ರಾಷ್ಟ್ರೀಯ ಭದ್ರೆತೆಯಲ್ಲಿ ಮೋದಿ ದೃಢ ಹೆಜ್ಜೆ ಇಟ್ಟಿದ್ದಾರೆ : ಕುಮಾರಸ್ವಾಮಿ

ಬೆಂಗಳೂರು: ರಾಷ್ಟ್ರೀಯ ಭದ್ರತೆ, ರಾಷ್ಟ್ರ ರಕ್ಷಣೆ ವಿಚಾರದಲ್ಲಿ ನರೇಂದ್ರ ಮೋದಿ ಅವರ ಸರಕಾರವು ದೃಢ ಹೆಜ್ಜೆಗಳನ್ನು ಇಟ್ಟಿದ್ದು, ನಮ್ಮ ಮೇಲೆ ದಾಳಿ ನಡೆಸಿದ ರಾಷ್ಟಕ್ಕೆ ನಮ್ಮ ಸೇನಾಪಡೆಗಳು ತಕ್ಕ ಪಾಠ ಕಳಿಸಿವೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ದೆಹಲಿಗೆ ಹೊರಡುವ ಮುನ್ನ ಬೆಂಗಳೂರಿನ ತಮ್ಮ ನಿವಾಸದ ಬಳಿ ಸೋಮವಾರ ಮಾಧ್ಯಮಗಳ ಜತೆ ಮಾತನಾಡಿದರು.

ಪಹಲ್ಗಾಮ್ ನಲ್ಲಿ ಪಾಕಿಸ್ತಾನದ ಭಯೋತ್ಪಾದಕರು ನಮ್ಮ ದೇಶದ ಪ್ರವಾಸಿಗರ ಮೇಲೆ ಪೈಶಾಚಿಕ ದಾಳಿ ನಡೆಸಿದ್ದರು. ಅದಕ್ಕೆ ಪ್ರತೀಕಾರವಾಗಿ ಭಾರತೀಯ ಸೇನಾಪಡೆಗಳು ಆ ದೇಶದಲ್ಲಿರುವ ಭಯೋತ್ಪಾದಕ ಶಿಬಿರಗಳನ್ನು ನಾಶ ಮಾಡಿವೆ. ನೆರೆ ದೇಶದ ಸೇನೆಯು ಉಗ್ರ ಪೋಷಣೆ ಮಾಡುತ್ತಾ ಭಾರತದ ಮೇಲೆ ದಾಳಿ ನಡೆಸಿತ್ತು. ಅದಕ್ಕೆ ಭಾರತ ಪ್ರಬಲ ತಿರುಗೇಟು ನೀಡಿದೆ ಎಂದು ಸಚಿವರು ಹೇಳಿದರು.

