ದೇಶ- ವಿದೇಶ

ಕೋಲ್ಕತ್ತಾ ವೈದ್ಯರ ಮೇಲೆ ಅತ್ಯಾಚಾರ ಪ್ರಕರಣ: ಕ್ರೂರಿಗಳಿಗೆ ಶಿಕ್ಷೆ ಆಗಲೇಬೇಕು ಎಂದ ನಟ ಧ್ರುವ ಸರ್ಜಾ

ಬೆಂಗಳೂರು: ಕೋಲ್ಕತ್ತಾ ವೈದ್ಯರ ಮೇಲೆ ಅತ್ಯಾಚಾರವೆಸಗಿ ಬರ್ಬರವಾಗಿ ಹತ್ಯೆ ಮಾಡಿರುವ ಪ್ರಕರಣವನ್ನು ಸ್ಯಾಂಡಲ್‌ವುಡ್‌ ನಟ ಧ್ರುವಸರ್ಜಾ ಖಂಡಿಸಿದ್ದಾರೆ.

ಆಗಸ್ಟ್.‌9ರಂದು ರಾತ್ರಿ ಪಾಳಿಯಲ್ಲಿದ್ದ ಟ್ರೈನಿ ವೈದ್ಯೆಯ ಮೇಲೆ ಅತ್ಯಾಚಾರ ಎಸಗಲಾಗಿತ್ತು. ಸುಮಾರು 36 ಗಂಟೆಗಳ ಕಾಲ ನಿರಂತರ ಕೆಲಸ ಮಾಡಿದ್ದ ವೈದ್ಯೆ ವಿಶ್ರಾಂತಿಗೆಂದು ತೆರಳಿದ್ದರು. ಆ ವೇಳೆ ಅತ್ಯಾಚಾರ ಮಾಡಿ, ಹಿಂಸೆ ಕೊಟ್ಟು ಹತ್ಯೆ ಮಾಡಲಾಗಿತ್ತು.

ಕ್ರೂರಿಯ ಈ ಕೃತ್ಯದ ವಿರುದ್ಧ ವೈದ್ಯರು ಪ್ರತಿಭಟನೆ ಮಾಡುತ್ತಿದ್ದಾರೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ನಟ ಧ್ರುವ ಸರ್ಜಾ ಕೂಡ ಆಕ್ರೋಶ ಹೊರಹಾಕಿದ್ದು, ಕ್ರೂರಿಗೆ ಶಿಕ್ಷೆ ಆಗಲೇಬೇಕು ಎಂದು ಆಗ್ರಹಿಸಿದ್ದಾರೆ.

ಮಾರ್ಟಿನ್‌ ಚಿತ್ರದ ಪ್ರಮೋಷನ್‌ನಲ್ಲಿರುವ ನಟ ಧ್ರುವ ಸರ್ಜಾ ಅವರು, ಅದರಿಂದ ಬಿಡುವು ಮಾಡಿಕೊಂಡು ವಿಡಿಯೋ ಮಾಡಿದ್ದಾರೆ. ನಮ್ಮದು ರಾಮಜನ್ಮಭೂಮಿ ಅಂತ ಕರೆಯುತ್ತೇವೆ. ಕೆಲವು ಕಿಡಿಗೇಡಿಗಳು ಮಾಡುತ್ತಿರುವ ಕೃತ್ಯಗಳಿಂದ ನಿಜವಾಗಲೂ ನಮ್ಮ ಭಾರತಕ್ಕೆ ಕೆಟ್ಟ ಹೆಸರು ಬರುತ್ತಿದೆ ಎಂದು ಕಿಡಿಕಾರಿದ್ದಾರೆ.

ಪ್ರತಿಯೊಬ್ಬರ ಮನೆಯಲ್ಲಿಯೂ ಗಂಡು ಮಕ್ಕಳಿಗೆ ಮೂರು ವಿಷಯಗಳನ್ನು ಹೇಳಿಕೊಡಬೇಕು. ಹೇಗೆ ಹೆಣ್ಣು ಮಕ್ಕಳನ್ನು ಪ್ರೊಟೆಕ್ಟ್‌ ಮಾಡಬೇಕು. ಹೇಗೇ ಸಪೋರ್ಟ್‌ ಮಾಡುವುದು. ಹೇಗೆ ರೆಸ್ಪೆಕ್ಟ್‌ ಕೊಡಬೇಕು ಎಂದು ಹೇಳಿಕೊಡಲೇಬೇಕು.

ಅತ್ಯಾಚಾರ ಮಾಡಿದವರನ್ನು ನಡು ರಸ್ತೆಯಲ್ಲಿ ನಿಂತು ಸುಟ್ಟಾಕಿದರೂ ಸಮಾಧಾನ ಆಗಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

6 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

10 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

10 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

10 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

10 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

10 hours ago