ದಕ್ಷಿಣ ಕೊರಿಯಾ: ಇಲ್ಲಿನ ಮಯೂನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಬೆಳಿಗ್ಗೆ ಅಪಘಾತಕ್ಕೀಡಾದ ಜೆಜು ಏರ್ ವಿಮಾನ ದುರಂತದಲ್ಲಿ ಸಾವನ್ನಪ್ಪಿರುವವರ ಸಂಖ್ಯೆ 151ಕ್ಕೆ ಏರಿಕೆಯಾಗಿದೆ.
ವಿಮಾನವು ಲ್ಯಾಂಡ್ ಆಗುವ ವೇಳೆ ವೇಗವಾಗಿ ಬಂದು ಗೋಡೆಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಡಿಕ್ಕಿಯ ರಭಸಕ್ಕೆ ವಿಮಾನ ತಕ್ಷಣವೇ ಹೊತ್ತಿ ಉರಿದಿದೆ.
ಬ್ಯಾಂಕಾಕ್ನಿಂದ ಬಂದ ಈ ವಿಮಾನದಲ್ಲಿ 175 ಪ್ರಯಾಣಿಕರು ಹಾಗೂ 6 ಮಂದಿ ಸಿಬ್ಬಂದಿಗಳಿದ್ದರು. ದುರಂತ ನಡೆದ ಬಳಿಕ ಇದುವರೆಗೂ ಕೇವಲ ಇಬ್ಬರನ್ನೂ ರಕ್ಷಣೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನು ಈ ದುರಂತದ ಬೆನ್ನಲ್ಲೇ ಜೆಜು ಏರ್ ಸಂಸ್ಥೆ ಕ್ಷಮೆಯಾಚಿಸಿದ್ದು, ಮಯೂನ್ ವಿಮಾನ ದುರಂತದಲ್ಲಿ ಸಂಕಷ್ಟಕ್ಕೀಡಾದ ಪ್ರತಿಯೊಬ್ಬರಲ್ಲಿಯೂ ಕ್ಷಮೆ ಕೋರುತ್ತೇವೆ. ರಕ್ಷಣಾ ಕಾರ್ಯಾಚರಣೆಗೆ ಸಾಧ್ಯವಿರುವ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದೇವೆ ಎಂದು ದುರಂತದ ಬಗ್ಗೆ ವೆಬ್ಸೈಟ್ನಲ್ಲಿ ಪ್ರಕಟಿಸಿದೆ.
ಇನ್ನು ಸಂತ್ರಸ್ತರ ಕುಟುಂಬದವರಿಗೆ ನೆರವಾಗುವ ಸಲುವಾಗಿ ಜಿಯೋಲ್ಲನಮ್-ಡೊ ಪ್ರಾಂತ್ಯದಲ್ಲಿ ತಾತ್ಕಾಲಿಕವಾಗಿ ವಿಶೇಷ ರೈಲು ಕಾರ್ಯಾಚರಣೆ ಆರಂಭಿಸುವುದಾಗಿ ಕೊರಿಯಾ ರೈಲ್ವೆ ತಿಳಿಸಿದೆ.
ಇದರ ಜೊತೆಗೆ ಮುಯಾನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಾತ್ಕಾಲಿಕ ಶವಾಗಾರವನ್ನು ಸ್ಥಾಪಿಸಲಾಗಿದ್ದು, ಸದ್ಯ ಅಲ್ಲಿ 94 ಶವಗಳನ್ನು ಇರಿಸಲಾಗಿದೆ ಎಂದು ಯೋನ್ಹಾಪ್ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…