ದೇಶ- ವಿದೇಶ

ಚೀನಾದ ಶಿಶುವಿಹಾರದ ಮೇಲೆ ಚಾಕುವಿನಿಂದ ದಾಳಿ

ಬೀಜಿಂಗ್: ಆಗ್ನೇಯ ಚೀನಾದ ಜಿಯಾಂಕ್ಸಿ ಪ್ರಾಂತ್ಯದ ಶಿಶುವಿಹಾರದಲ್ಲಿ ಬುಧವಾರ ನಡೆದ ಚಾಕು ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದು, ಆರು ಮಂದಿ  ಗಾಯಗೊಂಡಿದ್ದಾರೆ. ಸ್ಥಳೀಯ ಸಮಯ ಬೆಳಗ್ಗೆ 10:00 ಗಂಟೆಗೆ (0200 GMT) ಆನ್‌ಫು ಕೌಂಟಿಯ ಖಾಸಗಿ ಶಿಶುವಿಹಾರಕ್ಕೆ ಕ್ಯಾಪ್ ಮತ್ತು ಮಾಸ್ಕ್  ಧರಿಸಿದ ದುಷ್ಕರ್ಮಿ ಪ್ರವೇಶಿಸಿದ್ದನು ಎಂದು ಚೀನಾದ ವೈಬೊದಲ್ಲಿ ಪ್ರಕಟವಾದ ಹೇಳಿಕೆಯಲ್ಲಿ ಪೊಲೀಸರು ತಿಳಿಸಿದ್ದಾರೆ. 48 ವರ್ಷದ ಆರೋಪಿ ಇನ್ನೂ ತಲೆಮರೆಸಿಕೊಂಡಿದ್ದಾನೆ ಎಂದು ಅವರು ತಿಳಿಸಿದ್ದಾರೆ.

ಸಾರ್ವಜನಿಕ ಭದ್ರತಾ ಸಂಸ್ಥೆಗಳು ಶಂಕಿತನನ್ನು ಸೆರೆಹಿಡಿಯಲು ಎಲ್ಲ ಪ್ರಯತ್ನಗಳನ್ನು ಮಾಡುತ್ತಿವೆ ಎಂದು ಪೊಲೀಸ್ ಹೇಳಿಕೆ ತಿಳಿಸಿದೆ. ಬೀಜಿಂಗ್ ಡೈಲಿ ಹಂಚಿಕೊಂಡ ವಿಡಿಯೊದಲ್ಲಿ, ಪೊಲೀಸ್ ಅಧಿಕಾರಿಯೊಬ್ಬರು ತನ್ನ ತೋಳುಗಳಲ್ಲಿ ಪುಟ್ಟ ಮಗುವನ್ನು ಆಂಬ್ಯುಲೆನ್ಸ್‌ಗೆ ಸಾಗಿಸುತ್ತಿರುವುದನ್ನು ಕಾಣಬಹುದು. ಹತ್ಯೆಯಾದ ಮಕ್ಕಳ ವಯಸ್ಸು ಬಹಿರಂಗ ಪಡಿಸಿಲ್ಲ.

ಚೀನಾದಲ್ಲಿ ಸಾಮೂಹಿಕ ಹಿಂಸಾತ್ಮಕ ಅಪರಾಧ ತುಂಬಾನೇ ಕಡಿಮೆ. ಇಲ್ಲಿನ ನಾಗರಿಕರು ಬಂದೂಕುಗಳನ್ನು ಹೊಂದುವುದನ್ನು ಸರ್ಕಾರ ಕಟ್ಟುನಿಟ್ಟಾಗಿ ನಿಷೇಧಿಸಿದ್ದು ಇತ್ತೀಚಿನ ವರ್ಷಗಳಲ್ಲಿ ಸಾಮೂಹಿಕ ಇರಿತ ಪ್ರಕರಣಗಳು ನಡೆಯುತ್ತಿಲೆ. ನಿರ್ದಿಷ್ಟವಾಗಿ ಶಿಶುವಿಹಾರ ಮತ್ತು ಶಾಲಾ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಮಾರಣಾಂತಿಕ ಚಾಕು ದಾಳಿಗಳು ರಾಷ್ಟ್ರವ್ಯಾಪಿ ಸಂಭವಿಸಿವೆ.

ಕಳೆದ ಏಪ್ರಿಲ್‌ನಲ್ಲಿ, ದಕ್ಷಿಣ ಚೀನಾದ ಶಿಶುವಿಹಾರದಲ್ಲಿ  ನಡೆದ ಚಾಕು ದಾಳಿಯಲ್ಲಿ  ಇಬ್ಬರು ಮಕ್ಕಳು ಹತ್ಯೆಯಾಗಿದ್ದು 16 ಮಂದಿ ಗಾಯಗೊಂಡಿದ್ದರು.