ನರೇಂದ್ರ ಮೋದಿ ಅವರ ಧೃಢ ನಾಯಕತ್ವ ಹಾಗೂ ನಮ್ಮ ಹೆಮ್ಮೆಯ ಸೇನಾಪಡೆಗಳ ಶಕ್ತಿಯ ಮುಂದೆ ಪಾಕಿಸ್ತಾನ ಮಂಡಿಯೂರಿದೆ. ಭಾರತದ ಎಲ್ಲ ಕಡೆ ಮೇಲುಗೈ ಸಾಧಿಸಿದೆ. ಪಾಕಿಸ್ಥಾನಕ್ಕೆ ನಡುಕ ಉಂಟಾಗಿತ್ತು. ಉಗ್ರರ ಚಟುವಟಿಕೆಗಳಿಗೆ ಇತಿಶ್ರೀ ಹಾಡುವ ದೃಷ್ಟಿಯಿಂದ ದೇಶದ ಪ್ರಧಾನಿ ಅವರು ಅನೇಕ ಕ್ರಮಗಳನ್ನು ತೆಗೆದುಕೊಂಡದ್ದರು ಹಾಗೂ ಉಗ್ರರ ಶಿಬಿರಗಳ ಮೇಲೆ ನಮ್ಮ ಸೈನಿಕರು ದಾಳಿ ಮಾಡಿದ್ದರು ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಪಾಕಿಸ್ತಾನ ನಾನಾ ಸರ್ಕಸ್ ಮಾಡಿದೆ
ಅಮೆರಿಕದ ಮಧ್ಯಸ್ಥಿಕೆಯಲ್ಲಿ ಕದನ ವಿರಾಮ ಅನ್ನುವುದು ಸರಿಯಲ್ಲ. ಜಾಗತಿಕ ಮಟ್ಟದಲ್ಲಿ ತನ್ನ ಮುಖ ಉಳಿಸಿಕೊಳ್ಳಲು ಪಾಕಿಸ್ತಾನ ನಾನಾ ಸರ್ಕಸ್ ಮಾಡಿದೆ ಎಂದ ಕೇಂದ್ರ ಸಚಿವರು; ಭಾರತ ಕಾಶ್ಮೀರ ವಿಷಯದಲ್ಲಿ ಮೂರನೇ ರಾಷ್ಟ್ರದ ಮಧ್ಯಸ್ಥಿಕೆಗೆ ಒಪ್ಪಿಲ್ಲ. ಅದಕ್ಕೆ ಅವಕಾಶವನ್ನು ಕೂಡ ಕೊಟ್ಟಿಲ್ಲ. ಪ್ರಧಾನಿಗಳು ಕೂಡ ಇದೇ ಮಾತನ್ನು ಸ್ಪಷ್ಟವಾಗಿ ಹೇಳಿದ್ದಾರೆ. ರಾಷ್ಟ್ರದ ಹಿತಾಸಕ್ತಿ ವಿಷಯದಲ್ಲಿ ಮೋದಿ ಅವರು ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ ಎಂದರು.

ಉಗ್ರ ಪೋಷಕ ಪಾಕಿಸ್ತಾನವನ್ನು ಮಟ್ಟ ಹಾಕುವ ದೃಷ್ಟಿಯಿಂದ ಪೂರ್ಣ ಪ್ರಮಾಣದ ಯುದ್ದ ಆಗಲೇಬೇಕಿತ್ತು ಎಂಬ ನಿಲುವು ಒಂದು ಕಡೆ ಇದೆ. ಮತ್ತೊಂದು ಕಡೆ ರಷ್ಯಾ, ಉಕ್ರೇನ್ ಯುದ್ಧದಿಂದ ಇವತ್ತು ಯಾವ ಸ್ಥಿತಿ ಉಂಟಾಗಿದೆ ಎನ್ನುವ ವಾದವೂ ಇನ್ನೊಂದೆಡೆ. ಈ ದೃಷ್ಟಿಯಲ್ಲಿ ಕೇಂದ್ರ ಸರ್ಕಾರ ಆಲೋಚನೆ ಮಾಡುತ್ತಿದೆ. ಆದರೆ, ಈಗಲಾದರೂ ಪಾಕಿಸ್ತಾನ ಎಚ್ಚೆತ್ತುಕೊಳ್ಳದಿದ್ದರೆ ಅದು ಮುಂದಿನ ದಿನಗಳಲ್ಲಿ ಸಂಪೂರ್ಣವಾಗಿ ನಾಶವಾಗಲಿದೆ ಎಂದು ಅವರು ಎಚ್ಚರಿಕೆ ಕೊಟ್ಟರು.

