ದೇಶ- ವಿದೇಶ

ಚೀನಾದ ಶಿಶುವಿಹಾರದ ಮೇಲೆ ಚಾಕುವಿನಿಂದ ದಾಳಿ

ಬೀಜಿಂಗ್: ಆಗ್ನೇಯ ಚೀನಾದ ಜಿಯಾಂಕ್ಸಿ ಪ್ರಾಂತ್ಯದ ಶಿಶುವಿಹಾರದಲ್ಲಿ ಬುಧವಾರ ನಡೆದ ಚಾಕು ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದು, ಆರು ಮಂದಿ  ಗಾಯಗೊಂಡಿದ್ದಾರೆ. ಸ್ಥಳೀಯ ಸಮಯ ಬೆಳಗ್ಗೆ 10:00 ಗಂಟೆಗೆ (0200 GMT) ಆನ್‌ಫು ಕೌಂಟಿಯ ಖಾಸಗಿ ಶಿಶುವಿಹಾರಕ್ಕೆ ಕ್ಯಾಪ್ ಮತ್ತು ಮಾಸ್ಕ್  ಧರಿಸಿದ ದುಷ್ಕರ್ಮಿ ಪ್ರವೇಶಿಸಿದ್ದನು ಎಂದು ಚೀನಾದ ವೈಬೊದಲ್ಲಿ ಪ್ರಕಟವಾದ ಹೇಳಿಕೆಯಲ್ಲಿ ಪೊಲೀಸರು ತಿಳಿಸಿದ್ದಾರೆ. 48 ವರ್ಷದ ಆರೋಪಿ ಇನ್ನೂ ತಲೆಮರೆಸಿಕೊಂಡಿದ್ದಾನೆ ಎಂದು ಅವರು ತಿಳಿಸಿದ್ದಾರೆ.

ಸಾರ್ವಜನಿಕ ಭದ್ರತಾ ಸಂಸ್ಥೆಗಳು ಶಂಕಿತನನ್ನು ಸೆರೆಹಿಡಿಯಲು ಎಲ್ಲ ಪ್ರಯತ್ನಗಳನ್ನು ಮಾಡುತ್ತಿವೆ ಎಂದು ಪೊಲೀಸ್ ಹೇಳಿಕೆ ತಿಳಿಸಿದೆ. ಬೀಜಿಂಗ್ ಡೈಲಿ ಹಂಚಿಕೊಂಡ ವಿಡಿಯೊದಲ್ಲಿ, ಪೊಲೀಸ್ ಅಧಿಕಾರಿಯೊಬ್ಬರು ತನ್ನ ತೋಳುಗಳಲ್ಲಿ ಪುಟ್ಟ ಮಗುವನ್ನು ಆಂಬ್ಯುಲೆನ್ಸ್‌ಗೆ ಸಾಗಿಸುತ್ತಿರುವುದನ್ನು ಕಾಣಬಹುದು. ಹತ್ಯೆಯಾದ ಮಕ್ಕಳ ವಯಸ್ಸು ಬಹಿರಂಗ ಪಡಿಸಿಲ್ಲ.

ಚೀನಾದಲ್ಲಿ ಸಾಮೂಹಿಕ ಹಿಂಸಾತ್ಮಕ ಅಪರಾಧ ತುಂಬಾನೇ ಕಡಿಮೆ. ಇಲ್ಲಿನ ನಾಗರಿಕರು ಬಂದೂಕುಗಳನ್ನು ಹೊಂದುವುದನ್ನು ಸರ್ಕಾರ ಕಟ್ಟುನಿಟ್ಟಾಗಿ ನಿಷೇಧಿಸಿದ್ದು ಇತ್ತೀಚಿನ ವರ್ಷಗಳಲ್ಲಿ ಸಾಮೂಹಿಕ ಇರಿತ ಪ್ರಕರಣಗಳು ನಡೆಯುತ್ತಿಲೆ. ನಿರ್ದಿಷ್ಟವಾಗಿ ಶಿಶುವಿಹಾರ ಮತ್ತು ಶಾಲಾ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಮಾರಣಾಂತಿಕ ಚಾಕು ದಾಳಿಗಳು ರಾಷ್ಟ್ರವ್ಯಾಪಿ ಸಂಭವಿಸಿವೆ.

ಕಳೆದ ಏಪ್ರಿಲ್‌ನಲ್ಲಿ, ದಕ್ಷಿಣ ಚೀನಾದ ಶಿಶುವಿಹಾರದಲ್ಲಿ  ನಡೆದ ಚಾಕು ದಾಳಿಯಲ್ಲಿ  ಇಬ್ಬರು ಮಕ್ಕಳು ಹತ್ಯೆಯಾಗಿದ್ದು 16 ಮಂದಿ ಗಾಯಗೊಂಡಿದ್ದರು.

