ದೇಶ- ವಿದೇಶ

ಕರ್ನೂಲ್‌ ಖಾಸಗಿ ಬಸ್‌ ಅಗ್ನಿ ದುರಂತ ಪ್ರಕರಣ: ನಕಲಿ ಅಂಕಪಟ್ಟಿ ನೀಡಿ ಡಿಎಲ್‌ ಪಡೆದಿದ್ದ ಚಾಲಕ ಅರೆಸ್ಟ್‌

ಆಂಧ್ರಪ್ರದೇಶ: ಕರ್ನೂಲ್‌ ಖಾಸಗಿ ಬಸ್‌ ಅಗ್ನಿ ದುರಂತದಲ್ಲಿ 20 ಮಂದಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಚಾಲಕ ಲಕ್ಷ್ಮಯ್ಯ ಪಲ್ಯಾಡ್‌ ನಗರದ ನಿವಾಸಿ ಎಂದು ಗುರುತಿಸಲಾಗಿದೆ. ಈತ ನಕಲಿ ಅಂಕಪಟ್ಟಿ ನೀಡಿ ಡ್ರೈವಿಂಗ್‌ ಲೈಸೆನ್ಸ್‌ ಪಡೆದಿದ್ದನು ಎನ್ನಲಾಗಿದೆ.

10ನೇ ತರಗತಿ ಪಾಸ್‌ ಆಗಿರುವ ನಕಲಿ ಅಂಕಪಟ್ಟಿ ಸಲ್ಲಿಸಿ ಡಿಎಲ್‌ ಪಡೆದಿದ್ದನು ಎಂಬ ವಿಚಾರ ತನಿಖೆಯಲ್ಲಿ ಬಯಲಾಗಿದೆ. ಬಸ್‌ ಚಾಲಕನನ್ನು ಬಂಧಿಸಿರುವ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.

ಇದನ್ನು ಓದಿ: ಕರ್ನೂಲ್‌ ಬಸ್‌ ದುರಂತ : 11 ಜನರ ಗುರುತು ಪತ್ತೆ..

ಪ್ರಕರಣದ ಹಿನ್ನೆಲೆ: ಕರ್ನೂಲ್‌ ಬಳಿ ಬಸ್‌ ಹಾಗೂ ಬೈಕ್‌ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬಸ್‌ ಹೊತ್ತಿ ಉರಿದಿದ್ದು, 19 ಪ್ರಯಾಣಿಕರು ಸಜೀವ ದಹನವಾಗಿದ್ದರು. 12 ಜನರು ಗಂಭೀರ ಗಾಯಗೊಂಡಿದ್ದಾರೆ.

ದುರಂತದಲ್ಲಿ ಮೃತಪಟ್ಟಿರುವ ಕುಟುಂಬಗಳಿಗೆ ಆಂಧ್ರಪ್ರದೇಶ ಸಾರಿಗೆ ಸಂಸ್ಥೆ ತಲಾ 5 ಲಕ್ಷ ಪರಿಹಾರ ಘೋಷಣೆ ಮಾಡಿದೆ. ಗಾಯಾಳುಗಳಿಗೆ ತಲಾ 2 ಲಕ್ಷ ಪರಿಹಾರ ಘೋಷಣೆ ಮಾಡಿದೆ.

ಆಂದೋಲನ ಡೆಸ್ಕ್

Recent Posts

ಮೇ.20ರಿಂದ ಸಾರಿಗೆ ಮುಷ್ಕರ : ಪರ್ಯಾಯ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸೂಚನೆ

ಮೈಸೂರು : ಕೆಎಸ್‌ಆರ್‌ಟಿಸಿ ನೌಕರರು ಮೇ 20ರಿಂದ ಅನಿಧಿಷ್ಟಾವಧಿಯ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆಗೆ…

8 hours ago

ಸರ್ಕಾರದ ಸಂಧಾನ ಸಭೆ ವಿಫಲ ; ಪ್ರತಿಭಟನೆ ನಿಶ್ಚಿತ

ಬೆಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ಸಂಘಟನೆಗಳು ಕರೆ ನೀಡಿರುವ ಬಸ್ ಬಂದ್ ಆಗುವುದು ನಿಶ್ಚಿತವಾಗಿದೆ. ಸೋಮವಾರ…

9 hours ago

ರಷ್ಯಾದಿಂದ ತೈಲ ಆಮದು ಮುಂದುವರಿಸಿದ ಭಾರತ

ಹೊಸದಿಲ್ಲಿ: ಅಮೆರಿಕದ ನಿರ್ಬಂಧಗಳ ವಿನಾಯಿತಿಯ ಸ್ಥಿತಿಯನ್ನು ಲೆಕ್ಕಿಸದೆ ಭಾರತವು ರಷ್ಯಾದ ಕಚ್ಚಾ ತೈಲ ಆಮದು ಮಾಡಿಕೊಳ್ಳುವುದನ್ನು ಮುಂದುವರಿಸುತ್ತದೆ ಎಂದು ಪೆಟ್ರೋಲಿಯಂ…

10 hours ago

ವಸ್ತುಸಂಗ್ರಹಾಲಯ ದಿನಾಚರಣೆ : ಗಮನಸೆಳೆದ ಸ್ಮಾರಕಗಳು ಮತ್ತು ಪ್ರಾಚ್ಯವಸ್ತುಗಳು

ಮೈಸೂರು : ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹಾಗೂ ಇಂದಿರಾಗಾಂಧಿ ರಾಷ್ಟ್ರೀಯ ಮಾನವ ಸಂಗ್ರಹಾಲಯದ ಸಹಯೋಗದಲ್ಲಿ ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ…

10 hours ago

ಕೃಷಿ ಕ್ಷೇತ್ರ ಕುಸಿತದ ನಡುವೆಯೂ ಕೋಟಿ ಕೋಟಿ ವೆಚ್ಚದಲ್ಲಿ ಕಾಂಗ್ರೆಸ್ ಸಮಾವೇಶ‌ : ಅಶೋಕ ಆರೋಪ

ಬೆಂಗಳೂರು : ರಾಜ್ಯದಲ್ಲಿ ರೈತರು ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶ…

11 hours ago

ವನ್ಯಜೀವಿಗಳಿಂದ ನಿರ್ದಿಷ್ಟ ಅಂತರ ಕಾಯ್ದುಕೊಳ್ಳಲು ಆದೇಶ

ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಈಶ್ವರ ಖಂಡ್ವೆ ಸಂತಾಪ ಬೆಂಗಳೂರು : ಕೊಡಗು ಜಿಲ್ಲೆ ದುಬಾರೆ…

13 hours ago