ಬೆಂಗಳೂರು: ಕೋಲ್ಕತ್ತಾ ವೈದ್ಯರ ಮೇಲೆ ಅತ್ಯಾಚಾರವೆಸಗಿ ಬರ್ಬರವಾಗಿ ಹತ್ಯೆ ಮಾಡಿರುವ ಪ್ರಕರಣವನ್ನು ಸ್ಯಾಂಡಲ್ವುಡ್ ನಟ ಧ್ರುವಸರ್ಜಾ ಖಂಡಿಸಿದ್ದಾರೆ.
ಆಗಸ್ಟ್.9ರಂದು ರಾತ್ರಿ ಪಾಳಿಯಲ್ಲಿದ್ದ ಟ್ರೈನಿ ವೈದ್ಯೆಯ ಮೇಲೆ ಅತ್ಯಾಚಾರ ಎಸಗಲಾಗಿತ್ತು. ಸುಮಾರು 36 ಗಂಟೆಗಳ ಕಾಲ ನಿರಂತರ ಕೆಲಸ ಮಾಡಿದ್ದ ವೈದ್ಯೆ ವಿಶ್ರಾಂತಿಗೆಂದು ತೆರಳಿದ್ದರು. ಆ ವೇಳೆ ಅತ್ಯಾಚಾರ ಮಾಡಿ, ಹಿಂಸೆ ಕೊಟ್ಟು ಹತ್ಯೆ ಮಾಡಲಾಗಿತ್ತು.
ಕ್ರೂರಿಯ ಈ ಕೃತ್ಯದ ವಿರುದ್ಧ ವೈದ್ಯರು ಪ್ರತಿಭಟನೆ ಮಾಡುತ್ತಿದ್ದಾರೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ನಟ ಧ್ರುವ ಸರ್ಜಾ ಕೂಡ ಆಕ್ರೋಶ ಹೊರಹಾಕಿದ್ದು, ಕ್ರೂರಿಗೆ ಶಿಕ್ಷೆ ಆಗಲೇಬೇಕು ಎಂದು ಆಗ್ರಹಿಸಿದ್ದಾರೆ.
ಮಾರ್ಟಿನ್ ಚಿತ್ರದ ಪ್ರಮೋಷನ್ನಲ್ಲಿರುವ ನಟ ಧ್ರುವ ಸರ್ಜಾ ಅವರು, ಅದರಿಂದ ಬಿಡುವು ಮಾಡಿಕೊಂಡು ವಿಡಿಯೋ ಮಾಡಿದ್ದಾರೆ. ನಮ್ಮದು ರಾಮಜನ್ಮಭೂಮಿ ಅಂತ ಕರೆಯುತ್ತೇವೆ. ಕೆಲವು ಕಿಡಿಗೇಡಿಗಳು ಮಾಡುತ್ತಿರುವ ಕೃತ್ಯಗಳಿಂದ ನಿಜವಾಗಲೂ ನಮ್ಮ ಭಾರತಕ್ಕೆ ಕೆಟ್ಟ ಹೆಸರು ಬರುತ್ತಿದೆ ಎಂದು ಕಿಡಿಕಾರಿದ್ದಾರೆ.
ಪ್ರತಿಯೊಬ್ಬರ ಮನೆಯಲ್ಲಿಯೂ ಗಂಡು ಮಕ್ಕಳಿಗೆ ಮೂರು ವಿಷಯಗಳನ್ನು ಹೇಳಿಕೊಡಬೇಕು. ಹೇಗೆ ಹೆಣ್ಣು ಮಕ್ಕಳನ್ನು ಪ್ರೊಟೆಕ್ಟ್ ಮಾಡಬೇಕು. ಹೇಗೇ ಸಪೋರ್ಟ್ ಮಾಡುವುದು. ಹೇಗೆ ರೆಸ್ಪೆಕ್ಟ್ ಕೊಡಬೇಕು ಎಂದು ಹೇಳಿಕೊಡಲೇಬೇಕು.
ಅತ್ಯಾಚಾರ ಮಾಡಿದವರನ್ನು ನಡು ರಸ್ತೆಯಲ್ಲಿ ನಿಂತು ಸುಟ್ಟಾಕಿದರೂ ಸಮಾಧಾನ ಆಗಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…