ದಕ್ಷಿಣ ಕೊರಿಯಾ: ಇಲ್ಲಿನ ಮಯೂನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಬೆಳಿಗ್ಗೆ ಅಪಘಾತಕ್ಕೀಡಾದ ಜೆಜು ಏರ್ ವಿಮಾನ ದುರಂತದಲ್ಲಿ ಸಾವನ್ನಪ್ಪಿರುವವರ ಸಂಖ್ಯೆ 151ಕ್ಕೆ ಏರಿಕೆಯಾಗಿದೆ.
ವಿಮಾನವು ಲ್ಯಾಂಡ್ ಆಗುವ ವೇಳೆ ವೇಗವಾಗಿ ಬಂದು ಗೋಡೆಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಡಿಕ್ಕಿಯ ರಭಸಕ್ಕೆ ವಿಮಾನ ತಕ್ಷಣವೇ ಹೊತ್ತಿ ಉರಿದಿದೆ.
ಬ್ಯಾಂಕಾಕ್ನಿಂದ ಬಂದ ಈ ವಿಮಾನದಲ್ಲಿ 175 ಪ್ರಯಾಣಿಕರು ಹಾಗೂ 6 ಮಂದಿ ಸಿಬ್ಬಂದಿಗಳಿದ್ದರು. ದುರಂತ ನಡೆದ ಬಳಿಕ ಇದುವರೆಗೂ ಕೇವಲ ಇಬ್ಬರನ್ನೂ ರಕ್ಷಣೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನು ಈ ದುರಂತದ ಬೆನ್ನಲ್ಲೇ ಜೆಜು ಏರ್ ಸಂಸ್ಥೆ ಕ್ಷಮೆಯಾಚಿಸಿದ್ದು, ಮಯೂನ್ ವಿಮಾನ ದುರಂತದಲ್ಲಿ ಸಂಕಷ್ಟಕ್ಕೀಡಾದ ಪ್ರತಿಯೊಬ್ಬರಲ್ಲಿಯೂ ಕ್ಷಮೆ ಕೋರುತ್ತೇವೆ. ರಕ್ಷಣಾ ಕಾರ್ಯಾಚರಣೆಗೆ ಸಾಧ್ಯವಿರುವ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದೇವೆ ಎಂದು ದುರಂತದ ಬಗ್ಗೆ ವೆಬ್ಸೈಟ್ನಲ್ಲಿ ಪ್ರಕಟಿಸಿದೆ.
ಇನ್ನು ಸಂತ್ರಸ್ತರ ಕುಟುಂಬದವರಿಗೆ ನೆರವಾಗುವ ಸಲುವಾಗಿ ಜಿಯೋಲ್ಲನಮ್-ಡೊ ಪ್ರಾಂತ್ಯದಲ್ಲಿ ತಾತ್ಕಾಲಿಕವಾಗಿ ವಿಶೇಷ ರೈಲು ಕಾರ್ಯಾಚರಣೆ ಆರಂಭಿಸುವುದಾಗಿ ಕೊರಿಯಾ ರೈಲ್ವೆ ತಿಳಿಸಿದೆ.
ಇದರ ಜೊತೆಗೆ ಮುಯಾನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಾತ್ಕಾಲಿಕ ಶವಾಗಾರವನ್ನು ಸ್ಥಾಪಿಸಲಾಗಿದ್ದು, ಸದ್ಯ ಅಲ್ಲಿ 94 ಶವಗಳನ್ನು ಇರಿಸಲಾಗಿದೆ ಎಂದು ಯೋನ್ಹಾಪ್ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಮೈಸೂರು : ನಗರವನ್ನು ಡ್ರಗ್ಸ್ ಜಾಲಮುಕ್ತ ಮಾಡಬೇಕು ಎಂಬ ತೀರ್ಮಾನಕ್ಕೆ ಬಂದಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು…
ಮೈಸೂರು : ಸ್ವಚ್ಛತೆಗೆ ಸಂಬಂಧಿಸಿದಂತೆ ಮತ್ತೆ ಒಂದನೇ ಸ್ಥಾನ ಪಡೆಯುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ನಗರಪಾಲಿಕೆ ವತಿಯಿಂದ…
ಬೆಂಗಳೂರು : ಮಾರ್ಚ್ ಅಂತ್ಯದೊಳಗೆ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರ ಅಧಿಕಾರ ಅವಧಿ ಮುಕ್ತಾಯವಾಗಲಿರುವುದರಿಂದ ಗ್ರಾಮ ಪಂಚಾಯಿತಿ ಚುನಾವಣೆಗೆ ಸಿದ್ಧತೆ…
19 ಬೈಕ್, ಚಿನ್ನಾಭರಣ ಸೇರಿದಂತೆ 34 ಲಕ್ಷ ರೂ.ಮೌಲ್ಯದ ವಸ್ತುಗಳು ವಶ : ಎಸ್ಪಿ ಶೋಭಾರಾಣಿ ಮಂಡ್ಯ : ಮಳವಳ್ಳಿಯಲ್ಲಿ…
ಮಂಡ್ಯ : ನಗರದ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯುತ್ತ) ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ದಾಖಲೆ ನಿರ್ಮಿಸಿದ್ದು 2025-26ನೇ ಸಾಲಿನ ವಿವಿಧ…
ಬೆಂಗಳೂರು : ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು…