ದಕ್ಷಿಣ ಕೊರಿಯಾ: ಇಲ್ಲಿನ ಮಯೂನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಬೆಳಿಗ್ಗೆ ಅಪಘಾತಕ್ಕೀಡಾದ ಜೆಜು ಏರ್ ವಿಮಾನ ದುರಂತದಲ್ಲಿ ಸಾವನ್ನಪ್ಪಿರುವವರ ಸಂಖ್ಯೆ 151ಕ್ಕೆ ಏರಿಕೆಯಾಗಿದೆ.
ವಿಮಾನವು ಲ್ಯಾಂಡ್ ಆಗುವ ವೇಳೆ ವೇಗವಾಗಿ ಬಂದು ಗೋಡೆಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಡಿಕ್ಕಿಯ ರಭಸಕ್ಕೆ ವಿಮಾನ ತಕ್ಷಣವೇ ಹೊತ್ತಿ ಉರಿದಿದೆ.
ಬ್ಯಾಂಕಾಕ್ನಿಂದ ಬಂದ ಈ ವಿಮಾನದಲ್ಲಿ 175 ಪ್ರಯಾಣಿಕರು ಹಾಗೂ 6 ಮಂದಿ ಸಿಬ್ಬಂದಿಗಳಿದ್ದರು. ದುರಂತ ನಡೆದ ಬಳಿಕ ಇದುವರೆಗೂ ಕೇವಲ ಇಬ್ಬರನ್ನೂ ರಕ್ಷಣೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನು ಈ ದುರಂತದ ಬೆನ್ನಲ್ಲೇ ಜೆಜು ಏರ್ ಸಂಸ್ಥೆ ಕ್ಷಮೆಯಾಚಿಸಿದ್ದು, ಮಯೂನ್ ವಿಮಾನ ದುರಂತದಲ್ಲಿ ಸಂಕಷ್ಟಕ್ಕೀಡಾದ ಪ್ರತಿಯೊಬ್ಬರಲ್ಲಿಯೂ ಕ್ಷಮೆ ಕೋರುತ್ತೇವೆ. ರಕ್ಷಣಾ ಕಾರ್ಯಾಚರಣೆಗೆ ಸಾಧ್ಯವಿರುವ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದೇವೆ ಎಂದು ದುರಂತದ ಬಗ್ಗೆ ವೆಬ್ಸೈಟ್ನಲ್ಲಿ ಪ್ರಕಟಿಸಿದೆ.
ಇನ್ನು ಸಂತ್ರಸ್ತರ ಕುಟುಂಬದವರಿಗೆ ನೆರವಾಗುವ ಸಲುವಾಗಿ ಜಿಯೋಲ್ಲನಮ್-ಡೊ ಪ್ರಾಂತ್ಯದಲ್ಲಿ ತಾತ್ಕಾಲಿಕವಾಗಿ ವಿಶೇಷ ರೈಲು ಕಾರ್ಯಾಚರಣೆ ಆರಂಭಿಸುವುದಾಗಿ ಕೊರಿಯಾ ರೈಲ್ವೆ ತಿಳಿಸಿದೆ.
ಇದರ ಜೊತೆಗೆ ಮುಯಾನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಾತ್ಕಾಲಿಕ ಶವಾಗಾರವನ್ನು ಸ್ಥಾಪಿಸಲಾಗಿದ್ದು, ಸದ್ಯ ಅಲ್ಲಿ 94 ಶವಗಳನ್ನು ಇರಿಸಲಾಗಿದೆ ಎಂದು ಯೋನ್ಹಾಪ್ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…
ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…
ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…
ಬೆಂಗಳೂರು: ಇದೇ ತಿಂಗಳ 24 ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್ಗಳ ಪ್ರವೇಶ್ ಪರೀಕ್ಷೆಯನ್ನು ಜೂನ್.14ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ…
ಹನೂರು: ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿರುವ ಮಾರ್ಟಳ್ಳಿಯಲ್ಲಿ ಸದ್ಯ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಗ್ರಾಮದ…