ದೇಶ- ವಿದೇಶ

ಚೀನಾದ ಶಿಶುವಿಹಾರದ ಮೇಲೆ ಚಾಕುವಿನಿಂದ ದಾಳಿ

ಬೀಜಿಂಗ್: ಆಗ್ನೇಯ ಚೀನಾದ ಜಿಯಾಂಕ್ಸಿ ಪ್ರಾಂತ್ಯದ ಶಿಶುವಿಹಾರದಲ್ಲಿ ಬುಧವಾರ ನಡೆದ ಚಾಕು ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದು, ಆರು ಮಂದಿ  ಗಾಯಗೊಂಡಿದ್ದಾರೆ. ಸ್ಥಳೀಯ ಸಮಯ ಬೆಳಗ್ಗೆ 10:00 ಗಂಟೆಗೆ (0200 GMT) ಆನ್‌ಫು ಕೌಂಟಿಯ ಖಾಸಗಿ ಶಿಶುವಿಹಾರಕ್ಕೆ ಕ್ಯಾಪ್ ಮತ್ತು ಮಾಸ್ಕ್  ಧರಿಸಿದ ದುಷ್ಕರ್ಮಿ ಪ್ರವೇಶಿಸಿದ್ದನು ಎಂದು ಚೀನಾದ ವೈಬೊದಲ್ಲಿ ಪ್ರಕಟವಾದ ಹೇಳಿಕೆಯಲ್ಲಿ ಪೊಲೀಸರು ತಿಳಿಸಿದ್ದಾರೆ. 48 ವರ್ಷದ ಆರೋಪಿ ಇನ್ನೂ ತಲೆಮರೆಸಿಕೊಂಡಿದ್ದಾನೆ ಎಂದು ಅವರು ತಿಳಿಸಿದ್ದಾರೆ.

ಸಾರ್ವಜನಿಕ ಭದ್ರತಾ ಸಂಸ್ಥೆಗಳು ಶಂಕಿತನನ್ನು ಸೆರೆಹಿಡಿಯಲು ಎಲ್ಲ ಪ್ರಯತ್ನಗಳನ್ನು ಮಾಡುತ್ತಿವೆ ಎಂದು ಪೊಲೀಸ್ ಹೇಳಿಕೆ ತಿಳಿಸಿದೆ. ಬೀಜಿಂಗ್ ಡೈಲಿ ಹಂಚಿಕೊಂಡ ವಿಡಿಯೊದಲ್ಲಿ, ಪೊಲೀಸ್ ಅಧಿಕಾರಿಯೊಬ್ಬರು ತನ್ನ ತೋಳುಗಳಲ್ಲಿ ಪುಟ್ಟ ಮಗುವನ್ನು ಆಂಬ್ಯುಲೆನ್ಸ್‌ಗೆ ಸಾಗಿಸುತ್ತಿರುವುದನ್ನು ಕಾಣಬಹುದು. ಹತ್ಯೆಯಾದ ಮಕ್ಕಳ ವಯಸ್ಸು ಬಹಿರಂಗ ಪಡಿಸಿಲ್ಲ.

ಚೀನಾದಲ್ಲಿ ಸಾಮೂಹಿಕ ಹಿಂಸಾತ್ಮಕ ಅಪರಾಧ ತುಂಬಾನೇ ಕಡಿಮೆ. ಇಲ್ಲಿನ ನಾಗರಿಕರು ಬಂದೂಕುಗಳನ್ನು ಹೊಂದುವುದನ್ನು ಸರ್ಕಾರ ಕಟ್ಟುನಿಟ್ಟಾಗಿ ನಿಷೇಧಿಸಿದ್ದು ಇತ್ತೀಚಿನ ವರ್ಷಗಳಲ್ಲಿ ಸಾಮೂಹಿಕ ಇರಿತ ಪ್ರಕರಣಗಳು ನಡೆಯುತ್ತಿಲೆ. ನಿರ್ದಿಷ್ಟವಾಗಿ ಶಿಶುವಿಹಾರ ಮತ್ತು ಶಾಲಾ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಮಾರಣಾಂತಿಕ ಚಾಕು ದಾಳಿಗಳು ರಾಷ್ಟ್ರವ್ಯಾಪಿ ಸಂಭವಿಸಿವೆ.