ಮೋದಿ ನಿರ್ಧಾರಗಳನ್ನು ಬೆಂಬಲಿಸಬೇಕು
ಪ್ರಧಾನಿ ನರೇಂದ್ರ ಮೋದಿ ಅವರ ನಿರ್ಧಾರಗಳನ್ನು ಎಲ್ಲರೂ ಬೆಂಬಲಿಸಬೇಕು. ಪಹಲ್ಗಾಮ್ ದಾಳಿ ನಡೆದಾಗಿನಿಂದ ಪ್ರಧಾನಿಗಳು ಯಾವ ರೀತಿ ಕೆಲಸ ಮಾಡಿದ್ದಾರೆ ಎನ್ನುವುದನ್ನು ಇಡೀ ದೇಶವೇ ನೋಡಿದೆ. ಪ್ರಧಾನಿಗಳು, ರಕ್ಷಣಾ ಸಚಿವರು ಅನೇಕ ಸಭೆಗಳನ್ನು ನಡೆಸಿದ್ದಾರೆ. ದೇಶದ ಹಿತದೃಷ್ಟಿಯಿಂದ ಅನೇಕ ದಿಟ್ಟ ಕ್ರಮಗಳನ್ನು ಕೈಗೊಳ್ಳಲಾಗಿದೆ. ಉಗ್ರ ಚಟುವಟಿಕೆಗಳಿಗೆ ಅಂತಿಮ ಇತಿಶ್ರೀ ಹಾಡಬೇಕು ಎಂಬ ಹಿನ್ನೆಲೆಯಲ್ಲಿ ನೆರೆ ರಾಷ್ಟ್ರದ ವಿರುದ್ಧ ಮೋದಿ ಅವರು ಕೆಚ್ಚೆದೆಯ ತೀರ್ಮಾನಗಳನ್ನು ಮಾಡಿದ್ದಾರೆ. ನಮ್ಮ ದೇಶದ ಪ್ರತಿಷ್ಠೆಗೆ ಧಕ್ಕೆ ಬಾರದಂತೆ ಪ್ರಧಾನ ಮಂತ್ರಿಗಳು ಹಾಗೂ ಸೇನಾಪಡೆಗಳು ಕೈಗೊಂಡಿರುವ ನಿರ್ಧಾರಗಳನ್ನು ನಾವು ನೋಡಿದ್ದೇವೆ. ಉಗ್ರರಿಗೆ ಶಿಕ್ಷೆ ಕೊಡಬೇಕು ಎಂಬ ದೃಷ್ಟಿಯಿಂದ ನಮ್ಮ ಸೈನಿಕರು ದೇಶಕ್ಕೆ ಗೌರವ ತರುವ ಕೆಲಸ ಮಾಡಿದ್ದಾರೆ. ಕೇವಲ ಎರಡೇ ದಿನಗಳಲ್ಲಿ ಪಾಕಿಸ್ತಾನ ಶರಣಾಗುವಂತೆ ಸೇನಾಪಡೆಗಳು ತಮ್ಮ ಪರಾಕ್ರಮ ಮೆರೆದಿವೆ ಎಂದು ಕೇಂದ್ರ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.

ಆಂದೋಲನ ಡೆಸ್ಕ್

Recent Posts

911 ಅಕ್ರಮ ವಿದೇಶಿ ನುಸುಳುಕೋರರು ಪತ್ತೆ : ಗೃಹ ಸಚಿವ ಖರ್ಗೆ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…

6 hours ago

ಕಾವೇರಿ ವನ್ಯಧಾಮದಲ್ಲಿ 8 ಕಳ್ಳಬೇಟೆ ಶಿಬಿರ ಧ್ವಂಸ : ಎಫ್‌ಐಆರ್ ದಾಖಲು, ತನಿಖೆ ಚುರುಕು

ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…

6 hours ago

1984 ಸಿಖ್‌ ವಿರೋಧಿ ದಂಗೆ ಪ್ರಕರಣ; ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಸಜ್ಜನ್‌ ಕುಮಾರ್‌ ನಿಧನ

ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…

8 hours ago

ನಾರಾಯಣಸ್ವಾಮಿಗೆ ಕಮಾಂಡೆಂಟ್‌ ಬೆಳ್ಳಿ ಪದಕ

ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…

8 hours ago

ಹನೂರು ಎನ್‌ಕೌಂಟರ್‌ ಬೆನ್ನಲ್ಲೇ ಕಳ್ಳಬೇಟೆ ಕಡಿವಾಣಕ್ಕೆ ಸರ್ಕಾರದ ಚಿಂತನೆ

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್‌ಕೌಂಟರ್‌ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…

12 hours ago

ಟೋಲ್ ಬಳಿ ಸೈನ್ ಬೋರ್ಡ್‌ಗೆ ಖಾಸಗಿ ಬಸ್ ಡಿಕ್ಕಿ; ಇಬ್ಬರು ದುರ್ಮರಣ, 20ಕ್ಕೂ ಹೆಚ್ಚು ಜನರಿಗೆ ಗಾಯ

ಮಂಡ್ಯ: ಟೋಲ್‌ ಬಳಿಯ ಸೈನ್ ಬೋರ್ಡ್‌ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ…

13 hours ago