<blockquote class=”twitter-tweet”><p lang=”en” dir=”ltr”>Three people were killed and six others injured in a knife attack at a kindergarten in southeast China&#39;s Jianxi province. A &quot;gangster wearing a cap and mask&quot; stormed the private kindergarten in Anfu county, police said. The 48-year-old suspect is still at large: AFP News Agency</p>&mdash; ANI (@ANI) <a href=”https://twitter.com/ANI/status/1554753654695292928?ref_src=twsrc%5Etfw”>August 3, 2022</a></blockquote> <script async src=”https://platform.twitter.com/widgets.js” charset=”utf-8″></script>
andolana

Recent Posts

ಎಲ್ಲೆಡೆ ಕ್ರಿಸ್‌ಮಸ್ ಹಬ್ಬದ ಸಂಭ್ರಮ: ಗಣ್ಯರಿಂದ ಶುಭಾಶಯಗಳ ಮಹಾಪೂರ

ಬೆಂಗಳೂರು: ಮಧ್ಯರಾತ್ರಿಯಿಂದಲೇ ಎಲ್ಲೆಡೆ ಕ್ರಿಸ್‌ಮಸ್‌ ಸಡಗರ ಮನೆ ಮಾಡಿದೆ. ಪ್ರತಿ ವರ್ಷದಂತೆ ಈ ವರ್ಷವು ಸಹ ಕ್ರಿಸ್‌ಮಸ್‌ ಹಬ್ಬವು ನಂಬಿಕೆಯೆಂಬ…

8 mins ago

ಚಿತ್ರದುರ್ಗದಲ್ಲಿ ಭೀಕರ ಬಸ್‌ ಅಪಘಾತ ಪ್ರಕರಣ: ಮೃತರ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಗೋರ್ಲತ್ತು ಬಳಿ ತಡರಾತ್ರಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 10ಕ್ಕೂ…

58 mins ago

ಭೀಕರ ರಸ್ತೆ ದುರಂತ: ಬಸ್‌ಗೆ ಬೆಂಕಿ ತಗುಲಿ 10ಕ್ಕೂ ಹೆಚ್ಚು ಮಂದಿ ಸಾವು

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಗೋರ್ಲತ್ತು ಕ್ರಾಸ್‌ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 10ಕ್ಕೂ ಹೆಚ್ಚು ಮಂದಿ ಸಜೀವ…

1 hour ago

ಓದುಗರ ಪತ್ರ:  ಮರ್ಯಾದಾ ಹತ್ಯೆಯಲ್ಲಿ ಜಾತಿ ಜೀವಂತಿಕೆ

ಜಾತಿ ವ್ಯವಸ್ಥೆಯು ಅಸಮಾನತೆಯನ್ನು ಸೃಷ್ಟಿ ಮಾಡಿದೆ. ಈ ಜಾತಿ ವ್ಯವಸ್ಥೆ ಈಗಲೂ ಜೀವಂತ ವಾಗಿದೆ ಎನ್ನುವುದಕ್ಕೆ ಬೇರೆ ಜಾತಿಯ ಹುಡುಗನನ್ನು…

1 hour ago

ಓದುಗರ ಪತ್ರ:  ಚಲನಚಿತ್ರ ರಂಗದಲ್ಲಿ ಏನಿದು ಗದ್ದಲ?

೬೦ರ ದಶಕದ ಸಿನಿಮಾರಂಗ ಯಾವ ಗಲಾಟೆ ಇಲ್ಲದೆ ಸಾಗಿತ್ತು. ರಾಜಕುಮಾರ್ ಅವರ ಸಮಕಾಲಿನ ನಟರಾದ ಕಲ್ಯಾಣ್ ಕುಮಾರ್, ಶ್ರೀನಾಥ್, ನರಸಿಂಹರಾಜು,…

1 hour ago

ಓದುಗರ ಪತ್ರ: ಚಾಮುಂಡಿಬೆಟ್ಟ ಯಥಾಸ್ಥಿತಿಯಲ್ಲೇ ಇರಲಿ

ನಾಡದೇವತೆಯಾದ ಶ್ರೀ ಚಾಮುಂಡೇಶ್ವರಿ ನೆಲೆಸಿರುವ ಬೆಟ್ಟವನ್ನು ಯಥಾಸ್ಥಿತಿಯಲ್ಲಿ ಇರುವಂತೆ ಉಳಿಸಿಕೊಳ್ಳುವುದು ಮೈಸೂರಿಗರ ಆದ್ಯ ಕರ್ತವ್ಯವಾಗಿದೆ. ಸಂರಕ್ಷಿತ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ…

1 hour ago