ಆಂಧ್ರಪ್ರದೇಶ: ಕರ್ನೂಲ್ ಖಾಸಗಿ ಬಸ್ ಅಗ್ನಿ ದುರಂತದಲ್ಲಿ 20 ಮಂದಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಚಾಲಕ ಲಕ್ಷ್ಮಯ್ಯ ಪಲ್ಯಾಡ್ ನಗರದ ನಿವಾಸಿ ಎಂದು ಗುರುತಿಸಲಾಗಿದೆ. ಈತ ನಕಲಿ ಅಂಕಪಟ್ಟಿ ನೀಡಿ ಡ್ರೈವಿಂಗ್ ಲೈಸೆನ್ಸ್ ಪಡೆದಿದ್ದನು ಎನ್ನಲಾಗಿದೆ.
10ನೇ ತರಗತಿ ಪಾಸ್ ಆಗಿರುವ ನಕಲಿ ಅಂಕಪಟ್ಟಿ ಸಲ್ಲಿಸಿ ಡಿಎಲ್ ಪಡೆದಿದ್ದನು ಎಂಬ ವಿಚಾರ ತನಿಖೆಯಲ್ಲಿ ಬಯಲಾಗಿದೆ. ಬಸ್ ಚಾಲಕನನ್ನು ಬಂಧಿಸಿರುವ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.
ಇದನ್ನು ಓದಿ: ಕರ್ನೂಲ್ ಬಸ್ ದುರಂತ : 11 ಜನರ ಗುರುತು ಪತ್ತೆ..
ಪ್ರಕರಣದ ಹಿನ್ನೆಲೆ: ಕರ್ನೂಲ್ ಬಳಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬಸ್ ಹೊತ್ತಿ ಉರಿದಿದ್ದು, 19 ಪ್ರಯಾಣಿಕರು ಸಜೀವ ದಹನವಾಗಿದ್ದರು. 12 ಜನರು ಗಂಭೀರ ಗಾಯಗೊಂಡಿದ್ದಾರೆ.
ದುರಂತದಲ್ಲಿ ಮೃತಪಟ್ಟಿರುವ ಕುಟುಂಬಗಳಿಗೆ ಆಂಧ್ರಪ್ರದೇಶ ಸಾರಿಗೆ ಸಂಸ್ಥೆ ತಲಾ 5 ಲಕ್ಷ ಪರಿಹಾರ ಘೋಷಣೆ ಮಾಡಿದೆ. ಗಾಯಾಳುಗಳಿಗೆ ತಲಾ 2 ಲಕ್ಷ ಪರಿಹಾರ ಘೋಷಣೆ ಮಾಡಿದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್ಕೌಂಟರ್ ಘಟನೆಯ…
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ಕಾಂಗ್ರೆಸ್ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…
ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…