<blockquote class=”twitter-tweet”><p lang=”en” dir=”ltr”>Three people were killed and six others injured in a knife attack at a kindergarten in southeast China&#39;s Jianxi province. A &quot;gangster wearing a cap and mask&quot; stormed the private kindergarten in Anfu county, police said. The 48-year-old suspect is still at large: AFP News Agency</p>&mdash; ANI (@ANI) <a href=”https://twitter.com/ANI/status/1554753654695292928?ref_src=twsrc%5Etfw”>August 3, 2022</a></blockquote> <script async src=”https://platform.twitter.com/widgets.js” charset=”utf-8″></script>
andolana

Recent Posts

ನಾಪತ್ತೆಯಾಗಿದ್ದ ಪ್ರಥಮ ದರ್ಜೆ ಕಂಟ್ರಾಕ್ಟರ್‌ ಶವವಾಗಿ ಪತ್ತೆ

ಮಂಡ್ಯ: ಕಳೆದ ನಾಲ್ಕು ದಿನಗಳ ಹಿಂದೆ ಕಾಣೆಯಾಗಿದ್ದ ಪ್ರಥಮ ದರ್ಜೆ ಗುತ್ತಿಗೆದಾರ ಕಾವೇರಿ ನದಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಮಂಡ್ಯ…

7 mins ago

ಬಾಂಗ್ಲಾ ಮಾಜಿ ಸ್ಪೀಕರ್‌ ಶಿರಿನ್‌ ಶರ್ಮಿನ್‌ ಚೌಧರಿ ಬಂಧನ

ಢಾಕಾ: ಬಾಂಗ್ಲಾದೇಶದ ಮೊದಲ ಮಹಿಳಾ ಸ್ಫೀಕರ್‌ ಆಗಿದ್ದ ಶಿರಿನ್‌ ಶರ್ಮಿನ್‌ ಚೌಧರಿ ಅವರನ್ನು ಢಾಕಾ ಮೆಟ್ರೋಪಾಲಿಟನ್‌ ಪೊಲೀಸರ ಪತ್ತೇದಾರಿ ವಿಭಾಗವು…

22 mins ago

ಮುಡಾ ಪ್ರಕರಣದಲ್ಲಿ ಸಿಎಂ ಕುಟುಂಬಕ್ಕೆ ತಾತ್ಕಾಲಿಕ ರಿಲೀಫ್‌ ಅಷ್ಟೇ ಸಿಕ್ಕಿರೋದು: ಸ್ನೇಹಮಯಿ ಕೃಷ್ಣ

ಮೈಸೂರು: ಮೈಸೂರು ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಕುಟುಂಬಕ್ಕೆ ತಾತ್ಕಾಲಿಕ ರಿಲೀಫ್‌ ಅಷ್ಟೇ ಸಿಕ್ಕಿರೋದು ಎಂದು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ…

40 mins ago

ಸಿಎಂ ಕ್ಷೇತ್ರದಲ್ಲಿ ರೈತರ ವಿರೋಧದ ನಡುವೆಯೂ ನಿಮ್ಹಾನ್ಸ್‌ ನಿರ್ಮಾಣಕ್ಕೆ ಮುಂದಾದ ಮೈಸೂರು ಜಿಲ್ಲಾಡಳಿತ

ಮೈಸೂರು: ಸಿಎಂ ಸಿದ್ದರಾಮಯ್ಯ ಕ್ಷೇತ್ರದಲ್ಲಿ ರೈತರ ವಿರೋಧದ ನಡುವೆಯೂ ನಿಮ್ಹಾನ್ಸ್‌ ಆಸ್ಪತ್ರೆ ನಿರ್ಮಾಣಕ್ಕೆ ಮೈಸೂರು ಜಿಲ್ಲಾಡಳಿತ ಮುಂದಾಗಿದೆ. ವರುಣ ಕ್ಷೇತ್ರದ…

60 mins ago

ಓದುಗರ ಪತ್ರ: ಹಗಲು ದರೋಡೆಯಲ್ಲದೆ ಇನ್ನೇನು?

ಪಶ್ಚಿಮ ಏಷ್ಯಾದಲ್ಲಿ ಅಮೆರಿಕ- ಇಸ್ರೇಲ್ ಮತ್ತು ಇರಾನ್ ನಡುವೆ ಯುದ್ಧ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸ್ವಲ್ಪ ಮಟ್ಟಿಗೆ ವಾಣಿಜ್ಯ ಸಿಲಿಂಡರ್ ಅಭಾವ…

2 hours ago

ಓದುಗರ ಪತ್ರ: ಯುದ್ಧದ ಪರಿಣಾಮದಿಂದ ಜೀವನ ಕಷ್ಟ..ಕಷ್ಟ…

ಇರಾನ್-ಅಮೆರಿಕ-ಇಸ್ರೇಲ್ ಯುದ್ಧವು ೩೭ನೇ ದಿನಕ್ಕೆ ಕಾಲಿಟ್ಟಿದೆ. ಇದರ ಪರಿಣಾಮ ಅಗತ್ಯ ವಸ್ತುಗಳ ಬೆಲೆ ಏರಿಕೆಗಳು ಕಣ್ಣೀರು ತರಿಸುತ್ತಿದೆ. ಎಲ್‌ಪಿಜಿ ಗ್ಯಾಸ್…

2 hours ago