ಕಳೆದ ಏಪ್ರಿಲ್‌ನಲ್ಲಿ, ದಕ್ಷಿಣ ಚೀನಾದ ಶಿಶುವಿಹಾರದಲ್ಲಿ  ನಡೆದ ಚಾಕು ದಾಳಿಯಲ್ಲಿ  ಇಬ್ಬರು ಮಕ್ಕಳು ಹತ್ಯೆಯಾಗಿದ್ದು 16 ಮಂದಿ ಗಾಯಗೊಂಡಿದ್ದರು.

<blockquote class=”twitter-tweet”><p lang=”en” dir=”ltr”>Three people were killed and six others injured in a knife attack at a kindergarten in southeast China&#39;s Jianxi province. A &quot;gangster wearing a cap and mask&quot; stormed the private kindergarten in Anfu county, police said. The 48-year-old suspect is still at large: AFP News Agency</p>&mdash; ANI (@ANI) <a href=”https://twitter.com/ANI/status/1554753654695292928?ref_src=twsrc%5Etfw”>August 3, 2022</a></blockquote> <script async src=”https://platform.twitter.com/widgets.js” charset=”utf-8″></script>
andolana

Recent Posts

ಕಪಿಲಾ ತೀರದಲ್ಲಿ ಮುಂದುವರಿದ ಬಿಸಿ ನೀರಿನ ಸುಲಿಗೆ

ಎಸ್.ಎಸ್.ಭಟ್ ನಂಜನಗೂಡು: ಅಧಿಕಾರಿಗಳ ನೋಟಿಸ್‌ಗೂ ಕ್ಯಾರೆ ಎನ್ನದ ಶ್ರೀಕಂಠೇಶ್ವರ ದೇವಾಲಯದ ಸಿಬ್ಬಂದಿ ನಂಜನಗೂಡು: ಇಲ್ಲಿನ ಪ್ರಸಿದ್ಧ ಶ್ರೀಕಂಠೇಶ್ವರ ದೇವಾಲಯದ ಕಪಿಲಾ…

3 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಆಸಿಡ್ ದಾಳಿಯ ಸಂತ್ರಸ್ತೆಯರನ್ನು ಸಂತೈಸುವ ‘ದಿ ನೆಸ್ಟ್ ಸಲೂನ್’

ಬ್ಯೂಟಿ ಪಾರ್ಲರ್‌ಗಳನ್ನು ತೆರೆದು ಅದರಿಂದ ಬದುಕು ನಡೆಸಲು ತರಬೇತಿ ೨೦೧೪ರಲ್ಲಿ ದೆಹಲಿಯ ಅಂಶು ರಜಪೂತ್ ೧೫ ವರ್ಷದವಳಾಗಿದ್ದಾಗ ಎಂದಿನಂತೆ ತನ್ನ…

3 hours ago

ಜಿರಳೆಗಳು ಎದ್ದಿವೆ, ವ್ಯವಸ್ಥೆಯ ಗಟಾರ ತೊಳೆಯುವವರು ಯಾರು?

ಎಸ್.ಸಿ. ದಿನೇಶ್ ಕುಮಾರ್, ಹಿರಿಯ ಪತ್ರಕರ್ತರು ಕಾಕ್ರೋಚ್ ಜನತಾ ಪಾರ್ಟಿ ನಮ್ಮ ದೇಶದ ಯುವಜನರ ಹತಾಶೆ, ಸಿಟ್ಟು, ಆಕ್ರೋಶಕ್ಕೆ  ಹಿಡಿದ…

3 hours ago

ಅಕಾಲಿಕ ಮಳೆ; ಮಾವು ಇಳುವರಿ ಕುಂಠಿತ

ಚಿರಂಜೀವಿ ಸಿ. ಹುಲ್ಲಹಳ್ಳಿ ಬೆಳೆಗಾರ ಕಂಗಾಲು; ನಷ್ಟಕ್ಕೆ ಪರಿಹಾರ ಕಲ್ಪಿಸಲು ರೈತರ ಒತ್ತಾಯ ಮೈಸೂರು: ಮಳೆ ಕೊರತೆ ಮತ್ತು ಹವಾಮಾನ ವೈಪರೀತ್ಯದಿಂದಾಗಿ…

3 hours ago

ಗೂಡ್ಸ್ ಆಟೋ ಉರುಳಿ ಬಿದ್ದು ಮಹಿಳೆ ಸಾವು: ಹಲವರಿಗೆ ಗಾಯ

ಮಂಡ್ಯ : ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ಆಟೋ (ಟಾಟಾ ಏಸ್) ರಸ್ತೆ ಬದಿಗೆ ಉರುಳಿಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟು,…

13 hours ago