…